‘ಶ್ರೀಗಳ ಮಾರ್ಗದರ್ಶನದಲ್ಲಿ ವಿಧಿ-ವಿಧಾನ’
Team Udayavani, Jan 31, 2019, 12:30 AM IST
ತುಮಕೂರು: ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆಗಾಗಿ ಸಿದ್ಧಗಂಗಾ ಮಠ ಸರ್ವ ರೀತಿಯಲ್ಲಿ ಸಿದ್ಧಗೊಂಡಿದ್ದು, ಹಿರಿಯ ಶ್ರೀಗಳ ಅಪೇಕ್ಷೆಯಂತೆ ಅವರ ಎಲ್ಲಾ ಕಾರ್ಯಗಳನ್ನು ನೆರವೇರಿಸಲಾಗುವುದು. ಅವರ ಶ್ರೀರಕ್ಷೆಯಲ್ಲಿ ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಎಂದು ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ತಿಳಿಸಿದರು.
ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಜ.31ರಂದು ಬೆಳಗ್ಗೆ ಶ್ರದ್ಧಾ ಭಕ್ತಿಯಿಂದ ಪುಣ್ಯಸ್ಮರಣೆ ಕಾರ್ಯಕ್ರಮ ನೆರವೇರಲಿದ್ದು, ಅದಕ್ಕಾಗಿ ಈಗಾಗಲೇ ಸಕಲ ಸಿದ್ದತಾ ಕಾರ್ಯಗಳು ಪೂರ್ಣಗೊಳ್ಳುವ ಹಂತಕ್ಕೆ ತಲುಪಿವೆ. ಬೆಳಗ್ಗೆಯಿಂದ ಶ್ರೀಗಳ ಗದ್ದುಗೆ ಪೂಜೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಲಿದೆ. ಶ್ರೀಗಳ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು. ನಂತರ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ನುಡಿನಮನ ಕಾರ್ಯಕ್ರಮ ನಡೆಯಲಿದೆ ಎಂದರು.
ಹಿರಿಯ ಶ್ರೀಗಳ ಪುಣ್ಯಸ್ಮರಣೆಗೆ ನಾಡಿನ ವಿವಿಧೆಡೆಗಳಿಂದ ಆಗಮಿಸುವ ಲಕ್ಷಾಂತರ ಮಂದಿ ಭಕ್ತಾದಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವಿಶೇಷ ರೀತಿಯಲ್ಲಿ ದಾಸೋಹ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಪೂಜ್ಯರು ಲಿಂಗೈಕ್ಯರಾದ ಸಂದರ್ಭದಲ್ಲಿ ಯಾವ ರೀತಿಯ ಪೂರ್ವ ಸಿದ್ಧತೆಗಳನ್ನೂ ಮಾಡಿಕೊಂಡಿರಲಿಲ್ಲ. ಆ ಸಂದರ್ಭದಲ್ಲೂ ಭಕ್ತಾದಿಗಳೇ ಸ್ವಯಂ ಪ್ರೇರಿತರಾಗಿ ಎಲ್ಲ ಕೆಲಸ ಕಾರ್ಯಗಳನ್ನು ನಿರ್ವಹಿಸಿದ್ದರು. ಈ ಕಾರ್ಯಕ್ರಮವೂ ಸಹ ಯಾವುದೇ ತೊಂದರೆಯಾಗದಂತೆ ಸುಸೂತ್ರವಾಗಿ ನೆರವೇರಲಿದೆ ಎಂದರು.
ಬೆಳಗ್ಗೆಯಿಂದಲೇ ಕಾರ್ಯಕ್ರಮ ಶುರು
ಬೆಳಗ್ಗೆ ಶ್ರೀ ಸಿದ್ಧಲಿಂಗಾ ಸ್ವಾಮೀಜಿಯಿಂದ ಇಷ್ಟಲಿಂಗ ಪೂಜೆ, ಶ್ರೀಕ್ಷೇತ್ರನಾಥ ಸಿದ್ಧಲಿಂಗೇಶ್ವರ ಸ್ವಾಮಿಗೆ ಪೂಜೆ, ಉದ್ದಾನ ಶಿವಯೋಗಿಗಳ ಗದ್ದುಗೆ ಪೂಜೆ ನಡೆಯಲಿದೆ. ನಂತರ, ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 11ನೇ ದಿನದ ಪುಣ್ಯಾರಾಧನೆ ಅಂಗವಾಗಿ ವಿಶೇಷ ಅಭಿಷೇಕ, ಮಂತ್ರಾಕ್ಷತೆ ಪೂಜೆಯನ್ನು ಸುತ್ತೂರು ಮಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ನೆರವೇರಿಸುವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ