ಬೆಳ್ಳಂದೂರು ಕೆರೆ:ರಾಜ್ಯ ಸರ್ಕಾರಕ್ಕೆ 50,BBMPಗೆ 25 ಕೋಟಿ ರೂ ದಂಡ!
Team Udayavani, Dec 6, 2018, 3:15 PM IST
ಬೆಂಗಳೂರು: ನಿರಂತರ ಬೆಂಕಿ ಮತ್ತು ಭಾರಿ ಪ್ರಮಾಣದ ನೊರೆಯಿಂದ ಸುದ್ದಿಯಾಗಿದ್ದ ಬೆಳ್ಳಂದೂರು ಕೆರೆ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕಾಗಿ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಮೇಲೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಚಾಟಿ ಬೀಸಿದ್ದು, ಬರೋಬ್ಬರಿ 75 ಕೋಟಿ ರೂಪಾಯಿ ದಂಡ ವಿಧಿಸಿದೆ.
ಕಳೆದ 1 ವರ್ಷಗಳಿಂದ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾ.ಎ.ಕೆ.ಗೋಯಲ್ ನೇತೃತ್ವ ಪೀಠ ಈ ಮಹತ್ವದ ತೀರ್ಪು ನೀಡಿದೆ.
ಕೆರೆಗಳ ದುಸ್ಥಿತಿಗೆ ಅಧಿಕಾರಿಗಳು ಕಾರಣವಾಗಿದ್ದಾರೆ. ಜವಾಬ್ಧಾರಿ ನಿರ್ವಹಿಸದಿದ್ದರೆ ಅಧಿಕಾರಿಗಳೇ ಹೊಣೆಯಾಗುತ್ತಾರೆ.ಅವರ ಕೆರಿಯರ್ ರೆಕಾಡ್ರನಲ್ಲಿ ಬರೆದಿಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ನಿರ್ಲಕ್ಷ್ಯವಹಿಸಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ 50 ಕೋಟಿ ರೂಪಾಯಿ ಮತ್ತು ಬಿಬಿಎಂಪಿಗೆ 25 ಕೋಟಿ ರೂಪಾಯಿ ದಂಡ ವಿಧಿಸಿದೆ. ಈ ದಂಡದ ಹಣವನ್ನು ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಟ್ಟಬೇಕು ಎಂದು ಸೂಚನೆ ನೀಡಿದೆ.
ಅಗರ ವರ್ತೂರು ಕೆರೆಗಳನ್ನು ಅಭಿವೃದ್ಧಿ ಪಡಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿದೆ.ಕೆರೆಗಳ ರಕ್ಷಣೆ ಕಾರ್ಯ ಆಗುತ್ತಿಲ್ಲ ಎಂದು ಎನ್ಜಿಟಿ ಕಿಡಿ ಕಾರಿದೆ.
ಕೆರೆಗಳ ರಕ್ಷಣೆಗೆ 500 ಕೋಟಿ ರೂಪಾಯಿ ಹಣ ಮೀಸಲಿಡಬೇಕು.ಕೆರೆ ಒತ್ತುವರಿ ಮತ್ತು ರಾಜಕಾಲುವೆ ಒತ್ತುವರಿಯನ್ನು ತಕ್ಷಣ ತೆರವುಗೊಳಿಸಬೇಕು ಎಂದು ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!