ಆರೇಳು ಶಾಸಕರು ಬಿಜೆಪಿಗೆ ಸೇರೋದು ಖಚಿತ
Team Udayavani, Dec 4, 2018, 6:00 AM IST
ಬೆಳಗಾವಿ: ಬಿಜೆಪಿಗೆ “ಆಪರೇಷನ್ ಕಮಲ’ ಹೊಸದೇನಲ್ಲ. ಬಿಜೆಪಿಯವರು ಹೇಳುವಂತೆ 25 ಜನ ಅಲ್ಲ, ಕಾಂಗ್ರೆಸ್ನ ಆರರಿಂದ ಏಳು ಜನ ಮಾತ್ರ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ. ಆದರೆ, ಇದರಿಂದ ಸಮ್ಮಿಶ್ರ ಸರ್ಕಾರಕ್ಕೆ ಯಾವ ರೀತಿಯ ಅಪಾಯವೂ ಆಗಲ್ಲ.
ನಾನಂತೂ ಈ ಶಾಸಕರ ಪಟ್ಟಿಯಲ್ಲಿ ಇಲ್ಲ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗ ನಡೆದಿರುವ ರಾಜಕೀಯ ಬೆಳವಣಿಗೆ ಗಮನಿಸಿದರೆ ಬಿಜೆಪಿ ನಾಯಕರು ಹೇಳುವಂತೆ 25 ಶಾಸಕರಂತೂ ಬಿಜೆಪಿಗೆ ಸೇರ್ಪಡೆಯಾಗುತ್ತಿಲ್ಲ. ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕರು ಆಮಿಷ ಒಡ್ಡುತ್ತಲೇ ಇದ್ದಾರೆ. ಆಗಾಗ ಆಡಿಯೋ ಹಾಗೂ ವಿಡಿಯೋ ದಾಖಲೆ ಬಿಡುಗಡೆ ಮಾಡುತ್ತಲೇ ಇದ್ದಾರೆ. ಆದರೂ, ಇದು
ಯಶಸ್ವಿಯಾಗಿಲ್ಲ. ಈ ಬಾರಿಯೂ ಬಿಜೆಪಿ ಪ್ರಯತ್ನ ವಿಫಲವಾಗಲಿದೆ. ಹೀಗಾಗಿ, ಈ ರೀತಿಯ ಆಪರೇಷನ್ ಕಮಲಕ್ಕೆ ಹೆಚ್ಚಿನ ಮಹತ್ವ ಕೊಡುವ ಅಗತ್ಯ ಇಲ್ಲ ಎಂದರು.
ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಅಧಿವೇಶನಕ್ಕೆ ಮುನ್ನ ಸಚಿವ ಸಂಪುಟ ವಿಸ್ತರಣೆ ಆಗಬಹುದು. ವಿಸ್ತರಣೆ ನಂತರ ಭಿನ್ನಮತ ಎದ್ದರೂ ಅದರಿಂದ ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ. ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ಸಂಪುಟ ವಿಸ್ತರಣೆ ಬೇಗ ಮಾಡಿದರೆ ಒಳ್ಳೆಯದು. ಆದರೆ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಶಾಸಕನಾಗಿಯೇ ನಾನು ಕೆಲ ಸಚಿವರಿಗಿಂತ ಹೆಚ್ಚು ಪ್ರಭಾವ ಶಾಲಿಯಾಗಿದ್ದೇನೆ. ಕ್ಷೇತ್ರಕ್ಕೆ ಬೇಕಾದ ಕೆಲಸಗಳು ಆಗುತ್ತಿವೆ. ಹೀಗಾಗಿ, ಸಚಿವ ಸ್ಥಾನವೇ
ಬೇಕು ಎಂಬುದು ನನ್ನ ಬೇಡಿಕೆ ಅಲ್ಲ. ಸಮ್ಮಿಶ್ರ ಸರ್ಕಾರ ಎಂದ ಮೇಲೆ ಅಸಮಾಧಾನ ಹಾಗೂ ಅತೃಪ್ತಿ ಇರುತ್ತದೆ. ಇದು ಸಹಜ. ಇದೇ ಕಾರಣದಿಂದ ಕೆಲವರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಸಿರಬಹುದು. ಇದರ ಮಾಹಿತಿ ನನಗೆ ಇಲ್ಲ. ಮೇಲಾಗಿ ನಾನು ದೂರು ನೀಡಿದವರ ಪರ ಇಲ್ಲ. ನಾನು ಕಾಂಗ್ರೆಸ್ಸಿಗ ಎಂದರು.
ಗೋವಾದಲ್ಲಿ ಮದುವೆ ಮುಗಿಸಿಕೊಂಡು ಬರುವಾಗ ಖಾನಾಪುರ ತಾಲೂಕಿನ ಕಣಕುಂಬಿ ಬಳಿಯ ಸಾತವೇರಿ ರೆಸಾರ್ಟ್ಗೆ ಭೇಟಿ ನೀಡಿದ್ದೇನೆ ಅಷ್ಟೆ. ಅಲ್ಲಿಗೆ ಭೇಟಿ ನೀಡಿದ್ದು, ರೆಸಾರ್ಟ್ ರಾಜಕೀಯ ಮಾಡಲು ಅಲ್ಲ. ಮುಂದೆ ಪ್ರವಾಸಕ್ಕಾಗಿ ಬೇಕಾಗಬಹುದು ಎಂದು ನೋಡಿದ್ದೇನೆ ಅಷ್ಟೆ.
● ಸತೀಶ ಜಾರಕಿಹೊಳಿ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ