ಅತಿಥಿ ಉಪನ್ಯಾಸಕರಿಂದ ನಾಳೆ ಬೆಳಗಾವಿ ಚಲೋ
Team Udayavani, Dec 11, 2018, 6:50 AM IST
ಹುಬ್ಬಳ್ಳಿ: ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಕಾಯಂ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಡಿ.12ರಂದು ಅತಿಥಿ ಉಪನ್ಯಾಸಕರು ಬೆಳಗಾವಿ ಚಲೋ ಹಮ್ಮಿಕೊಂಡಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಪ್ರೊ| ಹನುಮಂತಗೌಡ ಕಲ್ಮನಿ, ರಾಜ್ಯದ 412 ಪ್ರಥಮ ಕಾಲೇಜುಗಳಲ್ಲಿ ಸುಮಾರು 13 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು 15-20 ವರ್ಷಗಳಿಂದ ಯಾವುದೇ ಸೇವಾ ಭದ್ರತೆಯಿಲ್ಲದೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಕುರಿತು ಸಾಕಷ್ಟು ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ, ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದರು.
ಅತಿಥಿ ಉಪನ್ಯಾಸಕ ಎಂಬ ತಾತ್ಕಾಲಿಕ ಹಾಗೂ ಅವೈಜ್ಞಾನಿಕ ಪದ್ಧತಿ ಉನ್ನತ ಶಿಕ್ಷಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಗೌರವಧನ ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ. ವರ್ಷದಲ್ಲಿ 10 ತಿಂಗಳು ಮಾತ್ರ ಗೌರವಧನ ದೊರೆಯುತ್ತಿರುವುದರಿಂದ ಅತಿಥಿ ಉಪನ್ಯಾಸಕರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಜರ್ಜರಿತರಾಗುತ್ತಿದ್ದಾರೆ. ಈ ಎಲ್ಲಾ ಕಾರಣಗಳು ಉನ್ನತ ಶಿಕ್ಷಣ ಮೇಲೆ ಪರಿಣಾಮ ಬೀರುತ್ತಿದೆ ಎಂದರು.
ಬೆಂಗಳೂರಿನಲ್ಲಿ ಹಿಂದೆ ನಡೆದ ಧರಣಿಯಲ್ಲಿ ಕುಮಾರಸ್ವಾಮಿ ಅವರು ಪಾಲ್ಗೊಂಡು, ಆಡಳಿತಕ್ಕೆ ಬಂದರೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಇತ್ತೀಚೆಗೆ ಒಂದು ಸಭೆ ಕೂಡ ನಡೆದಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಿಂದಿನ ಸರಕಾರಗಳು ಇದೇ ರೀತಿ ಭರವಸೆ ನೀಡುತ್ತಲೇ ನಮಗೆ ವಂಚಿಸಿವೆ. ಹೀಗಾಗಿ, ಕುಮಾರಸ್ವಾಮಿ ಹಿಂದೆ ನೀಡಿದ್ದ ಮಾತು ಉಳಿಸಿಕೊಳ್ಳಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್