ಹಂಪಿ ಉತ್ಸವ ಮೂರು ದಿನ ಮಾಡಲು ತೀರ್ಮಾನ:ಸಾ.ರಾ. ಮಹೇಶ್
Team Udayavani, Dec 7, 2018, 6:20 AM IST
ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಮೂರು ದಿನಗಳ ಕಾಲ ವಿಶ್ವ ಪ್ರಸಿದ್ಧ ಹಂಪಿ ಉತ್ಸವ ಆಚರಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಇದೆ ಎನ್ನುವ ಕಾರಣಕ್ಕೆ ಹಂಪಿ ಉತ್ಸವವನ್ನು ಮುಂದೂಡಲು ತೀರ್ಮಾನಿಸಲಾಗಿತ್ತು. ಆದರೆ, ಸ್ಥಳೀಯ ಜನ ಪ್ರತಿನಿಧಿಗಳು ಉತ್ಸವ ಕೈ ಬಿಡಬಾರದು ಎಂದು ಮನವಿ ಮಾಡಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ಹಂಪಿ ಉತ್ಸವಕ್ಕಾಗಿ ಹಣ ಮೀಸಲಿಟ್ಟಿದೆ ಎಂದು ಹೇಳಿದರು.
ಹಂಪಿ ಉತ್ಸವ ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಹಣಕಾಸಿನ ಕೊರತೆ ಇಲ್ಲ. ಯಾರೂ ಭಿಕ್ಷೆ ಬೇಡುವ ಅಗತ್ಯವಿಲ್ಲ. ಉತ್ಸವಕ್ಕೆ ಅಗತ್ಯ ಹಣವನ್ನು ನೀಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿಯೇ ಉತ್ಸವದ ದಿನಾಂಕ ನಿಗದಿ ಮಾಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ