ಮುಂದೆ ಜನ ವೋಟ್ ಕೊಟ್ರೆ ನೋಡೋಣ; ಸಿದ್ದರಾಮಯ್ಯ ಹೇಳಿದ್ದೇನು?
Team Udayavani, Dec 6, 2018, 2:17 PM IST
ಬೆಂಗಳೂರು: ಡಿಸೆಂಬರ್ 22 ಕ್ಕೆ ಸಂಪುಟ ವಿಸ್ತರಣೆ ಮಾಡುವುದು ಖಚಿತ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ‘ನಾವು ಡಿಸೆಂಬರ್ 9 ರಂದು ಸಂಪುಟ ವಿಸ್ತರಣೆ ಮಾಡಬೇಕು ಅಂದಿದ್ದೇವು, ಆದರೆ ಮರುದಿನ ಅಧಿವೇಶನ ಆರಂಭವಾಗುತ್ತದೆ. ಸದನದಲ್ಲಿ ಹೊಸ ಸಚಿವರುಗಳಿಗೆ ಉತ್ತರ ನೀಡುವುದು ಕಷ್ಟವಾಗುತ್ತದೆ ಅಂತ ಮಾಡಲಿಲ್ಲ. ಒಂದು ದಿನದಲ್ಲಿ ಏನೂ ಮಾಡಲು ಆಗುವುದಿಲ್ಲವಲ್ಲ’ಎಂದರು.
21 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಮಯ ನೀಡಿದ್ದಾರೆ. ಅವರನ್ನು ಭೇಟಿಯಾಗಿ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿ 22 ಕ್ಕೆ ವಿಸ್ತರಣೆ ಮಾಡುತ್ತೇವೆ. ಜೆಡಿಎಸ್ನ ಎಚ್.ಡಿ.ದೇವೇಗೌಡ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ ಎಂದರು.
ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬ ಕಂಪ್ಲಿ ಶಾಸಕ ಗಣೇಶ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿ ‘ಅವರ ಅಭಿಪ್ರಾಯಕ್ಕೆ ನಾನೇನು ಹೇಳಲಿ, ಮುಂದಿನ ಬಾರಿ ಜನ ವೋಟ್ ಕೊಟ್ರೆ ನೋಡೋಣ. ಈಗ ಸಿಎಂ ಸೀಟು ಖಾಲಿ ಇಲ್ಲವಲ್ಲ’ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ