ರಾಣಿ ಸತೀಶಗೆ ಅಬ್ಬೆ, ಮಲ್ಲಣ್ಣಗೆ ಕೃಷಿ ಪ್ರಶಸ್ತಿ ಪ್ರದಾನ
Team Udayavani, Dec 8, 2018, 6:00 AM IST
ಬೀಳಗಿ: ತಾಲೂಕಿನ ಬಾಡಗಂಡಿ ಎಸ್.ಆರ್. ಪಾಟೀಲ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಬಾಪೂಜಿ ಅಂತಾರಾಷ್ಟ್ರೀಯ ಶಾಲಾ
ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡ ಸಾರ್ಥಕ ಸಂಭ್ರಮ ಹಾಗೂ ನುಡಿ ನಮನ ಸಮಾರಂಭದಲ್ಲಿ ದಿ| ಈರಮ್ಮ ಪಾಟೀಲ ಸ್ಮರಣಾರ್ಥ ನೀಡುವ ಪ್ರತಿಷ್ಠಿತ ಅಬ್ಬೆ ಪ್ರಶಸ್ತಿಯನ್ನು ಮಾಜಿ ಸಚಿವೆ ರಾಣಿ ಸತೀಶ ಹಾಗೂ ದಿ| ರುದ್ರಗೌಡ ಪಾಟೀಲ ನೆನಪಿಗಾಗಿ ನೀಡುವ ಶ್ರೇಷ್ಠ ಕೃಷಿ ಪ್ರಶಸ್ತಿಯನ್ನು ತಾಲೂಕಿನ ತುಂಬರಮಟ್ಟಿ ಗ್ರಾಮದ ಮಲ್ಲಣ್ಣ ಮೇಟಿ ಅವರಿಗೆ ಪ್ರದಾನ ಮಾಡಲಾಯಿತು.
ಪ್ರಶಸ್ತಿಗಳು ತಲಾ ಒಂದು ಲಕ್ಷ ರೂ. ನಗದು ಒಳಗೊಂಡಿವೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಅತ್ಯುನ್ನತ ಅಬ್ಬೆ ಪ್ರಶಸ್ತಿ ಮತ್ತು ಕಾಯಕ ತತ್ವದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ರೈತನಿಗೆ ಶ್ರೇಷ್ಠ ಕೃಷಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಎಸ್.ಆರ್. ಪಾಟೀಲ ಎಜ್ಯುಕೇಶನ್ ಫೌಂಡೇಶನ್ ವತಿಯಿಂದ ಈ ವರ್ಷ ನೀಡುತ್ತಿರುವ ಅಬ್ಬೆ ಹಾಗೂ ಕೃಷಿ ಪ್ರಶಸ್ತಿ ಮೂರನೇಯದ್ದಾಗಿದೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಆರ್. ಪಾಟೀಲ, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ, ಬಾಪೂಜಿ ಸಂಸ್ಥೆಯ ಆಡಳಿತಾಧಿಕಾರಿ ಎಚ್.ಬಿ. ಧರ್ಮಣ್ಣವರ, ಆವರಣ ನಿರ್ದೇಶಕ ಬೊಮ್ಮೇಗೌಡ,ಪ್ರಾಚಾರ್ಯ ಜಿ. ವೆಂಕಟೇಶ, ಹನುಮೇಶ ದುಡ್ಯಾಳ ಹಾಗೂ ಎಸ್.ಆರ್. ಪಾಟೀಲ ಕುಟುಂಬ ವರ್ಗದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ