ಕೇಂದ್ರ ಸರಕಾರ ನಮ್ಮ ದಾರಿಗೆ ಬರಲೇಬೇಕು..ಕಾಯ್ತಾ ಇರಿ; ಮೋದಿಗೆ ಸಿಎಂ!
Team Udayavani, Dec 13, 2018, 12:31 PM IST
ಬೆಳಗಾವಿ: ಕೇಂದ್ರ ಸರಕಾರ ನಮ್ಮ ದಾರಿಗೆ ಬರಲೇಬೇಕು. ಕೇಂದ್ರ ಸರಕಾರಕ್ಕೆ ಇನ್ನೂ ಸಮಯ ಇದೆ..ಕಾಯ್ತಾ ಇರಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟಾಂಗ್ ನೀಡಿದ್ದಾರೆ.
ಬೆಳಗಾವಿಯಲ್ಲಿ ಗುರುವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರೈತರ ಸಾಲಮನ್ನಾ ವಿಚಾರದಲ್ಲಿ ಕೇಂದ್ರ ನಮ್ಮ ದಾರಿಗೆ ಬರಲೇಬೇಕು. ರೈತರ ಸಾಲ ಮನ್ನಾ ಮಾಡಲೇಬೇಕಾಗುತ್ತದೆ ಎಂದು ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಮಾರು 50 ಕೋಟಿ ರೈತ ಕುಟುಂಬದ ಮೇಲೆ ಕಣ್ಣಿಟ್ಟಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ರೈತರು ಮಾಡಿಕೊಂಡಿರುವ ನಾಲ್ಕು ಲಕ್ಷ ಕೋಟಿ ರೂಪಾಯಿ ಸಾಲಮನ್ನಾ ಮಾಡಲು ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ತಿರುಗೇಟು ನೀಡಿರುವ ಕುಮಾರಸ್ವಾಮಿ, ನಾವು ರೈತರ ಸಾಲಮನ್ನಾ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದೇವು. ಆದರೆ ರೈತರ ಸಾಲಮನ್ನಾ ವಿಚಾರದಲ್ಲಿ ಕೇಂದ್ರ ನಮಗೆ ಸಹಕಾರ ನೀಡುತ್ತಿಲ್ಲ. ಇದೀಗ ಕೇಂದ್ರವೇ ಸಾಲಮನ್ನಾಕ್ಕೆ ಮುಂದಾಗಿದೆ ಎಂದರು.