ರೇವಣ್ಣ ಸ್ಟ್ರಾಂಗ್ ಇದ್ದಾರೆ:ಜಮೀರ್
Team Udayavani, Nov 29, 2018, 6:30 AM IST
ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಅಭಿವೃದ್ಧಿ ಮಾಡುವ ಆಸೆ ಇದ್ದು, ಪಟ್ಟು ಹಿಡಿದು ಮುಖ್ಯಮಂತ್ರಿಗಳಿಂದ ತಮ್ಮ ಜಿಲ್ಲೆಗೆ ಹೆಚ್ಚಿನ ಅನುದಾನ ತೆಗೆದುಕೊಂಡು ಹೋಗುತ್ತಾರೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಜಮೀರ್ ಅಹಮದ್ ಅವರು ರೇವಣ್ಣ ಪರ ಮಾತನಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ರೇವಣ್ಣ ಅವರು ಸ್ಟ್ರಾಂಗ್ ಆಗಿದ್ದು, ಹಾಸನ ಜಿಲ್ಲೆಗೆ ಮೆಡಿಕಲ್ ಕಾಲೇಜ್ ತೆಗೆದುಕೊಂಡು ಹೋಗಿದ್ದಾರೆ. ಮುಖ್ಯಮಂತ್ರಿ ಯಾರಿಗೂ ಅನುದಾನ ಕೊಡುವುದಿಲ್ಲ ಎಂದು ಹೇಳಿಲ್ಲ. ಹಾವೇರಿಗೂ ಹೆಚ್ಚಿನ ಅನುದಾನ ನೀಡುವಂತೆ ನಾನೂ ಮುಖ್ಯಮಂತ್ರಿ ಬಳಿ ಮನವಿ ಮಾಡಿದ್ದೇನೆ. ವಕ್ಫ್ ಆಸ್ತಿಗೆ ಕಂಪೌಂಡ್ ಹಾಕಲು 500 ಕೋಟಿ ರೂ ಮೀಸಲಿಡಲಾಗಿದ್ದು, ಶೀಘ್ರವೇ 100 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.