ಕಾಂಗ್ರೆಸ್ ತೊರೆಯಲ್ಲ: ಶಾಸಕ ಸಂಗಮೇಶ್
Team Udayavani, Dec 1, 2018, 6:15 AM IST
ಭದ್ರಾವತಿ: “ನಾನು ಮುಂಬೈನಲ್ಲಿದ್ದೇನೆ, ಕಾಂಗ್ರೆಸ್ ತೊರೆಯಲಿದ್ದೇನೆ ಎಂಬುದೆಲ್ಲ ಸುಳ್ಳು. ನಾನು ಭದ್ರಾವತಿಯಲ್ಲೇ ಇದ್ದು, ಜನರ ಸಂಪರ್ಕದಲ್ಲಿಯೇ ಇದ್ದೇನೆ’ ಎಂದು ಶಾಸಕ ಬಿ.ಕೆ.ಸಂಗಮೇಶ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜನತೆ ಗಾಳಿಸುದ್ದಿ ನಂಬಬಾರದು. ನಾನು ಪಕ್ಷಕ್ಕೆ ನಿಷ್ಠನಾಗಿದ್ದು, ಸಚಿವ ಸ್ಥಾನ ಸಿಗದೆ ಹೋದರೂ ಕಾಂಗ್ರೆಸ್ ಬಿಡುವುದಿಲ್ಲ. ಬಿಜೆಪಿಯ ಹಲವು ಶಾಸಕರು ಹಿಂದಿನಿಂದಲೂ ಬಿಜೆಪಿಗೆ ಬರುವಂತೆ ಆಹ್ವಾನ ನೀಡಿದ್ದರು. ಆದರೂ ಸಹ ಪಕ್ಷ ಬಿಟ್ಟು ಹೋಗಿಲ್ಲ. ಹೋಗುವುದೂ ಇಲ್ಲ’ ಎಂದರು.
“ಸಚಿವ ಸಂಪುಟ ವಿಸ್ತರಣೆ ವೇಳೆ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಅನೇಕ ಹಿರಿಯ ನಾಯಕರು ಸಚಿವ ಸ್ಥಾನ ಕೊಡುವ ಭರವಸೆಯ ಮಾತನಾಡಿದ್ದಾರೆ. ಸಚಿವ ಸ್ಥಾನ ಸಿಗಲಿ, ಬಿಡಲಿ. ಕಾಂಗ್ರೆಸ್ ಬಿಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?