ಸಿದ್ದು ಮತ್ತೆ ಸಿಎಂ ಆಗಲಿ,ಸಂಪುಟ ವಿಸ್ತರಣೆ ಖಂಡಿತ ಆಗಲ್ಲ!;ಕೈ ಶಾಸಕ
Team Udayavani, Dec 6, 2018, 12:14 PM IST
ಬೆಂಗಳೂರು : ಡಿ.22ಕ್ಕೆ ಸಂಪುಟ ವಿಸ್ತರಣೆ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಮನ್ವಯ ಸಮಿತಿ ಸಭೆ ನಿರ್ಧರಿಸಿದ ಬೆನ್ನಲ್ಲೇ ಕಂಪ್ಲಿ ಕಾಂಗ್ರೆಸ್ ಶಾಸಕ ಗಣೇಶ್ ಅವರು ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಇರಿಸುಮುರಿಸು ಉಂಟು ಮಾಡಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗಣೇಶ್ ಅವರು ನನಗೆ ಮತ್ತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಬೇಕು ಅನಿಸಿದೆ. ನಾನು ಮಾತ್ರ ಅಲ್ಲ ನಲವತ್ತರಿಂದ ಐವತ್ತು ಶಾಸಕರಿಗೆ ಈ ಅನಿಸಿಕೆ ಇದೆ ಎಂದರು.
ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆ ಆಗುವುದಿಲ್ಲ. ಹಲವು ಜನರಿಗೆ ಅಸಮಾಧಾನ ಇದೆ, ಹೀಗಾಗಿ ಲೋಕಸಭಾ ಚುನಾವಣೆ ವರೆಗೆ ಸಂಪುಟ ವಿಸ್ತರಣೆ ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಗಣೇಶ್ ಅವರು ಸಿದ್ದರಾಮಯ್ಯ ಅವರ ಬೆಂಬಲಿಗರಾಗಿದ್ದು, ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್