ಎಚ್ಡಿಕೆ-ಸೋಮಣ್ಣ-ಡಿಕೆಶಿ ಮಾತು
Team Udayavani, Dec 11, 2018, 6:45 AM IST
ವಿಧಾನಸಭೆ: ವಿಧಾನಸಭೆಯಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸಲ್ಲಿಸುವ ಸಂದರ್ಭದಲ್ಲಿ ಕುಮಾರಸ್ವಾಮಿ, ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಕೆಲಹೊತ್ತು ಮಾತುಕತೆ ನಡೆಸಿದ್ದು ಕುತೂಹಲ ಮೂಡಿಸಿತು.
ಸಂತಾಪ ನಿರ್ಣಯದ ಮೇಲೆ ಮಾತನಾಡಿದ ಯಡಿಯೂರಪ್ಪ ಅವರು ಸಮಾವೇಶದಲ್ಲಿ ಪಾಲ್ಗೊಳ್ಳಲು ನಿರ್ಗಮಿಸಿದರು. ನಂತರ ಸೋಮಣ್ಣ ಅವರು ಮುಖ್ಯಮಂತ್ರಿ ಬಳಿ ತೆರಳಿದರು. ಸೋಮಣ್ಣ ಬಂದಾಗ ಮುಖ್ಯಮಂತ್ರಿ ಜತೆ ಮಾತನಾಡುತ್ತಿದ್ದ ಎಚ್.ವಿಶ್ವನಾಥ್ ಅಲ್ಲಿಂದ ನಿರ್ಗಮಿಸಿದರು. ಇದೇ ವೇಳೆ, ಕುಮಾರಸ್ವಾಮಿಯವರು ಶಿವಕುಮಾರ್ ಅವರನ್ನು ಕರೆದರು. ಮೂವರೂ ಕೆಲ ಹೊತ್ತು ಗಹನ ಚರ್ಚೆಯಲ್ಲಿ ತೊಡಗಿದ್ದರು.
ಸದನ ಮುಂದೂಡಲು ಮನವಿ
ಸುವರ್ಣಸೌಧ: ವಿಧಾನಸಭೆ ಹಾಗೂ ವಿಧಾನಪರಿಷತ್ ಕಾರ್ಯಕಲಾಪ ಪಟ್ಟಿಯಲ್ಲಿ ಸೋಮವಾರ ಪ್ರಶ್ನೋತ್ತರ ಸೇರಿ ಇತರ ಕಲಾಪದ ವಿಷಯ ಸೂಚಿ ನೀಡಲಾಗಿತ್ತು. ಆದರೆ, ಪ್ರತಿಪಕ್ಷ ನಾಯಕ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಶಾಸಕರು ಸ್ಪೀಕರ್ ರಮೇಶ್ಕುಮಾರ್ ಆವರನ್ನು ಭೇಟಿ ಮಾಡಿ, ವಾಜಪೇಯಿಗೆ ಸಂತಾಪ ಸೂಚಿಸುತ್ತಿರುವುದರಿಂದ ಅವರಿಗೆ ಗೌರವ ಸಲ್ಲಿಸಲು ಸದನ ಮುಂದೂಡಿ ಎಂದು ಮನವಿ ಮಾಡಿದರು. ಅದೇ ರೀತಿ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸಪೂಜಾರಿ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಸದನ ಮುಂದೂಡಲು ಮನವಿ ಮಾಡಿದರು. ಹೀಗಾಗಿ, ಸಂತಾಪ ಸೂಚಕದ ನಂತರ ಎರಡೂ ಸದನಗಳನ್ನು ಮುಂದೂಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ