ಬಾಲಕರ ಪ್ರಾಣ ಉಳಿಸಿದರು…
Team Udayavani, Nov 25, 2018, 6:35 AM IST
ಮಂಡ್ಯ: ಕನಗನಮರಡಿ ಸಮೀಪ ವಿಶ್ವೇಶ್ವರಯ್ಯ ನಾಲೆಗೆ ಬಸ್ ಉರುಳಿದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಎಂಟು ಮಂದಿ ಯುವಕರ ತಂಡ ರಭಸದಿಂದ ಹರಿಯುತ್ತಿದ್ದ ನೀರನ್ನೂ ಲೆಕ್ಕಿಸದೆ ರಕ್ಷಣಾ ಕಾರ್ಯಕ್ಕಿಳಿಯಿತು. ಕನಗನಮರಡಿಯ ಚಿನ್ನಿರಾಜು,ಅಭಿ, ಮೂರ್ತಿ, ಮಂಜು, ಚೇತನ್, ರವಿಕಿರಣ್,ಚಂದ್ರಕಾಂತ್, ಅಂಗಡಿ ರಾಜು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ರಕ್ಷಣಾ ಕಾರ್ಯದಲ್ಲಿ ತೊಡಗಿ ಇಬ್ಬರು ಮಕ್ಕಳನ್ನು ಪ್ರಾಣಾಪಾಯದಿಂದ ಪಾರು ಮಾಡಿದರು.
ಬಸ್ ನಾಲೆಗೆ ಉರುಳುತ್ತಿದ್ದಂತೆ ಪ್ರಯಾಣಿಕರ ಚೀರಾಟ ಕಂಡು ನಾಲೆಯ ಅಕ್ಕಪಕ್ಕದ ಜಮೀನುಗಳಲ್ಲಿ ಕೆಲಸ ಮಾಡುತ್ತಿದ್ದ ಯುವಕರು ಸ್ಥಳಕ್ಕೆ ಓಡಿ ಬಂದರು.
ಅದೇ ಸಮಯಕ್ಕೆ ಬಾಲಕರಿಬ್ಬರು ಬಸ್ಸಿನ ಕಿಟಕಿ ಗಾಜು ಒಡೆದು ಮೇಲೆ ಬರುತ್ತಿದ್ದಂತೆ ಹಗ್ಗ ಕೊಟ್ಟು ನಾಲೆಯ ಮೇಲಕ್ಕೆ ಎಳೆದುಕೊಂಡು ರಕ್ಷಣೆ ಮಾಡಿದರು.
ನಂತರ, ಬಸ್ನ ಒಳಗೆ ಸಿಲುಕಿದ್ದವರನ್ನು ಎಳೆಯಲು ಮುಂದಾದರು. ಈ ವೇಳೆ, ಕೆಲವರು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ತಕ್ಷಣ ಸ್ಥಳಕ್ಕೆ ಆಗಮಿಸುವಂತೆ ಮನವಿ ಮಾಡಿದರು.
ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸುವ ಮುನ್ನವೇ ಬಸ್ನಲ್ಲಿ ಸಿಲುಕಿ ಮೃತಪಟ್ಟಿದ್ದವರ ಹಲವರ ಮೃತದೇಹಗಳನ್ನು ಹೊರ ತೆಗೆದಿದ್ದರು. ಈ ನಡುವೆ, ಕೆಲ ಶವಗಳು ನಾಲೆಯಲ್ಲಿ ಕೊಚ್ಚಿ ಹೋಗುತ್ತಿರುವುದನ್ನು ಕಂಡು, ಅವುಗಳನ್ನು ನಾಲೆಯಿಂದ ಮೇಲೆ ತೆಗೆದರು. ಅಷ್ಟರಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದರು. ಈಜುಗಾರರು, ಸ್ಥಳೀಯರ ನೆರವಿನಿಂದ ನೀರಿನ ರಭಸಕ್ಕೆ ಬಸ್ಸು ಮುಂದೆ ಸಾಗದಂತೆ ಕಂಬಿಗಳಿಗೆ ಹಗ್ಗದಿಂದ ಬಿಗಿದು ಎಳೆದು ನಿಲ್ಲಿಸಿದರು. ನಂತರ, ಬಸ್ಸಿನ ಕಿಟಕಿ ಹಾಗೂ ಬಾಗಿಲುಗಳಿಂದ ಪ್ರಯಾಣಿಕರ ಒಂದೊಂದೇ ಶವಗಳನ್ನು ಹೊರಕ್ಕೆ ತೆಗೆದರು. ಬಸ್ಸಿನಿಂದ ಹೊರ ತೆಗೆದ ಶವಗಳನ್ನು ಹಗ್ಗದ ಸಹಾಯದಿಂದ ನಾಲೆಯ ದಡಕ್ಕೆ ಸಾಗಿಸಿದರು. ವಿಷಯ ತಿಳಿದು ನೀರಾವರಿ ಇಲಾಖೆಯ ಅಧಿಕಾರಿಗಳು ಶವಗಳನ್ನು ಮೇಲೆತ್ತಲು ಅನುಕೂಲವಾಗುವಂತೆ ನಾಲೆಯಲ್ಲಿ ಹರಿಯುತ್ತಿದ್ದ ನೀರಿನ ಪ್ರಮಾಣವನ್ನು ಕಡಿಮೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!