ಮೊಗಸಾಲೆಯಲ್ಲೂ ಫಲಿತಾಂಶದ್ದೇ ಚರ್ಚೆ
Team Udayavani, Dec 12, 2018, 6:00 AM IST
ಸುವರ್ಣಸೌಧ: ವಿಧಾನಮಂಡಲದ ಉಭಯ ಸದನಗಳ ಮೊಗಸಾಲೆಯಲ್ಲೂ ಪಂಚರಾಜ್ಯಗಳ ಚುನಾವಣೆ ಫಲಿತಾಂಶದ್ದೇ
ಚರ್ಚೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಶಾಸಕರು ಫಲಿತಾಂಶದ ಮಾಹಿತಿ ಪಡೆಯುತ್ತಾ ತಮ್ಮದೇ ಆದ ರೀತಿ ಫಲಿತಾಂಶ ವಿಶ್ಲೇಷಣೆ ಮಾಡುತ್ತಿದ್ದರು.
ಪ್ರಾರಂಭದಲ್ಲಿ ಕಾಂಗ್ರೆಸ್ ಮೂರೂ ರಾಜ್ಯಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಂತೆ ಬಿಜೆಪಿ ಸದಸ್ಯರು ಇನ್ನೂ ಇದು ಲೀಡ್ ಅಷ್ಟೆ. ಮಧ್ಯಾಹ್ನದ ನಂತರ ಕ್ಲಿಯಲ್ ಪಿಕ್ಚರ್ ಸಿಗಲಿದೆ ಎಂದು ತಮ್ಮಲ್ಲೇ ಸಮಾಧಾನಪಟ್ಟುಕೊಳ್ಳುತ್ತಿದ್ದರು. ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಅಯ್ಯೋ ಲೀಡ್ ನೋಡಿದ್ರೆ ಗೊತ್ತಾಗಲ್ವಾ ಬಿಜೆಪಿಗೆ ಕಷ್ಟ ಬಿಡಿ ಎಂದು ಕಾಲೆಳೆಯುತ್ತಿದ್ದರು. ಆದರೆ, ಇದಕ್ಕೆ ಒಪ್ಪದ ಬಿಜೆಪಿ ಶಾಸಕರು ಕರ್ನಾಟಕದಲ್ಲಿ ಆದಂತೆ ರಾಜಸ್ತಾನ, ಮಧ್ಯ ಪ್ರದೇಶದಲ್ಲೂ ಅತಂತ್ರ ನಿರ್ಮಾಣವಾಗಲಿದೆ. ಪಕ್ಷೇತರರು
ನಿರ್ಣಾಯಕರಾಗಲಿದ್ದಾರೆ. ರಾಜಸ್ಥಾನದಲ್ಲಿ ಬಿಜೆಪಿಗೆ ನಿರೀಕ್ಷಿತವಾಗಿತ್ತು ಆದರೂ ಹೆಚ್ಚು ಸ್ಥಾನ ಗಳಿಸಿದ್ದೇವೆ ಎಂದು ಹೇಳುತ್ತಿದ್ದರು.
ಫಲಿತಾಂಶದ ಬಗ್ಗೆ ಬಿಜೆಪಿ ಶಾಸಕರ ಮುಖದಲ್ಲಿ ಬೇಸರ ಎದ್ದು ಕಾಣುತ್ತಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಗುಡ್ ರಿಸಲ್ಟ್ ಎಂದು ಖುಷಿಪಟ್ಟುಕೊಳ್ಳುತ್ತಿದ್ದರು. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬೆಳಗ್ಗೆಯೇ ವಿಟಿಯು ಅತಿಥಿ ಗೃಹದಲ್ಲಿ ಫಲಿತಾಂಶ ವೀಕ್ಷಿಸಿ ನಂತರ ಕಲಾಪದಲ್ಲಿ ಪಾಲ್ಗೊಳ್ಳಲು ಸುವರ್ಣಸೌಧಕ್ಕೆ ಆಗಮಿಸಿ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದರು. ನಂತರ ಅಧಿಕಾರಿಗಳ ಮೂಲಕ ಪಂಚರಾಜ್ಯಗಳ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದರು. ಕಲಾಪ ಸಲಹಾ ಸಮಿತಿ ಮುಗಿಸಿ
ಹೊರಟ ಬಳಿಕ ಎದುರುಗೊಂಡ ಸಚಿವರು ಹಾಗೂ ಶಾಸಕರು ಸಹ ಮುಖ್ಯಮಂತ್ರಿಯವರ ಕೈ ಕುಲುಕಿ ಗುಡ್ ರಿಸಲ್ಟ್ ಸರ್ ಎಂದು ಹೇಳಿದರು. ಅದಕ್ಕೆ ಮುಖ್ಯಮಂತ್ರಿ ಹಸನ್ಮು ಖೀಯಾಗಿ ಹೌದು ಎಂದು ಹೇಳುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು
MUST WATCH
ಹೊಸ ಸೇರ್ಪಡೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ