ರಾಮಮಂದಿರ ನಿರ್ಮಾಣಕ್ಕೆ ಸಹಕಾರ: ಮಂತ್ರಾಲಯ ಶ್ರೀ
Team Udayavani, Dec 6, 2018, 6:55 AM IST
ಗಂಗಾವತಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮಂತ್ರಾಲಯ ಮಠ ಸಂಪೂರ್ಣವಾಗಿ ಬೆಂಬಲ ವ್ಯಕ್ತಪಡಿಸುತ್ತದೆ ಎಂದು ಮಂತ್ರಾಲಯ ಮಠದ ಪೀಠಾಧ್ಯಕ್ಷ ಸುಭುದೇಂದ್ರ ತೀರ್ಥರು ತಿಳಿಸಿದ್ದಾರೆ.
ತಾಲೂಕಿನ ಆನೆಗೊಂದಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಭು ಶ್ರೀರಾಮ, ಭಾರತೀಯರ ಆದರ್ಶ ಪುರುಷ. ಮಂದಿರ ನಿರ್ಮಾಣವನ್ನು ಸಕಲ ಭಾರತೀಯರು ಧರ್ಮಾತೀತವಾಗಿ ಬೆಂಬಲಿಸುವ ಮೂಲಕ ವಿಶ್ವಕ್ಕೆ ಸೂಕ್ತ ಸಂದೇಶ ಸಾರಬೇಕಿದೆ. ಮಂದಿರ ನಿರ್ಮಾಣ ವಿಷಯದಲ್ಲಿ ಐಕ್ಯತೆ ಪ್ರದರ್ಶನ ಮಾಡುವ ಮೂಲಕ ಸಂಸ್ಕೃತಿ ಉಳಿಸಬೇಕಿದೆ ಎಂದರು.
ಪದ್ಮನಾಭ ತೀರ್ಥರ ಆರಾಧನೆ: ಈ ಮಧ್ಯೆ, ಗಂಗಾವತಿ ತಾಲೂಕಿನ ಆನೆಗೊಂದಿಯ ನವವೃಂದಾವನ ಗಡ್ಡಿಯಲ್ಲಿ ಪದ್ಮನಾಭ ತೀರ್ಥರ ಆರಾಧನಾ ಮಹೋತ್ಸವ ಮಂತ್ರಾಲಯ ಪೀಠಾಧ್ಯಕ್ಷ ಸುಭುದೇಂದ್ರ ತೀರ್ಥರ ನೇತೃತ್ವದಲ್ಲಿ ಬುಧವಾರ ಆರಂಭವಾಯಿತು. ಪೂರ್ವಾರಾಧನೆ ನಿಮಿತ್ತ ಪದ್ಮನಾಭ ತೀರ್ಥರ ವೃಂದಾವನಕ್ಕೆ ಪಂಚಾಮೃತಾಭಿಷೇಕ, ಬೆಳ್ಳಿ ಮತ್ತು ಚಿನ್ನದ ನಾಣ್ಯಗಳಿಂದ ಅಭಿಷೇಕ, ಬೆಳ್ಳಿ ಕವಚ ಹಾಗೂ ವಿವಿಧ ಪುಷ್ಪಾಲಂಕಾರ ಮಾಡಿ ಆರತಿ ಮಾಡಲಾಯಿತು. ಇದಕ್ಕೂ ಮುನ್ನ ಮಂತ್ರಾಲಯ ಶ್ರೀಗಳು ಮೂಲ ರಾಮದೇವರ ಮೂರ್ತಿಗಳಿಗೆ ಪೂಜೆ ಸಲ್ಲಿಸಿ, ಭಕ್ತರಿಗೆ ಮುದ್ರಾಧಾರಣೆ ಮಾಡಿದರು. ಈ ವೇಳೆ, ಮಾತನಾಡಿದ ಸುಭುದೇಂದ್ರ ತೀರ್ಥರು, ಉಭಯ ಮಠಗಳು ಕೂಡಿ ಪದ್ಮನಾಭ ತೀರ್ಥರ ಆರಾಧನಾ ಮಹೋತ್ಸವ ಮಾಡುವುದರಿಂದ ಸಮಾಜಕ್ಕೆ ಉತ್ತಮ ಸಂದೇಶ ಕೊಟ್ಟಂತಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ