ವಿಷ್ಣು ಸ್ಮಾರಕ: ಅಭಿಮಾನಿಗಳಿಗೆ ರೈತ ಮಹಿಳೆ ತರಾಟೆ


Team Udayavani, Dec 4, 2018, 6:00 AM IST

c-35.jpg

ಮೈಸೂರು: ದಿ.ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣ ಸಂಬಂಧ ಸರ್ಕಾರ ಮೈಸೂರು ತಾಲೂಕಿನ ಹಾಲಾಳು ಗ್ರಾಮದಲ್ಲಿ ಗುರುತಿಸಿರುವ ಜಾಗದಲ್ಲಿ ಸೋಮವಾರ ಪೂಜೆ ಸಲ್ಲಿಸಲು ತೆರಳಿದ್ದ ವಿಷ್ಣು ಸೇನಾ ಸಮಿತಿಯ ಪದಾಧಿಕಾರಿಗಳನ್ನು ರೈತ
ಮಹಿಳೆ ತರಾಟೆಗೆ ತೆಗೆದುಕೊಂಡಿದ್ದಾಳೆ. ಪ್ರಕರಣ ಇನ್ನೂ ನ್ಯಾಯಾಲಯದಲ್ಲಿರು ವುದರಿಂದ ಸ್ಮಾರಕ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಂಡಿಲ್ಲ. ಈ ನಡುವೆ ವಿಷ್ಣು ಸೇನಾ ಸಮಿತಿ ಪದಾಧಿಕಾರಿಗಳು ಇಲ್ಲಿಗೆ ತೆರಳಿ ವಿಷ್ಣುವರ್ಧನ್‌ ಭಾವಚಿತ್ರವುಳ್ಳ ಬ್ಯಾನರ್‌ ಕಟ್ಟಿ ಪೂಜೆ ಸಲ್ಲಿಸಿ, ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ಮಾಡಲು ಮುಂದಾದಾಗ ಜಮೀನಿನಲ್ಲಿದ್ದ ರೈತ ಮಹಿಳೆ ಜಯಮ್ಮ ಇವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಷ್ಣುವರ್ಧನ್‌ಗೆ ಸ್ಮಾರಕ ನಿರ್ಮಿಸಲು ತಮ್ಮ ತಕರಾರಿಲ್ಲ. ಆದರೆ, ತಮ್ಮ ಜೀವನಕ್ಕೆ ಈ ಜಮೀನೇ ಆಧಾರ. ಬದುಕಿಗೆ ದಾರಿ ಮಾಡಿಕೊಟ್ಟು, ಇಲ್ಲಿ ಏನಾದರೂ ಮಾಡಿಕೊಳ್ಳಿ ಎಂದು ಆಗ್ರಹಿಸಿದರು. ಇದಕ್ಕೆ ಸಮಜಾಯಿಷಿ ನೀಡಿದ ಸಮಿತಿಯ ಪದಾಧಿಕಾರಿಗಳು, ಸರ್ಕಾರ ರೈತರಿಗೆ ತೊಂದರೆ ಕೊಡುವುದಿಲ್ಲ. ತಮಗೆ ದೊರಕಬೇಕಾದ ಪರಿಹಾರ ಇಲ್ಲವೇ ಬದಲಿ ಜಾಗವನ್ನು ಸರ್ಕಾರ ನೀಡಲಿದೆ. ಸರ್ಕಾರ ನಿಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮುಂದಾಗದಿದ್ದಲ್ಲಿ ವಿಷ್ಣು ಅಭಿಮಾನಿಗಳೇ ದೇಣಿಗೆ ಸಂಗ್ರಹಿಸಿ, ಆ ಹಣದಲ್ಲಿ ಜಾಗ ಖರೀದಿಸಿ ಸ್ಮಾರಕ ನಿರ್ಮಿಸುವುದಾಗಿ ತಿಳಿಸಿದರು.

ಎಚ್‌.ಡಿ.ಕೋಟೆ ರಸ್ತೆಯಲ್ಲಿರುವ ಮೈಸೂರು ತಾಲೂಕು ಹಾಲಾಳು ಗ್ರಾಮದ ಸರ್ವೇ ನಂಬರ್‌ 8ರಲ್ಲಿನ 5 ಎಕರೆ ಜಾಗವನ್ನು ರಾಜ್ಯ ಸರ್ಕಾರ, ಡಾ.ವಿಷ್ಣುವರ್ಧನ್‌ ಸ್ಮಾರಕ ಭವನ ನಿರ್ಮಾಣಕ್ಕೆ ಗುರುತಿಸಿತ್ತು. ಆದರೆ, ಆ ಜಾಗದಲ್ಲಿ ಸಾಗುವಳಿ ಮಾಡುತ್ತಿದ್ದ ರೈತರು, ತಮಗೆ ಜೀವನಾಧಾರಕ್ಕೆ ಇರುವ ತುಂಡುಭೂಮಿಯನ್ನು ಬಿಟ್ಟುಕೊಡಲು ಸಾಧ್ಯವಿಲ್ಲ. ಒಂದು ವೇಳೆ, ಈ ಜಾಗವನ್ನು ಬಿಟ್ಟು ಕೊಡಲೇ ಬೇಕು ಎಂದಾದಲ್ಲಿ ಜಿಲ್ಲಾಡಳಿತ ತಮಗೆ ಬದಲಿ ವ್ಯವಸ್ಥೆ ಮಾಡಿಕೊಡಲಿ ಎಂದು ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರು. ಆದರೆ, ಜಿಲ್ಲಾಡಳಿತ ರೈತರ ವಾದವನ್ನು ತಳ್ಳಿ ಹಾಕಿ ಸ್ಮಾರಕ ನಿರ್ಮಾಣಕ್ಕೆ ಗುರುತಿಸಲಾಗಿರುವ ಜಮೀನು ಗೋಮಾಳ ಆಗಿರುವುದರಿಂದ ರೈತರಿಗೆ ಈ ಜಮೀನಿನ ಮೇಲೆ ಯಾವುದೇ ಅಧಿಕಾರವಿಲ್ಲ ಎಂದು ಸ್ಮಾರಕ ನಿರ್ಮಾಣಕ್ಕೆ ಮುಂದಾಗಿತ್ತು. ಅದರಂತೆ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ದಿನಾಂಕ ನಿಗದಿಯಾಗಿತ್ತು. ಆದರೆ, ಅಂದು ತಮಿಳುನಾಡು ಮುಖ್ಯ ಮಂತ್ರಿ ಜಯಲಲಿತಾ ನಿಧನದ ಹಿನ್ನೆಲೆಯಲ್ಲಿ ಶೋಕಾಚರಣೆ ಘೋಷಣೆಯಾದ್ದರಿಂದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿಲ್ಲ. ಆದರೆ, ಕಾರ್ಯಕ್ರಮದ ಸಿದ್ಧತೆ ಆಗಿದ್ದರಿಂದ ವಿಷ್ಣುವರ್ಧನ್‌ ಪತ್ನಿ ಭಾರತಿಯವರೇ ಭೂಮಿ
ಪೂಜೆ ನೆರವೇರಿಸಿದ್ದರು. 

ಟಾಪ್ ನ್ಯೂಸ್

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

31

Congress: ಕುಮಾರಸ್ವಾಮಿ, ದೇವರಾಜೇಗೌಡ ವಿರುದ್ಧ ಎಸ್‌ಐಟಿಗೆ ಕಾಂಗ್ರೆಸ್‌ ದೂರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.