ಮಹದೇಶ್ವರನ ಹುಂಡಿಯಲ್ಲಿ 1.50 ಕೋಟಿ ರೂ. ಸಂಗ್ರಹ
Team Udayavani, Nov 29, 2018, 6:15 AM IST
ಹನೂರು: ಪ್ರಸಿದ್ಧ ಯಾತ್ರಾಸ್ಥಳ, ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರನ ಸನ್ನಿಧಿಯ
ಹುಂಡಿಯಲ್ಲಿ ದಾಖಲೆಯ 1.50 ಕೋಟಿ ರೂ.ನಗದು, 30ಗ್ರಾಂ ಚಿನ್ನ ಮತ್ತು 1.140 ಕೆ.ಜಿ ಬೆಳ್ಳಿ ಸಂಗ್ರಹವಾಗಿದೆ.
ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಗ್ಗೆ 7 ಗಂಟೆಗೆ ಸಾಲೂರು ಬೃಹನ್ಮಠಾಧ್ಯಕ್ಷ ಗುರುಸ್ವಾಮೀಜಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ, ಸಿಸಿ ಕ್ಯಾಮರಾ ಕಣ್ಗಾವಲು, ಪೋಲಿಸ್ ಬಂದೋಬಸ್ತ್ನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯ ರಾತ್ರಿ 9.30ರವರೆಗೂ ನಡೆಯಿತು.
ಈ ಬಾರಿ ದೀಪಾವಳಿ ಜಾತ್ರೆ, ಅಮಾವಾಸ್ಯೆ, ಹುಣ್ಣಿಮೆ, ಕಾರ್ತಿಕ ಸೋಮವಾರ ಹಾಗೂ ಇನ್ನಿತರ ವಿಶೇಷ ಸಂದರ್ಭದಲ್ಲಿ ತಮಿಳುನಾಡು ಹಾಗೂ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಬೆಟ್ಟಕ್ಕೆ ಭೇಟಿ ನೀಡಿದ್ದು, ಹಣ, ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ 27 ದಿನದ ಅವಧಿಯಲ್ಲಿ 1,50,94,540 ರೂ.ನಗದು, 30 ಗ್ರಾಂ ಚಿನ್ನ ಹಾಗೂ 1,140 ಗ್ರಾಂ ಬೆಳ್ಳಿ ಸಂಗ್ರಹವಾಗಿದ್ದು, ದಾಖಲೆ ನಿರ್ಮಿಸಿದೆ. ಕಳೆದ ಬಾರಿ 33 ದಿನದ ಅವಧಿಯಲ್ಲಿ 1,32,83,821 ರೂ. ನಗದು,45 ಗ್ರಾಂ ಚಿನ್ನ ಹಾಗೂ 1,050 ಗ್ರಾಂ ಬೆಳ್ಳಿ ಸಂಗ್ರಹವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?