ಮಹದಾಯಿಗಾಗಿ ಇಂದು ಸುವರ್ಣಸೌಧ ಬಳಿ ಧರಣಿ
Team Udayavani, Dec 13, 2018, 6:35 AM IST
ಹುಬ್ಬಳ್ಳಿ: ಕಳಸಾ-ಬಂಡೂರಿ ನಾಲಾ ಯೋಜನೆಯ ತ್ವರಿತ ಕ್ರಮಕ್ಕೆ ಒತ್ತಾಯಿಸಿ ಡಿ.13ರಂದು ಸುವರ್ಣಸೌಧದ ಬಳಿ ಒಂದು ದಿನದ ಸಾಂಕೇತಿಕ ಧರಣಿ ನಡೆಸಲು ಮಹದಾಯಿ ಪಕ್ಷಾತೀತ ರೈತರ ಹೋರಾಟ ಸಮನ್ವಯ ಸಮಿತಿ ನಿರ್ಧರಿಸಿದೆ.
ಬುಧವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಸಂಚಾಲಕರಾದ ಅಮೃತ ಇಜಾರಿ, ಮಹೇಶ ಪತ್ತಾರ, ಸುಭಾಷ್ಚಂದ್ರ ಗೌಡ ಪಾಟೀಲ, ಕೇಂದ್ರ ಹಾಗೂ ರಾಜ್ಯ ಸರಕಾರ ಪರಿಸರ ಹಾಗೂ ಅರಣ್ಯ ಇಲಾಖೆಯಿಂದ ಅನುಮೋದನೆ ಪಡೆದು ಕಾಮಗಾರಿ ಕೈಗೆತ್ತಿಕೊಳ್ಳಲು ಕೂಡಲೇ ಅಧಿಸೂಚನೆ ಹೊರಡಿಸ ಬೇಕೆಂದು ಒತ್ತಾಯಿಸಿದರು.
ಮಹದಾಯಿ ನ್ಯಾಯಾಧಿಕರಣ ಮೂರು ತಿಂಗಳಹಿಂದೆಯೇ ಆದೇಶಿಸಿದ್ದರೂ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾಮಗಾರಿ ಕೈಗೆತ್ತಿಕೊಳ್ಳುವಲ್ಲಿ ನಿರ್ಲಕ್ಷé ತೋರುತ್ತಿವೆ. ಇದನ್ನು ವಿರೋಧಿಸಿ ಡಿ.13ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ಸುವರ್ಣಸೌಧದ ಎದುರು ಒಂದು ಸಾವಿರಕ್ಕೂ ಅಧಿಕ ರೈತರು ಧರಣಿ ನಡೆಸಲಿದ್ದಾರೆ ಎಂದರು. ಮುಖಂಡರಾದ ಬಸಪ್ಪ ಬೀರಣ್ಣವರ, ಹೇಮನಗೌಡ ಬಸನಗೌಡ್ರ, ಕುಮಾರಸ್ವಾಮಿ ಹಿರೇಮಠ, ಸಂಜೀವ ಧುಮ್ಮಕನಾಳ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
MUST WATCH
ಹೊಸ ಸೇರ್ಪಡೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ