ಪ್ರತಿಭಟನೆಗೆ ತೆರಳಿದ್ದ ರೈತರ ಪರದಾಟ
Team Udayavani, Dec 4, 2018, 6:00 AM IST
ಬಳ್ಳಾರಿ: ಸಾಲ ಮನ್ನಾ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಲು ದಿಲ್ಲಿಗೆ ತೆರಳಿದ್ದ ಜಿಲ್ಲೆಯ ರೈತರು ರೈಲು ತಪ್ಪಿಸಿಕೊಂಡು ವಾಪಸ್ ಬರಲು ಹಣವಿಲ್ಲದೆ ಕಾಶಿ (ವಾರಾಣಸಿ) ರೈಲು ನಿಲ್ದಾಣದಲ್ಲಿ ಅತಂತ್ರರಾಗಿ ಪರದಾಡುತ್ತಿದ್ದಾರೆ. ನ. 29, 30ರಂದು ನಡೆದ ಪ್ರತಿಭಟನೆಗಾಗಿ ಜಿಲ್ಲೆಯಿಂದ 30ಕ್ಕೂ ಹೆಚ್ಚು ರೈತರು ತೆರಳಿದ್ದರು. ಇದಕ್ಕಾಗಿ ಗದಗ-ಕಾಶಿ-ದಿಲ್ಲಿ ಮತ್ತು ದಿಲ್ಲಿ-ಕಾಶಿ-ಗದಗ ನಡುವೆ ಸಂಚರಿಸುವ ರೈಲಿನಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸಲಾಗಿತ್ತು. ಪ್ರತಿಭಟನೆ ಮುಗಿದ ಬಳಿಕ ರೈಲು ಹತ್ತಿ ಕಾಶಿಯಲ್ಲಿ ಬಂದಿಳಿದಿದ್ದರು. ಅಲ್ಲಿಂದ ಗದಗಕ್ಕೆ ತೆರಳಲು ಡಿ.1ರಂದು ಸಂಜೆ 6 ಗಂಟೆಗೆ ಆಗಮಿಸಬೇಕಿದ್ದ ರೈಲು ತಡವಾಗಲಿದೆ ಎಂಬ ಮಾಹಿತಿ ಪಡೆದ ರೈತರೆಲ್ಲರೂ ನಿಲ್ದಾಣದಿಂದ ಹೊರಬಂದು ಕಾಶಿ ವೀಕ್ಷಣೆಗೆ ತೆರಳಿದ್ದರು.
ಡಿ. 1ರಂದು ಸಂಜೆ 6 ಗಂಟೆಗೆ ಆಗಮಿಸಬೇಕಿದ್ದ ರೈಲು ಡಿ. 2ರಂದು ಬೆಳಗ್ಗಿನ ಜಾವ ಆಗಮಿಸಿದೆ. ಈ ವೇಳೆ ರೈತರು ರೈಲು ನಿಲ್ದಾಣಕ್ಕೆ ಆಗಮಿಸಿಲ್ಲದ ಕಾರಣ ಈ ರೈಲನ್ನೂ ತಪ್ಪಿಸಿಕೊಂಡಿದ್ದಾರೆ. ಹುಬ್ಬಳ್ಳಿಗೆ ಆಗಮಿಸುವ ಶತಾಬ್ದಿ ಎಕ್ಸ್ ಪ್ರಸ್ ರೈಲನ್ನು ಸಹ ರೈತರು ತಪ್ಪಿಸಿಕೊಂಡಿದ್ದು, ಈಗ ಗದಗಕ್ಕೆ ಆಗಮಿಸುವ ರೈಲಿಗಾಗಿ ನಿಲ್ದಾಣದಲ್ಲೇ ಕಾದು ಕುಳಿತಿದ್ದಾರೆ. ಕಾಶಿಯಿಂದ ಬಸ್ ಅಥವಾ ಬೇರೆ ರೈಲಿನಲ್ಲಿ ಸಂಚರಿಸಲು ರೈತರ ಕೈಯಲ್ಲಿ ಹಣವಿಲ್ಲ. ಇದರಿಂದ ಕಾಶಿ ನಿಲ್ದಾಣದಲ್ಲಿರುವ ರೈತರಿಗೆ ಆರ್ಥಿಕ ಸಂಕಷ್ಟ ಎದುರಾಗಿದ್ದು, ನೆರವಿನ ಹಸ್ತಕ್ಕಾಗಿ ಎದುರು ನೋಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ