ಮುಂದೆ ಜನ ವೋಟ್ ಕೊಟ್ರೆ ನೋಡೋಣ; ಸಿದ್ದರಾಮಯ್ಯ ಹೇಳಿದ್ದೇನು?
Team Udayavani, Dec 6, 2018, 2:17 PM IST
ಬೆಂಗಳೂರು: ಡಿಸೆಂಬರ್ 22 ಕ್ಕೆ ಸಂಪುಟ ವಿಸ್ತರಣೆ ಮಾಡುವುದು ಖಚಿತ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ‘ನಾವು ಡಿಸೆಂಬರ್ 9 ರಂದು ಸಂಪುಟ ವಿಸ್ತರಣೆ ಮಾಡಬೇಕು ಅಂದಿದ್ದೇವು, ಆದರೆ ಮರುದಿನ ಅಧಿವೇಶನ ಆರಂಭವಾಗುತ್ತದೆ. ಸದನದಲ್ಲಿ ಹೊಸ ಸಚಿವರುಗಳಿಗೆ ಉತ್ತರ ನೀಡುವುದು ಕಷ್ಟವಾಗುತ್ತದೆ ಅಂತ ಮಾಡಲಿಲ್ಲ. ಒಂದು ದಿನದಲ್ಲಿ ಏನೂ ಮಾಡಲು ಆಗುವುದಿಲ್ಲವಲ್ಲ’ಎಂದರು.
21 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಮಯ ನೀಡಿದ್ದಾರೆ. ಅವರನ್ನು ಭೇಟಿಯಾಗಿ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿ 22 ಕ್ಕೆ ವಿಸ್ತರಣೆ ಮಾಡುತ್ತೇವೆ. ಜೆಡಿಎಸ್ನ ಎಚ್.ಡಿ.ದೇವೇಗೌಡ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ ಎಂದರು.
ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬ ಕಂಪ್ಲಿ ಶಾಸಕ ಗಣೇಶ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿ ‘ಅವರ ಅಭಿಪ್ರಾಯಕ್ಕೆ ನಾನೇನು ಹೇಳಲಿ, ಮುಂದಿನ ಬಾರಿ ಜನ ವೋಟ್ ಕೊಟ್ರೆ ನೋಡೋಣ. ಈಗ ಸಿಎಂ ಸೀಟು ಖಾಲಿ ಇಲ್ಲವಲ್ಲ’ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ