ರಾತ್ರೋರಾತ್ರಿ ಮನೆ ಖಾಲಿ ಮಾಡಿದ ರಮ್ಯಾ
Team Udayavani, Dec 4, 2018, 6:00 AM IST
ಮಂಡ್ಯ: ಚಿತ್ರನಟ, ಮಾಜಿ ಸಚಿವ ಅಂಬರೀಶ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳದೆ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ಅವರು ಭಾನುವಾರ ಮಧ್ಯರಾತ್ರಿ ಮಂಡ್ಯ ನಗರದಲ್ಲಿನ ತಮ್ಮ ಮನೆಯನ್ನು ಖಾಲಿ ಮಾಡಿದ್ದಾರೆ. ವಿದ್ಯಾನಗರದ ಕೆ.ಆರ್.ರಸ್ತೆಯಲ್ಲಿರುವ ಮಾಜಿ ಶಾಸಕ ಸಾದತ್ ಅಲಿಖಾನ್ ಅವರ ಮನೆಯನ್ನು ರಮ್ಯಾ ಬಾಡಿಗೆಗೆ ಪಡೆದಿದ್ದರು. ಭಾನುವಾರ ತಡರಾತ್ರಿ ಎರಡು ಲಾರಿಗಳಲ್ಲಿ ಮನೆಯಲ್ಲಿದ್ದ ಪೀಠೊಪಕರಣಗಳು ಸೇರಿದಂತೆ ಇತರ ಸಾಮಾನು-ಸರಂಜಾಮುಗಳನ್ನು ತುಂಬಿಸಿಕೊಂಡು ಬೆಂಗಳೂರಿಗೆ ರವಾನಿಸಿದ್ದಾರೆ.
ಅಂಬರೀಶ್ ನಿಧನದ ಬಳಿಕ ಪಾರ್ಥಿವ ಶರೀರವನ್ನು ರಮ್ಯಾ ವಾಸವಿದ್ದ ಬಾಡಿಗೆ ಮನೆಯ ಮುಂಭಾಗದಲ್ಲೇ ಇರುವ ಸರ್ ಎಂ.ವಿ.ಕ್ರೀಡಾಂಗಣಕ್ಕೆ ತಂದು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಅಲ್ಲಿಗೆ ಅವರು ಬಂದಿರಲಿಲ್ಲ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆದ ಅಂತ್ಯಕ್ರಿಯೆಯಲ್ಲೂ ರಮ್ಯಾ ಪಾಲ್ಗೊಂಡಿರಲಿಲ್ಲ. ಹೀಗಾಗಿ, ಅವರ ವಿರುದ್ಧ ಜಿಲ್ಲೆಯ ಜನರು ಹಾಗೂ ಅಂಬಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಸ್ವತ: ರಮ್ಯಾ ಅಭಿಮಾನಿಗಳೂ ತಮ್ಮ ನಾಯಕಿಯ ನಿಲುವನ್ನು ಕಟುವಾಗಿಯೇ ವಿರೋಧಿಸಿದ್ದರು. ರಮ್ಯಾ ಜಿಲ್ಲೆಯ ಜನರ ಪಾಲಿಗೆ ಸತ್ತರು ಎಂದು ತಿಥಿ ಕಾರ್ಡ್ ಮಾಡಿಸಿ, ಸಾಮಾಜಿಕ ಜಾಲ ತಾಣಗಳಲ್ಲಿ ಹರಿಯ ಬಿಟ್ಟು ವ್ಯಂಗ್ಯ ಮಾಡಲಾಗಿತ್ತು. ಈ ಬೆಳವಣಿಗೆಗಳಿಂದ ರಮ್ಯಾ ವಾಸವಾಗಿದ್ದ ಬಾಡಿಗೆ ಮನೆಗೆ ಮುಂಜಾಗ್ರತೆಯಾಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಈಗ ನಗರದಲ್ಲಿದ್ದ ನಿವಾಸವನ್ನು ಖಾಲಿ ಮಾಡಿರುವ ರಮ್ಯಾ, ಮಂಡ್ಯ ಜಿಲ್ಲಾ ರಾಜಕಾರಣಕ್ಕೆ ಗುಡ್ಬೈ ಹೇಳಿದಂತೆ ಕಂಡು ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ