ಆಕಾಂಕ್ಷಿಗಳಿಗೀಗ ಸಮನ್ವಯ ಒತ್ತಡ
Team Udayavani, Dec 5, 2018, 6:00 AM IST
ಬೆಂಗಳೂರು: ಸಮ್ಮಿಶ್ರ ಸರಕಾರ ಸುಸೂತ್ರವಾಗಿ ನಡೆಯಲು ರಚಿಸಲಾಗಿರುವ ಸಮನ್ವಯ ಸಮಿತಿ ಸಭೆ ಬಹುಸಮಯದ ಬಳಿಕ ಬುಧವಾರ ಜರಗಲಿದೆ. ಸಂಪುಟ ವಿಸ್ತರಣೆ, ನಿಗಮ-ಮಂಡಳಿ ನೇಮಕ ಕುರಿತು ಚರ್ಚಿಸಿ, ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. ಒಂದು ವೇಳೆ ಸಭೆಯಲ್ಲಿ ಸಮನ್ವಯ ಮೂಡಿದಲ್ಲಿ ಡಿ.8 ಅಥವಾ 9ರಂದು ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಲಿದೆ ಎಂದು ಹೇಳಲಾಗಿದೆ. ಆ.31ರಂದು ನಡೆದಿದ್ದ 3ನೇ ಸಮನ್ವಯ ಸಮಿತಿ ಸಭೆ ಬಳಿಕ ಸೆಪ್ಟಂಬರ್ ಮೂರನೇ ವಾರದಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದರೂ ಆಗಿರಲಿಲ್ಲ. ಜತೆಗೆ ವಿಸ್ತರಣೆಗಿದ್ದ ಉಪ ಚುನಾವಣೆ ಅಡ್ಡಿಯೂ ಈಗ ನಿವಾರಣೆಯಾಗಿದ್ದು, ಸಚಿವಾಕಾಂಕ್ಷಿಗಳು ಈ ಸಭೆಯತ್ತಲೇ ಚಿತ್ತ ನೆಟ್ಟಿದ್ದಾರೆ.
ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ. ಜೆಡಿಎಸ್ ಸಚಿವರು ಇರುವ ಕಡೆ ಕಾಂಗ್ರೆಸ್ ಶಾಸಕರ ಶಿಫಾ ರಸುಗಳಿಗೆ ಬೆಲೆ ಕೊಡುತ್ತಿಲ್ಲ. ಸಮ್ಮಿಶ್ರ ಸರಕಾರಕ್ಕೆ ಕಾಂಗ್ರೆಸ್ ಬೆಂಬಲ ಕೊಟ್ಟಿದ್ದರೂ ಸ್ಥಳೀಯ ಮಟ್ಟದಲ್ಲಿ ಜೆಡಿಎಸ್ ಪ್ರಾಬಲ್ಯ ಹೆಚ್ಚುತ್ತಿದೆ ಎಂಬೆಲ್ಲ ದೂರುಗಳ ಬಗ್ಗೆಯೂ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಆಪರೇಷನ್ ಕಮಲದ ಚರ್ಚೆಮತ್ತೂಮ್ಮೆ ಬಿಜೆಪಿ ಆಪರೇಷನ್ ಕಮಲ ಕಾರ್ಯಾಚರಣೆ ಆರಂಭಿಸಿದೆ ಎಂಬ ಮಾತುಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ. ಹಿಂದಿನ ಸರಕಾರದ ಯೋಜನೆಗಳ ಜಾರಿ, ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ ಕಾರ್ಯಕ್ರಮಗಳ ಅನುಷ್ಠಾನ ಎಲ್ಲವೂ ಚರ್ಚೆಗೆ ಬರಲಿದೆ. ಜತೆಗೆ ಸಾಮಾನ್ಯ ಕಾರ್ಯಸೂಚಿ ಕುರಿತು ಪ್ರಸ್ತಾವವಾಗಲಿದೆ ಎಂದು ಹೇಳಲಾಗಿದೆ.
ಹಿರಿಯ ನಾಯಕರ ಸಭೆ
ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸ ಬೇಕಾದ ವಿಷಯಗಳ ಬಗ್ಗೆ ಚರ್ಚಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬುಧವಾರ ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿ ಯಲ್ಲಿ ಹಿರಿಯ ನಾಯಕರ ಸಭೆ ಕರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ