ವಾಸ್ತುದೋಷದ ಕಾರಣ: ವಾಸ ಸ್ಥಳ ಬದಲಿಸಿದ ಸಿಎಂ!
Team Udayavani, Dec 9, 2018, 6:00 AM IST
ಬೆಳಗಾವಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಜ್ಯೋತಿಷ್ಯ, ವಾಸ್ತು ಲೆಕ್ಕಾಚಾರ ಬೆಳಗಾವಿಯ ಚಳಿಗಾಲ ಅಧಿವೇಶನಕ್ಕೂ ತಟ್ಟಿದೆ. ಸಿಎಂ ವಾಸ್ತವ್ಯಕ್ಕೆ ನಿಗದಿ ಮಾಡಿದ್ದ ಪ್ರವಾಸಿ ಮಂದಿರದ ವಾಸ್ತು ಸರಿ ಇಲ್ಲ ಎಂದು ವಿಟಿಯು ಗೆಸ್ಟ್ಹೌಸ್ಗೆ ಸ್ಥಳಾಂತರಗೊಂಡಿದೆ!
ಬೆಳಗಾವಿಯಲ್ಲಿ ಸಾಮಾನ್ಯವಾಗಿ ಈವರೆಗೆ ನಡೆದ ಅಧಿವೇಶನದ ವೇಳೆ ಎಲ್ಲ ಮುಖ್ಯಮಂತ್ರಿಗಳು ಪ್ರವಾಸಿ ಮಂದಿರದಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಆದರೆ ಈ ಬಾರಿ ದೋಸ್ತಿ ಸರ್ಕಾರದ ಸಿಎಂ ಕುಮಾರಸ್ವಾಮಿ ಅವರು ವಾಸ್ತುದೋಷ ಹಿನ್ನೆಲೆಯಲ್ಲಿ ಪ್ರವಾಸಿ ಮಂದಿರದಲ್ಲಿರಲು ನಿರಾಕರಿಸಿದ್ದು, ವಿಟಿಯು ಗೆಸ್ಟ್ ಹೌಸ್ನಲ್ಲಿ ಉಳಿದುಕೊಳ್ಳಲು ನಿರ್ಧರಿಸಿದ್ದಾರೆ.
ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಕುಮಾರಸ್ವಾಮಿ ದೇವಸ್ಥಾನಗಳ ಮೊರೆ ಹೋಗುತ್ತಿದ್ದಾರೆ. ಸರ್ಕಾರದ ಉಳಿವಿಗಾಗಿ ವಿವಿಧ ಹೋಮ-ಹವನ ಮಾಡಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಸಚಿವ ಎಚ್.ಡಿ. ರೇವಣ್ಣ ಅವರು ಕೂಡ ಜ್ಯೋತಿಷ್ಯ ಹಾಗೂ ವಾಸ್ತು ಪ್ರಕಾರವೇ ಹಲವು ಯೋಜನೆ, ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಈಗ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಲಿರುವ ಕುಮಾರಸ್ವಾಮಿ, ಅಲ್ಲೂ ವಾಸ್ತು ದೋಷವಿದೆ ಎಂಬ ಕಾರಣಕ್ಕಾಗಿ ಪ್ರವಾಸಿ ಮಂದಿರದಲ್ಲಿರಲು ನಿರಾಕರಿಸಿದ್ದಾರೆ.
ಬೆಳಗಾವಿ ನಗರದ ಹೊರವಲಯದಲ್ಲಿರುವ ಈ ಗೆಸ್ಟ್ಹೌಸ್, ಮುಖ್ಯಮಂತ್ರಿಗಳು ಸಂಚರಿಸುವಾಗ ಭಾರೀ ಸಂಚಾರ ದಟ್ಟಣೆ ಸೃಷ್ಟಿಸುವ ಸಾಧ್ಯತೆ ಇದೆ. ಟ್ರಾಫಿಕ್ ಪೊಲೀಸರಿಗೆ ಟ್ರಾಫಿಕ್ ನಿಯಂತ್ರಣ ಸವಾಲಾಗಿ ಪರಿಣಮಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!