ರೈತಸಂಘದ ಹಸಿರು ಟವೆಲ್‌ ಶೀಘ್ರ ಬದಲು


Team Udayavani, Dec 10, 2018, 6:00 AM IST

farmer-protest-karnataka.jpg

ಬೆಳಗಾವಿ: ಹಸಿರು ಶಾಲು ಹಾಕಿಕೊಂಡು ರಾಜಕಾರಣಿಗಳು ತಮ್ಮ ಜೀವನೋಪಾಯಕ್ಕಾಗಿ ಬಳಸಿಕೊಂಡು ಇದನ್ನು ಮಲೀನ ಮಾಡುತ್ತಿದ್ದಾರೆ. ಹೀಗಾಗಿ ಶುಭ್ರ ಬಿಳಿ ವಸ್ತ್ರಕ್ಕೆ ಹಸಿರು ಅಂಚಿರುವ ಟವೆಲ್‌ ಚಿಹ್ನೆಯಾಗಿ ಮಾಡುವ ಚಿಂತನೆ ನಡೆದಿದೆ ಎಂದು ಕೇಂದ್ರದ ಮಾಜಿ ಸಚಿವ, ರೈತ ಹೋರಾಟಗಾರ ಬಾಬಾಗೌಡ ಪಾಟೀಲ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಹೆಸರಿನಲ್ಲಿ ಕೆಲವರು ಹಸಿರು ಶಾಲನ್ನೇ ಛಾಪು ಮಾಡಿಕೊಂಡು ಮೋಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡ, ರಾಹುಲ್‌ ಗಾಂಧಿ ಶಾಲು ಹಾಕಿಕೊಂಡರೂ ರೈತರಿಗೆ ಇವರಿಂದ ಯಾವುದೇ ಲಾಭವಾಗುತ್ತಿಲ್ಲ. ರೈತರ ಪರ ಎಂದು ಹೇಳಿಕೊಂಡು ಮತಕ್ಕಾಗಿ ತಮ್ಮ ಜೀವನೋಪಾಯ ಮಾಡಿಕೊಳ್ಳುತ್ತಿದ್ದಾರೆ ಎಂದರು.

ಮರಳು ಮಾಫಿಯಾ ಜತೆಗೂಡಿ ಕೆಲವರು ಹಸಿರು ಶಾಲು ಧರಿಸಿ ವಸೂಲಿ ದಂಧೆ ನಡೆಸಿದ್ದಾರೆ. ಬೌದ್ಧಿಕವಾಗಿ ಶೋಷಣೆ ಮಾಡುವ ಅಸ್ತ್ರವಾಗಿ ಮಾಡಿಕೊಂಡಿದ್ದಾರೆ. ಇದಕ್ಕೆ ಕಡಿವಾಣ ಹಾಕಲು, ಸಂಘಟನೆಯಲ್ಲಿ ಪರಿಶುದ್ಧತೆ ತರಲು ಇದರ ಚಿಹ್ನೆ ಬದಲಾಯಿಸಲಾಗುವುದು. ನಮಗೆ ಸಾಲ ಮನ್ನಾ ಮಾಡಬೇಕೆಂಬ ಹಪಾಹಪಿ ಇಲ್ಲ. ಸಾಲಮನ್ನಾ ಮಾಡಿದರೆ ಮತ್ತೆ ಸಾಲ ಮಾಡುವ ಅನಿವಾರ್ಯತೆ ರೈತರಿಗಿದೆ. ಸಾಲದಿಂದ ಮುಕ್ತರಾದರೂ ಮತ್ತೆ ಸಾಲದ ಬೆನ್ನು ಹತ್ತುವ ಪರಿಸ್ಥಿತಿ ಇದೆ. ಇದನ್ನು ತಪ್ಪಿಸಲು ಸರ್ಕಾರ ಪರಿಹಾರ ಹುಡುಕಬೇಕು ಎಂದರು. 

ಸಕ್ಕರೆ ದರ ನೀಡಬೇಕು ಎಂದು ರೈತರ ಪರವಾಗಿ ಬಿಜೆಪಿಯವರು ಪ್ರತಿಭಟನೆ ನಡೆಸುತ್ತಿರುವುದು ಹಾಸ್ಯಾಸ್ಪದ. ಬಿಜೆಪಿಯ ಉಮೇಶ ಕತ್ತಿ, ಮುರುಗೇಶ ನಿರಾಣಿ, ಕಾಂಗ್ರೆಸ್‌ನ ಜಾರಕಿಹೊಳಿ, ಶಾಮನೂರು ಶಿವಶಂಕರಪ್ಪ ಅವರ ಕಾರ್ಖಾನೆಗಳಿವೆ. ದರ ಕೊಡುವಂತೆ ಅವರಿಗೆ ಹೇಳದವರು ಇಲ್ಲಿ ಬಂದು ಪ್ರತಿಭಟನೆ ನಡೆಸುತ್ತಿರುವುದು ಏಕೆ? ವಿಷಯಾಧಾರಿತ ಬೆಂಬಲ ಕೊಡುತ್ತೇವೆ ಹೊರತು ರಾಜಕೀಯ ಸ್ವಾರ್ಥಕ್ಕಾಗಿ ಪ್ರತಿಭಟನೆ ನಡೆಸಿದರೆ ನಮ್ಮ ಬೆಂಬಲ ಇಲ್ಲ ಎಂದರು.

ಅಜಯ್‌ ನಾಗಭೂಷಣ ವರ್ಗಾವಣೆ ಮಾಡಿ
ಸಕ್ಕರೆ ಆಯುಕ್ತರಾಗಿರುವ ಅಜಯ್‌ ನಾಗಭೂಷಣ ಅವರು ಮಂಡ್ಯದಲ್ಲಿರುವ ಮೈಸೂರು ಶುಗರ್‌ ಕಂಪನಿ ಸಕ್ಕರೆ ಕಾರ್ಖಾನೆಯ ಚೇರಮನ್‌ರಾಗಿದ್ದು, ಇದರ ಕ್ರಷಿಂಗ್‌ ಸಾಮರ್ಥ್ಯ 5 ಸಾವಿರ ಟನ್‌ ಇದ್ದರೂ 2017-18ರಲ್ಲಿ ಕೇವಲ 71 ಸಾವಿರ ಚೀಲ ಸಕ್ಕರೆ ಮಾತ್ರ ಉತ್ಪಾದಿಸಲಾಗಿದೆ. ಇದನ್ನೆಲ್ಲ ಬಿಟ್ಟು ಬೇರೆ ಕಾರ್ಖಾನೆಗಳಿಗೆ ಬೀಗ ಹಾಕಿರುವುದು ಎಷ್ಟರ ಮಟ್ಟಿಗೆ ಸರಿ?  ಇಂತಹ ಅಧಿಕಾರಿಗಳು ರೈತರ ಹಿತ ಕಾಪಾಡಲು ಸಾಧ್ಯವೇ ಇಲ್ಲ. ಹೀಗಾಗಿ ಮುಖ್ಯಮಂತ್ರಿಗಳು ಅಧಿವೇಶನ ಮುಗಿಯುವುದರೊಳಗೆ ಅಜಯ ನಾಗಭೂಷಣ ಅವರನ್ನು ವರ್ಗಾವಣೆ ಮಾಡಬೇಕು ಎಂದು ಬಾಬಾಗೌಡ ಆಗ್ರಹಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.