ಮಂತ್ರಾಲಯ ಶ್ರೀಗಳಿಂದ ಪದ್ಮನಾಭ ತೀರ್ಥರ ಆರಾಧನೆ
Team Udayavani, Dec 7, 2018, 6:05 AM IST
ಗಂಗಾವತಿ: ತಾಲೂಕಿನ ಆನೆಗೊಂದಿಯ ನವವೃಂದಾವನ ಗಡ್ಡಿಯಲ್ಲಿ ಗುರುವಾರ ಪದ್ಮನಾಭ ತೀರ್ಥರ ಮಧ್ಯಾರಾಧನೆ ನಡೆಯಿತು.
ಮಂತ್ರಾಲಯ ಮಠದ ಪೀಠಾಧ್ಯಕ್ಷ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಪದ್ಮನಾಭ ತೀರ್ಥರ ವೃಂದಾವನಕ್ಕೆ ಪಂಚಾಮೃತ ಅಭಿಷೇಕ, ಪುಷ್ಪಾಲಂಕಾರ, ಆರತಿ ಮಾಡಲಾಯಿತು. ಇದಕ್ಕೂ ಪೂರ್ವ ಮಂತ್ರಾಲಯ ಶ್ರೀಗಳು ಮೂಲ ರಾಮದೇವರ ಮೂರ್ತಿಗೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸುಬುಧೇಂದ್ರ ತೀರ್ಥರು, ಪದ್ಮನಾಭ ತೀರ್ಥರ ಆರಾಧನೆ ಕುರಿತು ನ್ಯಾಯಾಲಯ ಆದೇಶವನ್ನು ಮಂತ್ರಾಲಯ ಮಠ ಪಾಲಿಸಿದೆ. ಉತ್ತರ ಮತ್ತು ಮಧ್ಯಾರಾಧನೆ ಮಾಡಿ ನ್ಯಾಯಾಲಯ ಸೂಚನೆಯಂತೆ ಮುಂದಿನ ಆರಾಧನೆ ಮಾಡಲು ಉತ್ತರಾ ದಿ ಮಠದವರಿಗೆ ಅವಕಾಶ ನೀಡಲಾಗಿದೆ. ಎರಡೂ ಮಠಗಳು ಆರಾಧನೆಯನ್ನು ಸೌಹಾರ್ದತೆಯಿಂದ ಆಚರಿಸಿದರೆ ಒಳ್ಳೆಯದು ಎಂದರು.ಮಂತ್ರಾಲಯ, ರಾಯಚೂರು, ಬಳ್ಳಾರಿ ಕೊಪ್ಪಳ ಜಿಲ್ಲೆಗಳ ಅನೇಕ ಭಕ್ತರು ಮಧ್ಯಾರಾಧನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ