ಪ್ರತ್ಯೇಕ ಧರ್ಮ:ಲೋಕ ವಿರಾಮ
Team Udayavani, Dec 16, 2018, 6:00 AM IST
ವಿಜಯಪುರ: ಪ್ರತ್ಯೇಕ ಲಿಂಗಾಯತ ಧರ್ಮ ಕುರಿತಂತೆ ಲೋಕಸಭೆ ಚುನಾವಣೆ ಬಳಿಕ ನಿರ್ಣಾಯಕ ಹಂತದ ಹೋರಾಟ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ಧರ್ಮದ ಮಾನ್ಯತೆಗಾಗಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವ ಕ್ರಮ ಸರಿಯಲ್ಲ ಎಂದಿದ್ದಾರೆ.
ಪ್ರತ್ಯೇಕ ಧರ್ಮ ಮಾನ್ಯತೆ ಕುರಿತು ನಮ್ಮ ಹೋರಾಟ ಗುರಿ ಮುಟ್ಟುವವರೆಗೆ ನಿಲ್ಲುವುದಿಲ್ಲ. ಲೋಕಸಭೆ ಚುನಾವಣೆ ಬಳಿಕ ಈ ಹೋರಾಟಕ್ಕೆ ನಿರ್ಣಾಯಕ ಸ್ವರೂಪ ನೀಡಲಿದ್ದೇವೆ. ಈಗಲೇ ಹೋರಾಟಕ್ಕೆ ಚಾಲನೆ ನೀಡಿದರೆ ಲೋಕಸಭೆ ಚುನಾವಣೆ ಕಾರಣಕ್ಕೆ ಎಂದು ರಾಜಕೀಯ ಬಣ್ಣ ನೀಡಲಾಗುತ್ತದೆ. ಹೀಗಾಗಿ ಅಲ್ಲಿಯವರೆಗೆ ಶಾಂತವಾಗಿದ್ದು, ಲೋಕಸಭೆ ಚುನಾವಣೆ ಬಳಿಕ ಹೋರಾಟ ನಡೆಸುತ್ತೇವೆ ಎಂದರು.
ಲಿಂಗಾಯತರು 12ನೇ ಶತಮಾನದಿಂದ ಇಂದಿನವರೆಗೂ ಎಂದೂ ವೀರಶೈವರಾಗಿಲ್ಲ. ಸ್ವಾತಂತ್ರÂ ಪೂರ್ವದಿಂದಲೇ 1871ರಿಂದಲೂ ಲಿಂಗಾಯತರು ಚಾತುರ್ವರ್ಣ ವ್ಯವಸ್ಥೆಯಿಂದ ದೂರ ಇದ್ದೇವೆ ಎಂಬುದಕ್ಕೆ ಐತಿಹಾಸಿಕ ದಾಖಲೆ ಸಹಿತ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಕನಿಷ್ಠ ಪರಿಶೀಲನೆಗೂ ಮುಂದಾಗಿಲ್ಲ ಎಂಬುದು ಅವರ ನಿರ್ಧಾರದಿಂದ ಸ್ಪಷ್ಟವಾಗಿದೆ ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ