ಇನ್ನು ನಾಲ್ಕು ತಿಂಗಳು ಕಷ್ಟ ಪಡೋಣ,ಯಾಕೆ ಭ್ರಮನಿರಸನ! ಸಂಸದ ಪ್ರತಾಪ್
Team Udayavani, Dec 12, 2018, 2:54 PM IST
ಹೊಸದಿಲ್ಲಿ : ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿಗೆ ಸಂಪೂರ್ಣ ಸೋಲು ಅನುಭವಿಸಿರುವ ಬಗ್ಗೆ ಸಾಮಾಜಿಕ ತಾಣಗಳಲ್ಲಿನ ಬಿಜೆಪಿ ಕಾರ್ಯಕರ್ತರ ಪ್ರತಿಕ್ರಿಯೆಯ ಕುರಿತು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಯಾರೂ ವಿಚಲಿತರಾಗದಂತೆ ಮನವಿ ಮಾಡಿದ್ದಾರೆ.
ಸಂಸದ ಸಿಂಹ ಮಂಗಳವಾರ ರಾತ್ರಿ ಮಾಡಿದ ಪೋಸ್ಟ್ ಹೀಗಿದೆ
ಕಾರ್ಯಕರ್ತರೇ ಹಾಗು ಮೋದೀಜಿ ಬೆಂಬಲಿಗರೇ, ಸೋಲು ಖಂಡಿತ ಬೇಸರ ತರುತ್ತೆ. ಆದರೆ ಯಾಕಿಷ್ಟು ವಿಚಲಿತರಾಗಿದ್ದೀರಿ? ಯಾಕಿಂಥ ಭ್ರಮನಿರಸನ? ಜನರನ್ನೇ ದೂಷಿಸುವಂಥ ವೈರಾಗ್ಯದ ಮೆಸೇಜುಗಳೇಕೆ? ಈ ರೀತಿಯ defeatist ಮನಸ್ಥಿತಿ ಯಾಕೆ? 2004ರಿಂದ 2018ರವರೆಗೂ ಸತತ 15 ವರ್ಷ ಇದೇ ಮಧ್ಯಪ್ರದೇಶ, ಛತ್ತೀಸಗಢದ ಜನರಲ್ಲವೇ ಯುಪಿಎ ಆರ್ಭಟದ ನಡುವೆಯೂ ನಮಗೆ ಅಧಿಕಾರ ನೀಡಿದ್ದು? 15 ವರ್ಷ ಒಂದೇ ಮುಖವನ್ನು ನೋಡುತ್ತಾ ಇದ್ದರೆ fatigue ಬಂದು ಸುಖಾಸುಮ್ಮನೆ ಬದಲಾವಣೆ ಬೇಕು ಅನ್ನಿಸಿಬಿಡೋ ಸಾಧ್ಯತೆ ಇರುತ್ತೆ. ಯಾಕೆ ದೂರುತ್ತಾ ಕಾಲಹರಣ ಮಾಡುತ್ತೀರಿ? ಇನ್ನು 4 ತಿಂಗಳು ಕಷ್ಟಪಡೋಣ, ಫೇಸ್ಬುಕ್ ಟ್ವಿಟ್ಟರ್ ವಾಟ್ಸಾಪ್ ಗಳ ಆಚೆಗಿನ ಜನತಾ ನ್ಯಾಯಾಲಯದ ಮುಂದೆ ಹೋಗಿ ಮಾಡಿರುವ ಕೆಲಸಗಳನ್ನ ಮನವರಿಕೆ ಮಾಡಿಕೊಡೋಣ, 2019ರಲ್ಲಿ ಮತ್ತೆ ಮೋದೀಜಿಯನ್ನ ಪ್ರಧಾನಿ ಮಾಡಿ ಖುಷಿಪಡೋಣ. ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್