ದೇವೇಗೌಡ, ಸಿದ್ದರಾಮಯ್ಯ ರೈತರ ಬಳಿಗೆ ಹೋಗಲಿ
Team Udayavani, Dec 13, 2018, 7:00 AM IST
ವಿಧಾನಸಭೆ: ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಒಪ್ಪಂದದ ಸೂತ್ರಧಾರಿಗಳಾದ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರಪೀಡಿತ ಪ್ರದೇಶಗಳಲ್ಲಿ ರೈತರ ಹೊಲಗಳಿಗೆ ಹೋಗಿ, ಪರಿಸ್ಥಿತಿಯ ಅಧ್ಯಯನ ಮಾಡಲಿ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.
ಬರ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವ ದೇವೇಗೌಡರು, ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ಅವರು ಬರಪೀಡಿತ ಪ್ರದೇಶಗಳಲ್ಲಿನ ವಸ್ತುಸ್ಥಿತಿ ಅಧ್ಯಯನಕ್ಕೆ ಹೋದರೆ ಆಗಲಾದರೂ ಉಸ್ತುವಾರಿ ಸಚಿವರು ಅವರನ್ನು ಅನುಸರಿಸ ಬಹುದು ಎಂದು ಲೇವಡಿ ಮಾಡಿದರು.
ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳ ಸ್ಥಿತಿ ಭೀಕರವಾಗಿದೆ. ಉಸ್ತುವಾರಿ ಸಚಿವರು ಅಧಿಕಾರಿಗಳ ಸಭೆ ನಡೆಸಿ ಬಂದಿರುವುದು ಬಿಟ್ಟರೆ ಬೇರೆ ಏನನ್ನೂ ಮಾಡಿಲ್ಲ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರು ವಿಡಿಯೋ ಕಾನ್ಫರೆನ್ಸ್ ಮಾಡಿ ಪತ್ರಿಕೆಗಳು, ಟಿವಿಗಳಿಗೆ ಬರ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ. ಆದರೆ, ಇದರಿಂದ ಯಾವ ಪರಿಹಾರವೂ ಸಿಕ್ಕಿಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಅಷ್ಟು ಹಣ ಇದೆ, ಇಷ್ಟು ಹಣ ಇದೆ ಎಂದು ಹೇಳಲಾಗುತ್ತಿದೆ. ಆದರೆ, ಆ ಹಣವನ್ನು ಇಟ್ಟುಕೊಂಡು ಏನು ಮಾಡಲು ಸಾಧ್ಯ. ಕುಡಿಯುವ ನೀರು ಪೂರೈಕೆಗೆ ಹಲವಾರು ಷರತ್ತು ಹಾಕಲಾಗಿದೆ. ಹೀಗಾಗಿ, ರೈತನ ಮಕ್ಕಳು ಈ ಸರ್ಕಾರದಲ್ಲಿ ಸಾಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ, ಈಶ್ವರಪ್ಪ ಅವರನ್ನು ಬೆಂಬಲಿಸಿದ ಬಿಜೆಪಿ ಸದಸ್ಯರು, ಬರಪೀಡಿತ ತಾಲೂಕುಗಳಿಗೆ 50 ಲಕ್ಷ ರೂ.ಬಿಡುಗಡೆ ಎಂದು ಹೇಳುತ್ತೀರಿ. ಆದರೆ, ಅದೇ ಹಣವನ್ನು ಶುದಟಛಿ ಕುಡಿಯುವ ನೀರಿನ ಘಟಕಗಳ ದುರಸ್ಥಿಗೂ ಬಳಕೆ ಮಾಡಲಾಗುತ್ತಿದೆ. ಮಲೆನಾಡಿನ ಕೆಲವು ತಾಲೂಕು ಗಳನ್ನು ಬರಪೀಡಿತ ಎಂದು ಘೋಷಿಸದಿದ್ದರೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ಎಂದರು.
ಖಾಸಗಿ ಬೋರ್ವೆಲ್ ಮೂಲಕವೂ ನೀರು ಪೂರೈಕೆ: ಅದಕ್ಕೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ, ಬರಪೀಡಿತ ತಾಲೂಕುಗಳಿಗೆ ಬಿಡುಗಡೆ ಮಾಡಿರುವ 50 ಲಕ್ಷ ರೂ.ಹಣವನ್ನು ಬೇರೆ ಬಾಬಿ¤ಗೆ ವೆಚ್ಚ ಮಾಡುವಂತಿಲ್ಲ. 50 ಲಕ್ಷ ರೂ.ಜತೆಗೆ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 226 ಕೋಟಿ ರೂ.ಇಡಲಾಗಿದೆ. ಜತೆಗೆ, ಜಿಲ್ಲಾ ಪಂಚಾಯಿತಿಗಳಿಗೆ ಕುಡಿಯುವ ನೀರು ಪೂರೈಕೆ ಗಾಗಿಯೇ 1,700 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ಟೆಂಡರ್ ಕರೆದು ಕಾರ್ಯಾದೇಶ ಕಳುಹಿಸಲು ಸೂಚನೆ ನೀಡಲಾಗಿದೆ. ಬರಪೀಡಿತ ಪ್ರದೇಶದ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ತೊಂದರೆಯಾದರೆ ತಕ್ಷಣವೇ ಖಾಸಗಿ ಬೋರ್ವೆಲ್ನ್ನು 10 ರಿಂದ 15 ಸಾವಿರ ರೂ.ಮಾಸಿಕ ಬಾಡಿಗೆ ಆಧಾರದಲ್ಲಿ ಪಡೆದು,ಟ್ಯಾಂಕರ್ ಮೂಲಕ ನೀರು ಪೂರೈಸಲು ಸೂಚಿಸಲಾಗಿದೆ. ಅದಕ್ಕೆ ಸರ್ಕಾರವೇ ಹಣ ಭರಿಸಲಿದೆ ಎಂದರು.
ಅಧಿಕೃತ ಪ್ರಕಟಣೆ ಹೊರಡಿಸಿ: ಈ ವೇಳೆ, ಯಡಿಯೂರಪ್ಪ ಮಾತನಾಡಿ, ಬರಪೀಡಿತ ಪ್ರದೇಶಗಳಲ್ಲಿ ಅನುದಾನ ವೆಚ್ಚ ಸಂಬಂಧ ಅಧಿಕೃತ ಪ್ರಕಟಣೆ ಹೊರಡಿಸಿ, ಎಲ್ಲ ಶಾಸಕರಿಗೂ ಕೊಡಿ. ಅದನ್ನು ತೋರಿಸಿಯಾದರೂ ಅಧಿಕಾರಿಗಳ ಬಳಿ ಕೆಲಸ ಮಾಡಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ
CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ಸಭೆ
German ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು
8 ಹೊಸ ಡಿಪ್ಲೋಮಾ ಕೋರ್ಸ್ಗೆ ಎಂಜಿನಿಯರಿಂಗ್ ಪ್ರವೇಶ
K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ
MUST WATCH
ಹೊಸ ಸೇರ್ಪಡೆ
ಗ್ರಾಹಕ ರಕ್ಷಣ ಕಾಯ್ದೆ ಅಡಿ ವಕೀಲರು ಬರಲ್ಲ: ಸುಪ್ರೀಂ
MLC Elections; ನೈಋತ್ಯ ಪದವೀಧರರ ಕ್ಷೇತ್ರ; ಕಾರ್ಮಿಕರ, ಪದವೀಧರರ ಧ್ವನಿಯಾಗುವೆ
ನೈಋತ್ಯ ಶಿಕ್ಷಕರ ಕ್ಷೇತ್ರ: ಎಸ್. ಆರ್. ಹರೀಶ್ ಆಚಾರ್ಯ ಸ್ಪರ್ಧೆ
LSGvsDC; ಪೂರನ್-ಅರ್ಷದ್ ವ್ಯರ್ಥ ಹೋರಾಟ; ಡೆಲ್ಲಿ ಸಮಾಧಾನದ ಗೆಲುವು: ಆರ್ ಸಿಬಿ ಹಾದಿ ಸಲೀಸು
ಮುಂದಿನ 5 ವರ್ಷಗಳಲ್ಲಿ ಅಭಿವೃದ್ಧಿಯ ನೈಜ ಸಿನೆಮಾ: ಡಾ| ಧನಂಜಯ ಸರ್ಜಿ