ಕೈ ನಾಯಕರ ವಿರುದ್ಧ ಹೈಕಮಾಂಡ್‌ ಗರಂ


Team Udayavani, Dec 3, 2018, 6:50 AM IST

dinesh-gundurao-800.jpg

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ರಾಜ್ಯದಲ್ಲಿ ನಿರೀಕ್ಷಿತ ಗುರಿ ಮುಟ್ಟದೇ ವಿಫ‌ಲವಾಗಿರುವ ಬಗ್ಗೆ ಹೈಕಮಾಂಡ್‌ ನಾಯಕರು ರಾಜ್ಯ ನಾಯಕರ ವಿರುದ್ಧ ಗರಂ ಆಗಿದ್ದಾರೆ ಎಂದು ತಿಳಿದು ಬಂದಿದೆ.

ರಾಹುಲ್‌ ಗಾಂಧಿ ಅವರೊಂದಿಗೆ ಪಕ್ಷದ ತಳ ಮಟ್ಟದ ಕಾರ್ಯಕರ್ತರು ನೇರ ಸಂಪರ್ಕ ಹೊಂದುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿರುವುದರಿಂದ ಈ ಯೋಜನೆ ಅನುಷ್ಠಾನಗೊಳಿಸಲು ನಿರ್ಲಕ್ಷ್ಯ ತೋರುವ ಮುಖಂಡರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಅಲ್ಲದೇ ಸಚಿವ ಸ್ಥಾನದ ಆಕಾಂಕ್ಷಿಗಳು ತಮ್ಮ ಕ್ಷೇತ್ರಗಳಲ್ಲಿ ಯೋಜನೆ ಯಶಸ್ವಿಗೊಳಿಸಿರುವ ಬಗ್ಗೆ ದಾಖಲೆ ತೋರಿಸಬೇಕು ಎಂಬುದಾಗಿ ತಾಕೀತು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ರಾಜ್ಯಗಳಲ್ಲಿ ಪಕ್ಷ ಅಧಿಕಾರದಲ್ಲಿ ಇಲ್ಲದಿದ್ದರೂ, ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಮಧ್ಯಪ್ರದೇಶದಲ್ಲಿ 6 ಲಕ್ಷ, ರಾಜಸ್ಥಾನದಲ್ಲಿ 7 ಲಕ್ಷ, ಚಿಕ್ಕ ರಾಜ್ಯವಾಗಿರುವ ಛತ್ತೀಸ್‌ಗಢ 4.5 ಲಕ್ಷ ಸದಸ್ಯತ್ವ ನೋಂದಣಿಯಾಗಿದೆ. ಆದರೆ, ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದರೂ ಪಕ್ಷದ ಯೋಜನೆಯನ್ನು ಗಂಭೀರವಾಗಿ ಪರಿಗಣಿಸದೇ ಕೇವಲ ಅಧಿಕಾರ ಅನುಭವಿಸುವ ನಾಯಕರ ಬಗ್ಗೆ ಶಿಸ್ತು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನೂ ಹೈ ಕಮಾಂಡ್‌ ನೀಡಿದೆ ಎಂದು ತಿಳಿದು ಬಂದಿದೆ.

ಜುಲೈ 29ರಂದು ಆರಂಭವಾಗಿರುವ ಶಕ್ತಿ ಯೋಜನೆಗೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರು ರಾಜ್ಯದಲ್ಲಿ ಚಾಲನೆ ನೀಡಿದ್ದರು. ಆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಮೂರು ತಿಂಗಳಲ್ಲಿ ರಾಜ್ಯದಲ್ಲಿ 50 ಲಕ್ಷ ಸದಸ್ಯರನ್ನು ನೋಂದಣಿ ಮಾಡುವುದಾಗಿ ಹೇಳಿದ್ದರು. ಆದರೆ, ಕಳೆದ ನಾಲ್ಕು ತಿಂಗಳಲ್ಲಿ ಕೇವಲ 3 ಲಕ್ಷ ಸದಸ್ಯತ್ವ ನೋಂದಣಿ ಮಾಡಿಸಲಾಗಿದೆ. ನಿರೀಕ್ಷಿತ ಗುರಿ ಮುಟ್ಟಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮತ್ತೆ ಹದಿನೈದು ದಿನ ಅವಧಿ ವಿಸ್ತರಣೆ ಮಾಡಲಾಗಿದೆ.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಆರ್‌.ವಿ. ದೇಶಪಾಂಡೆ, ಶಿವಾನಂದ ಪಾಟೀಲ್‌, ಶಿವಶಂಕರ ರೆಡ್ಡಿ, ವೆಂಕಟರಮಣಪ್ಪ, ಪ್ರಿಯಾಂಕ್‌ ಖರ್ಗೆ, ಪುಟ್ಟರಂಗಶೆಟ್ಟಿ ಅವರ ಕ್ಷೇತ್ರಗಳಲ್ಲಿಯೂ ನಿರೀಕ್ಷಿತ ಗುರಿ ಮುಟ್ಟಿಲ್ಲ ಎಂಬುದನ್ನು ಪಟ್ಟಿ ಮಾಡಿ ಹೈ ಕಮಾಂಡ್‌, ರಾಜ್ಯ ನಾಯಕರಿಗೆ ಕಳುಹಿಸಿ ಕೊಟ್ಟಿದೆ ಎನ್ನಲಾಗಿದೆ. ಅಧಿಕಾರ ದೊರೆತಿದ್ದರೂ ಕೆಲವು ಸಚಿವರು ಯೋಜನೆ ಅನುಷ್ಠಾನಕ್ಕೆ ನಿರುತ್ಸಾಹ ತೋರಿರುವ ಬಗ್ಗೆ ರಾಹುಲ್‌ ಗಾಂಧಿ ಕಿಡಿ ಕಾರಿದ್ದಾರೆ ಎಂದು ತಿಳಿದು ಬಂದಿದೆ.

ಅಲ್ಲದೇ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೃಷ್ಣ ಬೈರೇಗೌಡ, ಯಶವಂತಪುರ ಶಾಸಕ ಎಸ್‌.ಟಿ.ಸೋಮಶೇಖರ್‌ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿರುವುದನ್ನೂ ಹೈ ಕಮಾಂಡ್‌ ನಾಯಕರು ಗಮನಿಸಿದ್ದಾರೆ.
ಹಾಸನ ಹಾಗೂ ಮಂಡ್ಯ ಜಿಲ್ಲೆಯಲ್ಲಿ ಸಾಧನೆ ಮಟ್ಟ ಅತ್ಯಂತ ಕಳಪೆಯಾಗಿದ್ದು, ಅರಸೀಕೆರೆ, ಬೇಲೂರು, ಹೊಳೆ ನರಸೀಪುರ, ಅರಕಲಗೂಡು ತಾಲೂಕುಗಳಲ್ಲಿ ಶೇ. 15ರಷ್ಟೂ ಸದಸ್ಯತ್ವ ನೋಂದಣಿಯಾಗಿಲ್ಲ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಶೇ. 20ರಷ್ಟು ಪ್ರಗತಿ ಸಾಧಿಸಿದ್ದು, ಉಳಿದ ಕ್ಷೇತ್ರಗಳಲ್ಲಿ ಶೇ. 50ರಷ್ಟೂ ಶಕ್ತಿ ಯೋಜನೆಯ ಸದಸ್ಯತ್ವ ನೋಂದಣಿಯಾಗದಿರುವುದು ಹೈಕಮಾಂಡ್‌ ಗಮನಕ್ಕೆ ಬಂದಿದೆ. ಆ ಜಿಲ್ಲೆಗಳಲ್ಲಿಯೂ ಹೆಚ್ಚಿನ ಸದಸ್ಯರ ನೋಂದಣಿಗೆ ಒತ್ತು ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

ರಾಹುಲ್‌ ಗಾಂಧಿ ಅವರ ಶಕ್ತಿ ಯೋಜನೆ ರಾಜ್ಯ ನಾಯಕರ ನಿದ್ದೆಗೆಡಿಸಿದ್ದು, ಯೋಜನೆ ಯಶಸ್ವಿಗೊಳಿಸಲು ಉಸ್ತುವಾರಿ ಕಾರ್ಯದರ್ಶಿಗಳಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದಾರೆ ಎಂದು  ತಿಳಿದು ಬಂದಿದೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.