ನ್ಯಾಯಕ್ಕಾಗಿ ಪಿಎಸ್ಐ ಕಾಲಿಗೆ ಬಿದ್ದ ನೊಂದ ಮಹಿಳೆಯರು
Team Udayavani, Dec 2, 2018, 6:00 AM IST
ಕೊಪ್ಪಳ: ತಾಲೂಕಿನ ಹಟ್ಟಿ ಗ್ರಾಮದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಮಹಿಳೆಯರು ಶನಿವಾರ ಎಸ್ಪಿ ಕಚೇರಿಗೆ ಆಗಮಿಸಿದ್ದು, ಅಳವಂಡಿ ಪಿಎಸ್ಐ ರಾಮಪ್ಪ ಅವರ ಕಾಲಿಗೆ ಬಿದ್ದು ನ್ಯಾಯಕ್ಕಾಗಿ ಅಲವತ್ತುಕೊಂಡ ಘಟನೆ ನಡೆದಿದೆ.
ಎರಡು ದಿನಗಳ ಹಿಂದೆ ತಾಲೂಕಿನ ಹಟ್ಟಿ ಗ್ರಾಮದಲ್ಲಿ ಕುರುಬ ಸಮಾಜದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಅದೇ ಕೋಮಿನಲ್ಲಿ ಮಾತಿಗೆ ಮಾತು ಶುರುವಾಗಿತ್ತು. ಅಳವಂಡಿ ಜಿ.ಪಂ.ಕ್ಷೇತ್ರದ ರಾಜಕಾರಣದ ಹಿಡಿತ ಹೊಂದಿರುವ ಭರಮಪ್ಪ ನಗರ ಹಾಗೂ ಪಾಂಡು ಬೋರಿನ್ ಎಂಬುವರ ಬೆಂಬಲಿಗರ ನಡುವೆ ಜಗಳ ಶುರುವಾಗಿತ್ತು. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕೈ-ಕೈ ಮಿಲಾಯಿಸುವ ಹಂತಕ್ಕೂ ತಲುಪಿ ಮಾರಾಮಾರಿಯೇ ನಡೆದಿತ್ತು. ಬಳಿಕ, ಹನುಮಪ್ಪ ತಳಕಲ್ ಎಂಬುವರ ಬೆಂಬಲಿಗರು ಹಾಗೂ ತೋಟಪ್ಪ ಸಿಂಟ್Å ಎಂಬುವರು ಅಳವಂಡಿ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿ ದೂರು ನೀಡಿದ್ದರು. ಒಟ್ಟು 29 ಜನರ ಮೇಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಈ ಮಧ್ಯೆ, ಪೊಲೀಸರ ನಡೆ ಪ್ರಶ್ನಿಸಿದ ಮಹಿಳೆಯರು ಭರಮಪ್ಪ ನಗರ ಅವರ ಪರವಾಗಿ ಪೊಲೀಸರು ಕೆಲಸ ಮಾಡುತ್ತಿದ್ದಾರೆ. ತಮ್ಮ ಮನೆಯ ಮುಖ್ಯಸ್ಥರನ್ನು ಏಕಾಏಕಿ ಜೈಲಿಗೆ ಕಳಿಸಿದ್ದು, ತಮ್ಮ ಮೇಲೆ ದಬ್ಟಾಳಿಕೆ ಮಾಡಲಾಗುತ್ತಿದೆ. ಪೊಲೀಸರಿಗೆ ದೂರು ನೀಡಲು ತೆರಳಿದರೂ ಸ್ಪಂದಿಸುತ್ತಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮ್ಮವರನ್ನು ಜೈಲಿಗೆ ಕಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಶನಿವಾರ ಎಸ್ಪಿ ಕಚೇರಿಗೆ ಆಗಮಿಸಿದ ಮಹಿಳೆಯರು ಸ್ಥಳದಲ್ಲಿದ್ದ ಪಿಎಸ್ಐ ರಾಮಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ, ನ್ಯಾಯಕ್ಕಾಗಿ ಮಹಿಳೆಯೋರ್ವಳು ಎಸ್ಪಿ ಅವರ ಕಾಲಿಗೆ ಬಿದ್ದ ಪ್ರಸಂಗವೂ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು