ಸಭಾಪತಿಯಾಗಿ ಪ್ರತಾಪ್‌ಚಂದ್ರ ಶೆಟ್ಟಿ ಆಯ್ಕೆ


Team Udayavani, Dec 12, 2018, 6:00 AM IST

z-11.jpg

ವಿಧಾನ ಪರಿಷತ್‌: ದಿಢೀರ್‌ ರಾಜಕೀಯ ಬೆಳವಣಿಗೆಯಲ್ಲಿ ವಿಧಾನ ಪರಿಷತ್‌ನ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನ ಹಿರಿಯ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿ ನಾಮಪತ್ರ ಸಲ್ಲಿಸಿದ್ದಾರೆ. ಆ ಮೂಲಕ ಜೆಡಿಎಸ್‌ನಿಂದ ಸಭಾಪತಿ ಸ್ಥಾನವನ್ನು ವಶಪಡಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ. ಪ್ರತಾಪ್‌ಚಂದ್ರ ಶೆಟ್ಟಿ ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
4 ಬಾರಿ ಕುಂದಾಪುರ ಕ್ಷೇತ್ರದ ಶಾಸಕರಾಗಿ, 3 ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ಪ್ರತಾಪ್‌ಚಂದ್ರ ಶೆಟ್ಟಿ, ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್‌ನ ಹಿರಿಯ ಸದಸ್ಯರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಹಿರಿತನಕ್ಕೆ ಅವಕಾಶ ದೊರಕಿಸಿಕೊಡಲು ಅಚ್ಚರಿ ಎನ್ನುವಂತೆ ಅವರನ್ನು ಸಭಾಪತಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್‌
ನಾಯಕರು ಅಭಿಪ್ರಾಯ ಪಟ್ಟಿದ್ದಾರೆ. ಮಿತ್ರ ಪಕ್ಷಗಳಲ್ಲಿ ಮೇಲ್ಮನೆ ಸಭಾಪತಿ ಸ್ಥಾನ ತನಗೇ ಬೇಕೆಂದು ಹಠ ಹಿಡಿದಿದ್ದ ಜೆಡಿಎಸ್‌, ಒಂದು ಹಂತದಲ್ಲಿ ಮೃದು ಧೋರಣೆ ತಾಳಿದೆ.

ಸಿದ್ದು ವಿರುದ್ಧದ ಪರಮೇಶ್ವರ್‌ ತಂತ್ರ: ಎಸ್‌.ಆರ್‌.ಪಾಟೀಲ್‌ ಬದಲು ಪ್ರತಾಪ್‌ಚಂದ್ರ ಶೆಟ್ಟಿ ಅವರಿಗೆ ಅವಕಾಶ ಕಲ್ಪಿಸಿಕೊಟ್ಟಿರುವುದು ಅಚ್ಚರಿಯ ಬೆಳವಣಿಗೆಗೆ ಕಾರಣವಾಗಿದ್ದು, ಇದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಪರಮೇಶ್ವರ್‌ ಬಳಸಿದ ತಂತ್ರ
ಎಂದು ವಿಶ್ಲೇಷಿಸಲಾಗುತ್ತಿದೆ. ಎಚ್‌.ಡಿ. ದೇವೇಗೌಡ ಅವರು ತಮ್ಮನ್ನು ಸಭಾಪತಿಯಾಗಿ ಮುಂದುವರಿಯಲು ನಾಮ ಪತ್ರ ಸಲ್ಲಿಸುವಂತೆ ಸೂಚಿಸುತ್ತಾರೆಂಬ ಭರವಸೆಯಲ್ಲಿ ಅವರ ದೂರವಾಣಿ ಕರೆಗೆ ಬಸವರಾಜ ಹೊರಟ್ಟಿ ಕಾದು ಕುಳಿತಿದ್ದರು. ಆದರೆ, ದೇವೇಗೌಡರಿಂದ ಯಾವುದೇ ಕರೆ ಬಾರದ ಹಿನ್ನೆಲೆಯಲ್ಲಿ ಬಸವರಾಜ ಹೊರಟ್ಟಿ ಸಭಾಪತಿ ಸ್ಥಾನದ ಅವಕಾಶ ವಂಚಿತರಾಗುವಂತಾಗಿದೆ. ಜೆಡಿಎಸ್‌ಗೆ ಅವಕಾಶ ನೀಡಬಾರದೆಂದು ಕಾಂಗ್ರೆಸ್‌ನ ಕೆಲ ಸದಸ್ಯರು ಪಕ್ಷದ ನಾಯಕರ ಮೇಲೆ ಒತ್ತಡ
ಹೇರುತ್ತಿದ್ದರು. 39 ಸದಸ್ಯರ ಸಂಖ್ಯೆ ಹೊಂದಿರುವ ಕಾಂಗ್ರೆಸ್‌, 14 ಸದಸ್ಯರನ್ನು ಹೊಂದಿರುವ ಜೆಡಿಎಸ್‌ಗೆ ಅವಕಾಶ ಕಲ್ಪಿಸಿಕೊಡುವುದರಿಂದ ಪಕ್ಷ ಎಲ್ಲ ವಿಷಯದಲ್ಲಿಯೂ ಜೆಡಿಎಸ್‌ ಮುಂ ದೆ ಶರಣಾದಂತೆ ಆಗುತ್ತದೆ. ಹೀಗಾಗಿ, ಯಾವುದೇ ಕಾರಣಕ್ಕೂ ಸಭಾಪತಿ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟು ಕೊಡಬಾರದು ಎಂದು ಕಾಂಗ್ರೆಸ್‌ ಪಕ್ಷದ ನಾಯಕರ ಮೇಲೆ ಒತ್ತಡ ಹೇರಿದ್ದರು ಎನ್ನಲಾಗಿದೆ.

ಹೊರಟ್ಟಿಗೆ ಮಂತ್ರಿ ಸ್ಥಾನವೂ ಅನುಮಾನ?
ಸಭಾಪತಿ ಸ್ಥಾನದಿಂದ ವಂಚಿತರಾಗಿರುವ ಬಸವರಾಜ ಹೊರಟ್ಟಿ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡುತ್ತಾರೆಂಬ ಭರವಸೆಯೂ ಇಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಜೆಡಿಎಸ್‌ ಕೋಟಾದಲ್ಲಿ ಖಾಲಿ ಇರುವ ಎರಡು ಸ್ಥಾನಗಳಲ್ಲಿ ಒಂದು ಸ್ಥಾನವನ್ನು ಅಲ್ಪಸಂಖ್ಯಾತರು ಹಾಗೂ ಮತ್ತೂಂದು ಸ್ಥಾನವನ್ನು ದಲಿತ ಕೋಟಾದಡಿ ನೀಡಲು ಜೆಡಿಎಸ್‌ ನಾಯಕರು ನಿರ್ಧರಿಸಿದ್ದಾರೆಂದು ಹೇಳಲಾಗುತ್ತಿದೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಹಾಲಿ ಇರುವ ಕೆಲವು ಸಚಿವರನ್ನು ಕೈ ಬಿಟ್ಟರೆ ಮಾತ್ರ ಬಸವರಾಜ ಹೊರಟ್ಟಿಗೆ ಅವಕಾಶ ದೊರೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಲಿಂಗಾಯತರಿಗೆ ನಿರಾಸೆ
ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಜೆಡಿಎಸ್‌ನ ಬಸವರಾಜ ಹೊರಟ್ಟಿ ಹಾಗೂ ಕಾಂಗ್ರೆಸ್‌ನ ಎಸ್‌.ಆರ್‌.ಪಾಟೀಲ್‌ ಅವರ
ನಡುವೆಯೇ ಪೈಪೋಟಿ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿ ದ್ದವು. ಸಮ್ಮಿಶ್ರ ಸರ್ಕಾರದಲ್ಲಿ ಇಬ್ಬರಲ್ಲಿ ಯಾರಿಗೆ
ಕೊಟ್ಟರೂ ಸಭಾಪತಿ ಸ್ಥಾನ ಲಿಂಗಾಯತರಿಗೆ ನೀಡಿದಂತಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ,
ಕೊನೇ ಕ್ಷಣದಲ್ಲಿ ಪಕ್ಷದ ನಾಯಕರು ತಮ್ಮ ಪ್ರತಿಷ್ಠೆಗೆ ಮಾಡಿಕೊಂಡಿರುವ ತೀರ್ಮಾನದಿಂದ ಎರಡೂ ಪಕ್ಷಗಳಲ್ಲಿನ ಲಿಂಗಾಯತ ಆಕಾಂಕ್ಷಿಗಳಿಗೆ ನಿರಾಸೆಯಾಗುವಂತಾಗಿದೆ. ಅಲ್ಲದೆ, ಉತ್ತರ ಕರ್ನಾಟಕ ಭಾಗದವರಿಗೆ ಸಭಾಪತಿ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆಯೂ ಹುಸಿಯಾದಂತಾಗಿದೆ. 

ಡಿಸಿಎಂ ಪರಮೇಶ್ವರ್‌ ತಂತ್ರ ಯಶಸ್ವಿ
ಪಕ್ಷದ ನಾಯಕರ ಒತ್ತಡದಿಂದಾಗಿ, ಹಿರಿಯ ಸದಸ್ಯ ಕೆ.ಸಿ.ಕೊಂಡಯ್ಯ ಅವರಿಂದ ನಾಮಪತ್ರ ಸಲ್ಲಿಸಲು ಎಚ್‌.ಎಂ.ರೇವಣ್ಣ ನೇತೃತ್ವದಲ್ಲಿ ಕೆಲವು ಶಾಸಕರು ಪ್ರಯತ್ನ ನಡೆಸಿದ್ದರೆಂದು ತಿಳಿದು ಬಂದಿದೆ. ಆದರೆ, ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಎಸ್‌.ಆರ್‌.ಪಾಟೀಲ್‌ ಅವರನ್ನು ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವಂತೆ ನೋಡಿಕೊಳ್ಳಲು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಗೆ ಸೂಚಿಸಿದ್ದರು. ಅದೇ ರೀತಿ, ದಿನೇಶ್‌ ಗುಂಡೂರಾವ್‌ ಕೂಡ ಎಸ್‌.ಆರ್‌. ಪಾಟೀಲ್‌ ಅವರಿಗೆ ನಾಮಪತ್ರ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದ್ದರು ಎಂದು ಹೇಳಲಾಗಿದೆ.
ಈ ಬೆಳವಣಿಗೆಗಳ ನಡುವೆಯೇ ಡಿಸಿಎಂ ಡಾ.ಜಿ.ಪರಮೇಶ್ವರ್‌ ಅವರು, ಆಸ್ಕರ್‌ ಫ‌ರ್ನಾಂಡಿಸ್‌ ಹಾಗೂ ಬಿ.ಕೆ.ಹರಿಪ್ರಸಾದ್‌ ಮೂಲಕ ಪ್ರತಾಪ್‌ಚಂದ್ರ ಶೆಟ್ಟಿ ಅವರ ಹೆಸರನ್ನು ಪ್ರಸ್ತಾಪಿಸಿ, ಅವರನ್ನೇ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವಂತೆ ನೋಡಿಕೊಳ್ಳುವಲ್ಲಿ
ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ಎಸ್‌.ಆರ್‌. ಪಾಟೀಲ್‌ ಅವರನ್ನು ಸಭಾಪತಿಯನ್ನಾಗಿ ಮಾಡಬೇಕೆಂದು ಪಟ್ಟು ಹಿಡಿದಿದ್ದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಹಿನ್ನಡೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಯಾವುದೇ ರೀತಿಯ ಅಚ್ಚರಿ ಆಯ್ಕೆ ಇಲ್ಲ. ಪ್ರತಾಪ್‌ ಚಂದ್ರ ಶೆಟ್ಟಿ ಅವರು ಹಿರಿಯ ಸದಸ್ಯರಿದ್ದಾರೆ. ಅವರ ಹಿರಿತನವನ್ನು ಗಮನಿಸಿ, ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ. 
● ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.