ಕಲ್ಲೂರು ಬಳಿ ಖಾಸಗಿ ಶಾಲಾ ವಾಹನ ಪಲ್ಟಿ
Team Udayavani, Nov 28, 2018, 6:00 AM IST
ಗದಗ/ಮುಳಗುಂದ: ಸ್ಟೇರಿಂಗ್ ತುಂಡಾದ ಪರಿಣಾಮ ಖಾಸಗಿ ಶಾಲಾ ವಾಹನವೊಂದು ಪಲ್ಟಿಯಾದ ಘಟನೆ ಸಮೀಪದ ಕಲ್ಲೂರ
ಗ್ರಾಮದ ಹೊರವಲಯದಲ್ಲಿ ಜರುಗಿದೆ. ತಾಲೂಕಿನ ಹೊಸಳ್ಳಿ ಬೂದೀಶ್ವರ ವಿದ್ಯಾ ಪೀಠಕ್ಕೆ ಸೇರಿದ ಬಸ್ ಇದಾಗಿದ್ದು, ಎಂದಿನಂತೆ
ಕಲ್ಲೂರು, ಚಿಂಚಲಿ, ಅಂತೂರ-ಬೆಂತೂರ ಗ್ರಾಮಗಳಿಂದ ಶಾಲಾ ವಾಹನದಲ್ಲಿ ಮಕ್ಕಳನ್ನು ಕರೆತರಲಾಗುತ್ತಿತ್ತು. ಕಲ್ಲೂರ ಗ್ರಾಮದಿಂದ
ಶಾಲಾ ಮಕ್ಕಳನ್ನು ಹತ್ತಿಸಿಕೊಂಡು ಹೊರಟ ಸಂದರ್ಭದಲ್ಲಿ ಸ್ಟೇರಿಂಗ್ ಕಟ್ ಆಗಿದ್ದರಿಂದ ಎಚ್ಚೆತ್ತುಕೊಂಡ ಚಾಲಕ ಮುಂಜಾಗ್ರತಾ
ಕ್ರಮವಾಗಿ ಬಸ್ನ ವೇಗವನ್ನು ನಿಯಂತ್ರಣಕ್ಕೆ ತಂದಿದ್ದಾನೆ. ಬಳಿಕ ಬಸ್ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಒರಗಿದೆ. ಬಸ್ನಲ್ಲಿ 13 ಜನ
ವಿದ್ಯಾರ್ಥಿಗಳು ಇದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬೆದರಿದ್ದ ಚಿಣ್ಣರು: ಘಟನೆಯಿಂದ ಮಕ್ಕಳು ಬೆದರಿದ್ದರು. ಚಿಣ್ಣರ ಚೀರಾಟ, ರೋದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಧಾವಿಸಿದ ಸುತ್ತಲಿನ
ಜಮೀನುಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರು ಮಕ್ಕಳನ್ನು ಕೆಳಗಿಳಿಸಿ ಸಮಾಧಾನ ಪಡಿಸಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೋಷಕರು ಮಕ್ಕಳು ಸುರಕ್ಷಿತವಾಗಿದ್ದಾರೆ ಎಂಬುದು ಖಾತ್ರಿಯಾಗುತ್ತಿದ್ದಂತೆ ನಿಟ್ಟುಸಿರು ಬಿಟ್ಟಿದ್ದಾರೆ. ಬಳಿಕ ಮಕ್ಕಳನ್ನು ಮನೆಗೆ ಕರೆದೊಯ್ದಿದ್ದಾರೆ.
ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ 9-10 ಖಾಸಗಿ ಶಾಲಾ ಬಸ್ಗಳಿವೆ. ನ.28ರಂದು ಆಯಾ ಶಾಲೆಗಳಿಗೆ ಭೇಟಿ ನೀಡಿ, ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಶಾಲಾ ಮುಖ್ಯಸ್ಥರನ್ನು ಎಚ್ಚರಿಸುವುದರೊಂದಿಗೆ ಸಾರಿಗೆ ಅಧಿಕಾರಿಗಳು ವಾಹನಕ್ಕೆ ನೀಡಿರುವ ಫಿಟ್ನೆಸ್
ಸರ್ಟಿಫಿಕೇಟ್ (ಎಫ್ಸಿ), ಚಾಲಕನ ಚಾಲನಾ ಪ್ರಮಾಣ ಪತ್ರದ ಪ್ರತಿ ಸಂಗ್ರಹಿಸುತ್ತೇವೆ.
● ಎಂ.ಎ.ರಡ್ಡಿ, ಗದಗ ಗ್ರಾಮೀಣ ವಲಯ ಶಿಕ್ಷಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್