ಸಮ್ಮಿಶ್ರ ಸರ್ಕಾರದಲ್ಲಿ ನಂಜುಂಡಪ್ಪ ವರದಿ “ಅನಾಥ’


Team Udayavani, Dec 9, 2018, 6:15 AM IST

vidhana-soudha-750.jpg

ಬೆಳಗಾವಿ:  ಈ ಭಾಗದಲ್ಲಿ ಅಧಿವೇಶನ ಬಂದರೆ ನಂಜುಂಡಪ್ಪ ವರದಿ ಅನುಷ್ಠಾನದ ಚರ್ಚೆ ಮುನ್ನೆಲೆಗೆ ಬರುತ್ತದೆ. ಆದರೆ ಸಮ್ಮಿಶ್ರ ಸರ್ಕಾರದಲ್ಲಿ ನಂಜುಂಡಪ್ಪ ವರದಿ ಸಧ್ಯಕ್ಕೆ ಅನಾಥ ಶಿಶುವಾಗಿದ್ದು, ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿಗೆ ಅಧ್ಯಕ್ಷರೂ ಇಲ್ಲ. ಬಜೆಟ್‌ನಲ್ಲಿ ಮೀಸಲಿಟ್ಟಿರುವ ಹಣವೂ ಬಿಡುಗಡೆಯಾಗಿಲ್ಲ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಯೋಜನೆಯ ಅನುಷ್ಠಾನದ ಸಾಧಕ ಬಾಧಕ ಕುರಿತು 2015 ರಲ್ಲಿಯೇ ಧಾರವಾಡದ ಸಿಎಂಡಿಆರ್‌ ಸಂಸ್ಥೆ ಸರ್ಕಾರಕ್ಕೆ ವರದಿ ನೀಡಿದ್ದು, ಆ ವರದಿಯನ್ನು ಸರ್ಕಾರ ಕೋಲ್ಡ್‌ ಸ್ಟೋರೇಜ್‌ನಲ್ಲಿ ಇಟ್ಟಿದ್ದು, ಹಾಲಿ ಸಮ್ಮಿಶ್ರ ಸರ್ಕಾರದಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಯಾವುದೇ ರೀತಿಯ ಹಣ ಬಿಡುಗಡೆಯಾಗಿಲ್ಲ. ಅಲ್ಲದೇ ಮಂಡಳಿಗೆ ಅಧ್ಯಕ್ಷರನ್ನೂ ನೇಮಕ ಮಾಡಿಲ್ಲ. ಹೀಗಾಗಿ ನಂಜುಂಡಪ್ಪ ವರದಿ ಒಂದು ರೀತಿಯಲ್ಲಿ ಅನಾಥವಾಗಿದೆ.

ವಿಶೇಷವಾಗಿ ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿಗೆ ಅಧ್ಯಕ್ಷರಾಗಲೂ ಯಾವ ಶಾಸಕರೂ ಮುಂದೆ ಬರುತ್ತಿಲ್ಲ ಎನ್ನುವುದೂ ಕೂಡ ವಿಶೇಷವಾಗಿದೆ. ಈ ಮಂಡಳಿಯಲ್ಲಿ ಅಧ್ಯಕ್ಷರಿಗೆ ನೇರವಾಗಿ ಹಣ ಬಿಡುಗಡೆಗೆ ಅವಕಾಶ ನೀಡದೇ ಯೋಜನೆಯ ಅನುಷ್ಠಾನದ ಜವಾಬ್ದಾರಿಯನ್ನು ಮಾತ್ರ ನೀಡಿರುವುದರಿಂದ ಬಹುತೇಕ ಶಾಸಕರು ಈ ಮಂಡಳಿಯ ಅಧ್ಯಕ್ಷ ಸ್ಥಾನವನ್ನೂ ಬೇಡ ಎನ್ನುವವರೇ ಇದ್ದಾರೆ ಎಂದು ಹೇಳಲಾಗುತ್ತಿದೆ.

ಹಿನ್ನೆಲೆ
ರಾಜ್ಯದಲ್ಲಿ ಅಭಿವೃದ್ಧಿಯಲ್ಲಿನ ತಾರತಮ್ಯ ನಿವಾರಣೆ ಕುರಿತು ಸಮಗ್ರ ವರದಿ ತಯಾರಿಸಲು 1998 ರಲ್ಲಿ ಹಿರಿಯ ಅರ್ಥಶಾಸ್ತ್ರಜ್ಞ ಡಾ.ಡಿ.ಎಂ. ನಂಜುಂಡಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಆ ಸಮಿತಿ 2000ರಲ್ಲಿ ಸರ್ಕಾರಕ್ಕೆ ವರದಿ ನೀಡಿತ್ತು. ಅಂದಿನ ಎಸ್‌.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್‌ ಸರ್ಕಾರ ವರದಿ ಸ್ವೀಕರಿಸಿದ್ದರೂ ಅನುಷ್ಠಾನಗೊಳಿಸುವ ಗೋಜಿಗೆ ಹೋಗಿರಲಿಲ್ಲ. 2007 ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವರದಿ ಅನುಷ್ಠಾನಕ್ಕೆ ತೀರ್ಮಾನಿಸಿದರು.

ಈ ವರದಿಯಲ್ಲಿ ರಾಜ್ಯದ 175 ತಾಲೂಕುಗಳಲ್ಲಿ 114 ತಾಲೂಕುಗಳನ್ನು ಹಿಂದುಳಿದ ತಾಲೂಕುಗಳು ಎಂದು ಗುರುತಿಸಿದ್ದು, ಅವುಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ 59 ತಾಲೂಕುಗಳು, ದಕ್ಷಿಣ ಕರ್ನಾಟಕದಲ್ಲಿ 55 ತಾಲೂಕುಗಳನ್ನು ಗುರುತಿಸಿದ್ದು, ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಪ್ರತಿ ವರ್ಷ 2000 ಕೋಟಿಯಂತೆ  8 ವರ್ಷಗಳವರೆಗೆ 16 ಸಾವಿರ ಕೋಟಿ ರೂ. ವಿಶೇಷ ಅನುದಾನ, ಅಲ್ಲದೇ ಬಜೆಟ್‌ನಲ್ಲಿ 15 ಸಾವಿರ ಕೋಟಿ ರೂಪಾಯಿ ಸೇರಿ 31 ಸಾವಿರ ಕೋಟಿ ರೂ.  ನೀಡುವಂತೆ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿತ್ತು.

ರಾಜ್ಯ ಸರ್ಕಾರ ಪ್ರತಿ ವರ್ಷ ನಿಗದಿಯಂತೆ ಬಜೆಟ್‌ನಲ್ಲಿ ಹಣ ಬಿಡುಗಡೆ ಮಾಡಿದ ಲೆಕ್ಕ ತೋರಿಸಿದ್ದು ಬಿಟ್ಟರೆ ನಿರೀಕ್ಷಿತ ಮಟ್ಟದಲ್ಲಿ ಹಿಂದುಳಿದ ತಾಲೂಕುಗಳಲ್ಲಿ ಅಭಿವೃದ್ಧಿ ಕಾಣಲಿಲ್ಲ. ಹೀಗಾಗಿ ವರದಿ ಅನುಷ್ಠಾನಕ್ಕೆ ಮತ್ತೆ ಐದು ವರ್ಷ ಅವಧಿ ವಿಸ್ತರಿಸಲಾಗಿದ್ದು, ಪ್ರತಿ ವರ್ಷ ಮೂರು ಸಾವಿರ ಕೋಟಿ ವಿಶೇಷ ಅನುದಾನವನ್ನೂ ಬಜೆಟ್‌ನಲ್ಲಿ ಮೀಸಲಿಡಲಾಗುತ್ತಿದೆ.

ಅಲ್ಲದೇ ವರದಿ ಜಾರಿಗೊಳಿಸಿದ ನಂತರ ಆಗಿರುವ ಆಭಿವೃದ್ಧಿ ಕುರಿತು ಧಾರವಾಡ ಸಿಎಂಡಿಆರ್‌ ಸಂಸ್ಥೆಗೆ ವರದಿ ನೀಡುವಂತೆ ಕಾಂಗ್ರೆಸ್‌ ಸರ್ಕಾರ ಸೂಚಿಸಿತ್ತು. ಅದರಂತೆ 2015 ರಲ್ಲಿ ಸಿಎಂಡಿಆರ್‌ ಸಂಸ್ಥೆ ನೀಡಿರುವ ವರದಿಯಲ್ಲಿ ಪ್ರಮುಖವಾಗಿ ಹಿಂದುಳಿದ ಜಿಲ್ಲೆಗಳಲ್ಲಿ ಆಗಿರುವ ಬದಲಾವಣೆಗಳು ಹಾಗೂ ರಾಜ್ಯ ಸರ್ಕಾರ ವರದಿ ಅನುಷ್ಠಾನಗೊಳಿಸಲು ಕೆಲವು ನಿಯಮಗಳನ್ನು ಪಾಲಿಸುವಂತೆ ಸೂಚಿಸಿದೆ ಎಂದು ತಿಳಿದು ಬಂದಿದೆ. ಉತ್ತರ ಕರ್ನಾಟಕದ ವಿಶೇಷವಾಗಿ ಹೈದರಾಬಾದ್‌ ಕರ್ನಾಟಕ ಭಾಗದ ತಾಲೂಕುಗಳ ಸ್ಥಿತಿಗತಿಯಲ್ಲಿ ಯಾವುದೇ ಬದಲಾವಣೆ ಕಂಡು ಬರದಿರುವುದು ವರದಿಯಲ್ಲಿ ಉಲ್ಲೇಖೀಸಲಾಗಿದೆ ಎಂದು ತಿಳಿದು ಬಂದಿದೆ.

2006 ರಲ್ಲಿ ಮೊದಲ ಬಾರಿ ಮುಖ್ಯಮಂತ್ರಿಯಾಗಿ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿದ್ದ ಕುಮಾರಸ್ವಾಮಿಯೇ ಈಗ ಮತ್ತೆ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿದ್ದು, ಅವರೇ ಅನುಷ್ಠಾನಕ್ಕೆ ತೀರ್ಮಾನಿಸಿದ್ದ ನಂಜುಂಡಪ್ಪ ವರದಿ ಜಾರಿ ಕುರಿತು ಸಿಎಂಡಿಆರ್‌ ಸಂಸ್ಥೆ ನೀಡಿರುವ ವರದಿಯನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡಿಸುವ ನಿರೀಕ್ಷೆಯನ್ನು ಉತ್ತರ ಕರ್ನಾಟಕ ಭಾಗದ ಜನತೆ ಹೊಂದಿದ್ದಾರೆ.

ನಂಜುಂಡಪ್ಪ ವರದಿಯ ಪ್ರಮುಖಾಂಶಗಳು
ರಾಜ್ಯದಲ್ಲಿ 114 ಹಿಂದುಳಿದ ತಾಲೂಕುಗಳು
39 ಅತ್ಯಂತ ಹಿಂದುಳಿದ ತಾಲೂಕುಗಳು
40 ಹಿಂದುಳಿದ ತಾಲೂಕುಗಳು
35 ಹಿಂದುಳಿದ ತಾಲೂಕುಗಳು

ಸಂಪನ್ಮೂಲ ಹಂಚಿಕೆ ಪ್ರಮಾಣ
ಕಲಬುರಗಿ ವಿಭಾಗ -28 ತಾಲೂಕುಗಳು 40% ರಷ್ಟು ಅನುದಾನ
ಬೆಳಗಾವಿ ವಿಭಾಗ-31 ತಾಲೂಕುಗಳು 20 % ರಷ್ಟು ಅನುದಾನ
ಬೆಂಗಳೂರು ವಿಭಾಗ-  33 ತಾಲೂಕುಗಳು 25% ರಷ್ಟು ಅನುದಾನ
ಮೈಸೂರು ವಿಭಾಗ 22 ತಾಲೂಕುಗಳು 15% ರಷ್ಟು ಅನುದಾನ.

ನಮ್ಮ ಸಂಸ್ಥೆಯಿಂದ 2015 ರಲ್ಲಿಯೇ ರಾಜ್ಯ ಸರ್ಕಾರಕ್ಕೆ ವರದಿ ನೀಡಿದ್ದೇವೆ. ಈ ಬಗ್ಗೆ ರಾಜ್ಯ ಸರ್ಕಾರ ಏನು ಮಾಡಿದೆ ಎಂಬ ಮಾಹಿತಿ ನಮಗೆ ಬಂದಿಲ್ಲ. ವರದಿ ಅನುಷ್ಠಾನದ ಕುರಿತು ಕೆಲವು ಸಲಹೆಗಳನ್ನು ನೀಡಲಾಗಿತ್ತು. ಸರ್ಕಾರ ಒಪ್ಪಿಕೊಂಡಿದೆಯೋ ಇಲ್ಲವೋ ಎನ್ನುವ ಬಗ್ಗೆಯೂ ನಮಗೆ ಮಾಹಿತಿ ಇಲ್ಲ.
– ಸಿದ್ದಲಿಂಗಸ್ವಾಮಿ, ಅಸಿಸ್ಟಂಟ್‌ಪ್ರೊಫೆಸರ್‌, ಸಿಎಂಡಿಆರ್‌ ಸಂಸ್ಥೆ.

ನಂಜುಂಡಪ್ಪ ವರದಿ ಅನುಷ್ಠಾನ ಯಾವ ಸ್ಥಿತಿಯಲ್ಲಿದೆ ಎನ್ನುವ ಮಾಹಿತಿ ಯಾವುದೂ ಇಲ್ಲ. ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಹಣ ಇಟ್ಟಿದೆ ಎಂದು ಘೋಷಣೆ ಮಾಡುತ್ತದೆ. ಅನುಷ್ಠಾನದ ವಿಷಯದಲ್ಲಿ ಹಾಲಿ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಅಸಮಾನತೆ ನಿವಾರಣೆಗೆ ನಂಜುಂಡಪ್ಪ ವರದಿಯ ಮೂಲ ಆಶಯ ಏನಿದೆ ಅದು ಪರಿಗಣಿಸುತ್ತಿಲ್ಲ.
– ತ್ರಿವಿಕ್ರಮ ಜೋಷಿ, ಮಾಜಿ ಅಧ್ಯಕ್ಷರು, ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ.

– ಶಂಕರ ಪಾಗೋಜಿ

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.