ಪಿಎಸಿ ಸಭೆ ಮುಕ್ತಾಯ, 22ರಲ್ಲಿ ಮೂರು ಸದಸ್ಯರು ಮಾತ್ರ ಹಾಜರ್‌


Team Udayavani, Nov 29, 2018, 6:00 AM IST

181128kpn58.jpg

ಕಲಬುರಗಿ: ಹಲವು ನಿರೀಕ್ಷೆ ಹಾಗೂ ಕುತೂಹಲ ಮೂಡಿಸಿದ್ದ ರಾಜ್ಯದಲ್ಲೇ ಪ್ರಥಮವಾಗಿ ಕಲಬುರಗಿಯಲ್ಲಿ ಮಂಗಳವಾರ ಹಾಗೂ ಬುಧವಾರ ನಡೆದ ಎರಡು ದಿನಗಳ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ)ಯ ಅಧ್ಯಯನ ಪ್ರವಾಸ ಮತ್ತು ಸಭೆಗೆ ನಿರೀಕ್ಷೆಯಷ್ಟು ಸಮಿತಿ ಸದಸ್ಯರು ಬಾರದೇ ಗೈರು ಹಾಜರಾಗುವ ಮೂಲಕ ಈ ಭಾಗದ ಜನತೆಯಲ್ಲಿ ನಿರಾಶೆಯನ್ನುಂಟು ಮಾಡಿದ್ದಾರೆ.

ಲೆಕ್ಕಪತ್ರ ಸಮಿತಿಯಲ್ಲಿ 15 ಸಂಸದರು ಹಾಗೂ ರಾಜ್ಯಸಭೆಯ ಏಳು ಸದಸ್ಯರು ಸೇರಿ ಒಟ್ಟಾರೆ 22 ಸದಸ್ಯರಿದ್ದರೂ ಅಧ್ಯಕ್ಷ
ಮಲ್ಲಿಕಾರ್ಜುನ ಖರ್ಗೆ ಸೇರಿ ಕೇವಲ ಮೂವರು ಮಾತ್ರ ಕಲಬುರಗಿಗೆ ಆಗಮಿಸಿದ್ದರು. ಪಿಎಸಿಯನ್ನು ಮಿನಿ ಸಂಸತ್‌ ಎಂದೇ ಕರೆಯಲಾಗುತ್ತದೆ.

ಸುಮಾರು 97 ವರ್ಷಗಳ ಇತಿಹಾಸ ಹೊಂದಿರುವ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸ್ವಾತಂತ್ರ್ಯಪೂರ್ವದಿಂದಲೂ ಅಂದರೆ 1921ರಿಂದ ಅಸ್ತಿತ್ವದಲ್ಲಿದೆ. ಕೇಂದ್ರದ ಹಣಕಾಸಿನ ವ್ಯವಹಾರಗಳನ್ನು ಪರಿಶೀಲಿಸುವಂತಹ ಉನ್ನತ ಅಧಿಕಾರವನ್ನು ಪಿಎಸಿ ಹೊಂದಿದ್ದು,ಸಮಿತಿಯ ಸಭೆಗಳು ಹೆಚ್ಚಾಗಿ ದೆಹಲಿಯಲ್ಲೇ ನಡೆಯುತ್ತವೆ. ಆಗಾಗ ಬೇರೆ,ಬೇರೆ ಸ್ಥಳಗಳಿಗೆ ಪ್ರವಾಸ ಕೈಗೊಂಡು ಸಭೆಯನ್ನು ನಡೆಸಿರುವ ಉದಾಹರಣೆಗಳು ಇವೆ. ಕಲಬುರಗಿ ಸಂಸದರು ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ 2017-18ರಲ್ಲಿ ಮೊದಲ ಬಾರಿಗೆ ಪಿಎಸಿ ಅಧ್ಯಕ್ಷ ಸ್ಥಾನದ ಒಲಿದಿದ್ದು, 2018-19ನೇ ಸಾಲಿಗೂ ಅವರು ಅಧ್ಯಕ್ಷರಾಗಿ ಮುಂದುವರಿದ್ದಾರೆ.

ಹೀಗಾಗಿಯೇ 97 ವರ್ಷಗಳ ನಂತರ ಲೆಕ್ಕಪತ್ರ ಸಮಿತಿ ಸದಸ್ಯರನ್ನು ಅಧ್ಯಯನ ಪ್ರವಾಸ ಮತ್ತು ಸಭೆಗೆಂದು ಸಂಸದ ಖರ್ಗೆ ಕರ್ನಾಟಕಕ್ಕೆ ಪ್ರಥಮ ಬಾರಿಗೆ ಕರೆದುಕೊಂಡು ಬಂದಿದ್ದರು. ಅದರಲ್ಲೂ ವಿಶೇಷ ಕಾಳಜಿ ಮತ್ತು ಆಸಕ್ತಿ ವಹಿಸಿ ತಾವೇ ಪ್ರತಿನಿಧಿಸುವ ಕಲಬುರಗಿಗೆ ಸಮಿತಿಯನ್ನು ಕರೆಸಿ, ಇಲ್ಲಿ ಕೇಂದ್ರ ಸರ್ಕಾರ ಆರಂಭಿಸಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಇಎಸ್‌ ಐಸಿ ಮೆಡಿಕಲ್‌ ಹಬ್‌, ನೂತನ ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳ ಪರಿಶೀಲನೆ ಕೈಗೊಂಡು ಮತ್ತು ಪಿಎಸಿಗೆ ಸಂಬಂಧಪಟ್ಟ ಸಭೆಯನ್ನು ನಡೆಸಲಾಯಿತು.

12 ಸದಸ್ಯರು ಆಗಮಿಸುವ ನಿರೀಕ್ಷೆ ಇತ್ತು: ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾಗಿರುವುದಿಂದ ಅದರಲ್ಲೂ ರಾಜ್ಯಕ್ಕೆ ಮೊದಲ ಬಾರಿಗೆ ಸಮಿತಿ ಭೇಟಿ ನೀಡುತ್ತಿರುವುದರಿಂದ ಕನಿಷ್ಠ 12 ಸದಸ್ಯರು ಕಲಬುರಗಿಗೆ ಬರಲಿದ್ದಾರೆ ಎನ್ನಲಾಗಿತ್ತು. ಆದರೆ,ಎರಡು ದಿನಗಳ ಪಿಎಸಿಯ ಅಧ್ಯಯನ ಪ್ರವಾಸ ಹಾಗೂ ಸಭೆಗೆ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೇವಲ ಇಬ್ಬರೇ ಸದಸ್ಯರು ಆಗಮಿಸಿದ್ದು ನಿರಾಶೆ ಮೂಡಿಸಿತು. ರಾಜ್ಯದವರೇ ಆದ ಹಾವೇರಿ ಸಂಸದ ಶಿವಕುಮಾರ ಉದಾಸಿ ಮತ್ತು ರಾಜ್ಯಸಭಾ ಸದಸ್ಯ ರಾಜೀವ್‌ ಗೌಡ ಕೂಡ ಪಿಎಸಿ ಸದಸ್ಯರಾಗಿದ್ದಾರೆ. ಆದರೆ, ಇಬ್ಬರೂ ಮೊದಲ ದಿನ ಕಲಬುರಗಿಗೆ ಬಂದಿರಲಿಲ್ಲ.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.