ಇನ್ನೂ ಮುಗಿದಿಲ್ಲ ಕಬ್ಬು ಬಾಕಿ ಪಾವತಿ ಗೊಂದಲ


Team Udayavani, Dec 9, 2018, 6:10 AM IST

sugarcane-ss.jpg

ಬೆಳಗಾವಿ: ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ 39 ಕೋಟಿ ರೂ.ಮಾತ್ರ ಬಾಕಿ ಉಳಿಸಿಕೊಂಡಿವೆ ಎಂದು ಸರ್ಕಾರ
ಹೇಳುತ್ತಿದ್ದರೆ, ಕಾರ್ಖಾನೆಗಳಿಂದ 619 ಕೋಟಿ ರೂ.ಬಾಕಿ ಬರಬೇಕಿದೆ ಎಂದು ಕಬ್ಬು ಬೆಳೆಗಾರರು ಹೇಳುತ್ತಿದ್ದಾರೆ. ಇದರಿಂದ ಸೃಷ್ಟಿಯಾಗಿರುವ ಗೊಂದಲದಿಂದಾಗಿ ಕಬ್ಬು ಬೆಳೆಗಾರರು ಹಾಗೂ ಸರ್ಕಾರದ ನಡುವೆ ಹಗ್ಗ ಜಗ್ಗಾಟ ಮುಂದುವರಿದೆ.

ಕಾರ್ಖಾನೆ ಹಾಗೂ ಕಬ್ಬು ಬೆಳೆಗಾರರ ನಡುವಿನ ಲಿಖೀತ ಒಪ್ಪಂದ ಪಾಲನೆ ಯಾಗದಿದ್ದರಷ್ಟೇ ಕ್ರಮ ಜರುಗಿಸಬಹುದಾಗಿದೆ ಎಂದು ಸರ್ಕಾರ ಹೇಳುತ್ತಿದೆ.ಆದರೆ, ಮೌಖೀಕ ಭರವಸೆ ನೀಡಿರುವುದಾಗಿ ಒಪ್ಪಿಕೊಂಡಿರುವ ಕಾರ್ಖಾನೆ ಮಾಲೀಕರಿಂದ ಬಾಕಿ ಕೊಡಿಸಬೇಕು ಎಂಬುದು ಕಬ್ಬು ಬೆಳೆಗಾರರ ಒತ್ತಾಯ. ಈ ಹಿನ್ನೆಲೆಯಲ್ಲಿ ಕಾರ್ಖಾನೆಗಳಿಂದ ಬಾಕಿಯಿ ರುವ ಒಟ್ಟು 619 ಕೋಟಿ ರೂ.ಕೊಡಿಸ ಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ.

ಪ್ರಸಕ್ತ ಸಾಲಿನಲ್ಲಿ 17.24 ಕೋಟಿ ರೂ. ಮಾತ್ರ ಬಾಕಿಯಿದೆ. ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ನಡುವಿನ ಲಿಖೀತ ಒಪ್ಪಂದದಂತೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಮೊತ್ತ ಪಾವತಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬಹುದು. ಆದರೆ,ಲಿಖೀತ ಒಪ್ಪಂದವಿಲ್ಲದೆ ಮೌಖೀಕ ಮಾತುಕತೆ ಆಧರಿಸಿ ಬಾಕಿ ಪಾವತಿಸುವಂತೆ ಸರ್ಕಾರ ಸೂಚಿಸಲು ಸಾಧ್ಯವಿಲ್ಲ. ಒಂದೊಮ್ಮೆ ಸರ್ಕಾರ ಕ್ರಮ ಕೈಗೊಂಡರೂ ಅದನ್ನು ಕಾರ್ಖಾನೆ ಮಾಲೀಕರು ನ್ಯಾಯಾಲಯದಲ್ಲಿ ಪ್ರಶ್ನಿಸುವ ಸಾಧ್ಯತೆ ಇರುತ್ತದೆ. ಬಾಕಿ ಉಳಿಸಿಕೊಂಡಿದ್ದ ಕಾರ್ಖಾನೆಗಳಿಗೆ ಮೂರು ತಿಂಗಳ ಹಿಂದೆ ನೋಟಿಸ್‌ ನೀಡಲಾಗಿತ್ತು. ಇತ್ತೀಚೆಗೆ ಯಾವುದೇ ಕಾರ್ಖಾನೆಗೆ
ನೋಟಿಸ್‌ ನೀಡಿಲ್ಲ ಎಂದು ಕಬ್ಬು ಅಭಿವೃದಿಟಛಿ ಆಯುಕ್ತರ ಕಚೇರಿ ಮೂಲಗಳು ತಿಳಿಸಿವೆ.

ಕಬ್ಬು ಬೆಳೆಗಾರರು ಇತ್ತೀಚೆಗೆ ಹೋರಾಟ ಆರಂಭಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಿಗಳ ಸಭೆ ನಡೆಸಿ ಬಾಕಿ ಪಾವತಿಗೆ ಸೂಚಿಸಿದ್ದರು. ಅಲ್ಲದೆ, ಕಬ್ಬು ಬೆಳೆಗಾರರು, ಕಾರ್ಖಾನೆ ಮಾಲೀಕರ ಪ್ರತಿನಿಧಿಗಳು, ರೈತ ಮುಖಂಡರೊಂದಿಗೆ ಸಭೆಗಳನ್ನು ನಡೆಸಿದರೂ ಬಾಕಿ ಪಾವತಿಗೆ ಸಂಬಂಧಪಟ್ಟಂತೆ ಗೊಂದಲ ಮಾತ್ರ ನಿವಾರಣೆಯಾಗಿಲ್ಲ.

ಪ್ರಸಕ್ತ ಸಾಲಿನಲ್ಲಿ ಕಾರ್ಖಾನೆಗಳಿಂದ 17.24 ಕೋಟಿ ರೂ.ಹಾಗೂ ಹಿಂದಿನ ವರ್ಷಗಳ ಬಾಕಿ 22.24 ಕೋಟಿ ರೂ.ಸೇರಿ ಒಟ್ಟು 39 ಕೋಟಿ ರೂ.ಬಾಕಿಯಿದ್ದು, ಕೂಡಲೇ ಪಾವತಿಸುವಂತೆ ಕೈಗಾರಿಕೆಗಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಆದರೆ, ಕಾರ್ಖಾನೆಗಳು ರೈತರಿಗೆ ನೀಡಿರುವ ಭರವಸೆಯಂತೆ 619 ಕೋಟಿ ರೂ.ಪಾವತಿಸಬೇಕಿದ್ದು,ಅದರ ತ್ವರಿತ ಪಾವತಿಗೆ ಸರ್ಕಾರ ಕ್ರಮ
ಕೈಗೊಳ್ಳಬೇಕು ಎಂಬುದು ಕಬ್ಬು ಬೆಳೆಗಾರರ ಆಗ್ರಹ.

ಕೇಂದ್ರ ಸರ್ಕಾರದ ಕ್ರಮದಿಂದಲೂ ತೊಂದರೆ: ಈ ಹಿಂದೆ ಪ್ರತಿ ಟನ್‌ ಕಬ್ಬಿನಿಂದ ಪಡೆಯುವ ಸಕ್ಕರೆ ಇಳುವರಿ ಪ್ರಮಾಣವನ್ನು ಶೇ.9.5ರಷ್ಟಕ್ಕೆ ಕೇಂದ್ರ ಸರ್ಕಾರ ನಿಗದಿಪಡಿಸಿತ್ತು. ಇದರಿಂದ ಕಾವೇರಿ ಮತ್ತು ಕೃಷ್ಣಾ ಕೊಳ್ಳದ ಕಬ್ಬು ಬೆಳೆಗಾರರಿಗೂ ಅನುಕೂಲಕರವಾಗಿತ್ತು. ಆದರೆ, ಕೇಂದ್ರ ಸರ್ಕಾರವು ಪ್ರತಿ ಟನ್‌ ಕಬ್ಬಿನಿಂದ ಪಡೆಯುವ ಸಕ್ಕರೆ ಇಳುವರಿ ಪ್ರಮಾಣವನ್ನು ಶೇ.10ಕ್ಕೆ ಏರಿಕೆ ಮಾಡಿರುವುದರಿಂದ ಬೆಳೆಗಾರರು ನಷ್ಟ ಅನುಭವಿಸುವಂತಾಗಿದ್ದು, 2,750 ರೂ.ಎಫ್ ಆರ್‌ಪಿ ದರವನ್ನು ಪೂರ್ಣ ಪ್ರಮಾಣದಲ್ಲಿ ಪಡೆಯಲು ಸಾಧ್ಯವಾಗದೆ ನಷ್ಟವಾಗುತ್ತಿದೆ. ಹಾಗಾಗಿ ಕೇಂದ್ರ ಸರ್ಕಾರ ಸಕ್ಕರೆ ಇಳುವರಿ ಪ್ರಮಾಣವನ್ನು ಹಿಂದಿನಂತೆ ಶೇ.9.5ಕ್ಕೆ ಇಳಿಸಬೇಕು.ಇಲ್ಲದಿದ್ದರೆ ರಾಜ್ಯ ಸರ್ಕಾರ ಎಫ್ಆರ್‌ಪಿ ದರದ ಜತೆಗೆ 300ರೂ. ಸೇರಿಸಿ ಕೊಡಬೇಕು ಎಂಬುದು ಕಬ್ಬು ಬೆಳೆಗಾರರ ಒತ್ತಾಯ.

ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಉಳಿಸಿಕೊಂಡಿರುವ 619 ಕೋಟಿ ರೂ. ಪಾವತಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಎಫ್ಆರ್‌ಪಿ ದರದ ಮೇಲೆ 300 ರೂ. ಸೇರಿಸಿ ನೀಡಬೇಕು. ಸಾಲ ಮನ್ನಾ ಕುರಿತಾದ ಗೊಂದಲಗಳನ್ನು ನಿವಾರಿಸಿ ತ್ವರಿತವಾಗಿ ರೈತರನ್ನು ಋಣಮುಕ್ತರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಭಾನುವಾರ ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಆರಂಭಿಸಲಾಗುವುದು. ಸ್ಪಂದಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು.
– ಕುರುಬೂರು ಶಾಂತಕುಮಾರ್‌, ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ

– ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.