ಬಸ್ಕಿ ಹೊಡೆಸಿದ ಶಿಕ್ಷಕಿ ವಿರುದ್ಧ ದೂರು
Team Udayavani, Dec 16, 2018, 9:31 AM IST
ಶಿವಮೊಗ್ಗ: ತಮ್ಮ ಮಗ ಗಲಾಟೆ ಮಾಡುತ್ತಿದ್ದ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರು 100 ಬಸ್ಕಿ ಹೊಡೆಸಿದ್ದಲ್ಲದೆ,
ಬೆನ್ನಿನ ಮೇಲೆ ಗುದ್ದಿದ್ದಾರೆ. ದೂರು ದಾಖಲಿಸಿಕೊಳ್ಳಲು ಪೊಲೀಸರು ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ ಪೋಷಕರು ಶನಿವಾರ ಜಯನಗರ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.
ಜೆ.ಎಚ್.ಪಟೇಲ್ ಬಡಾವಣೆಯ ಸಂಜೀವ್ ಹಾಗೂ ಸಂಗೀತಾ ದಂಪತಿ ಪುತ್ರ, ನಗರದ ದುರ್ಗಿಗುಡಿ ಸರಕಾರಿ
ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದಾನೆ. ಶಿಕ್ಷಕಿ ಕನ್ಯಾಕುಮಾರಿ ಎಂಬುವರು ಈತ ಗಲಾಟೆ ಮಾಡುತ್ತಿದ್ದ ಎಂಬ ಕಾರಣಕ್ಕೆ 100 ಬಸ್ಕಿ ಹೊಡೆಸಿ, ಶಿಕ್ಷೆಯ ರೂಪದಲ್ಲಿ ಬೆನ್ನಿನ ಮೇಲೆ ಗುದ್ದಿದ್ದಾರೆ. ಇದರಿಂದ ಏಳಲು, ಕೂರಲು, ಬಗ್ಗಲು ಆತನಿಗೆ ಕಷ್ಟವಾಗಿದ್ದು, ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.
ಈಗ ಆತ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾನೆ. ಈ ಮಧ್ಯೆ, ಶಿಕ್ಷಕಿ ವಿರುದ್ಧ ದೂರು ದಾಖಲಿಸಲು ಶುಕ್ರವಾರ ಜಯನಗರ ಪೊಲೀಸ್ ಠಾಣೆಗೆ ತೆರಳಿದ್ದ ಪೋಷಕರಿಗೆ ಪೊಲೀಸರು ನಾಳೆ ಬರುವಂತೆ ಹೇಳಿ ಕಳುಹಿಸಿದ್ದರು. ಶನಿವಾರ ದೂರು ನೀಡಲು ಬಂದ ಪೋಷಕರ ಬಳಿ ಪೊಲೀಸರು ಕೋರ್ಟ್ ಅನುಮತಿ ಪತ್ರ ನೀಡುವಂತೆ ಕೇಳಿದರು. ಇದರಿಂದ ಆಕ್ರೋಶಗೊಂಡ ಸಂಜೀವ್ ದಂಪತಿ, ಠಾಣೆ ಎದುರುಶನಿವಾರ ಪ್ರತಿಭಟನೆಗಿಳಿದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಮಕ್ಕಳ ಹಕ್ಕು ರಕಣಾ ಸಮಿತಿ ಅಧ್ಯಕ್ಷೆ ರೇಖಾ ಜಿ.ಎಂ ಸೂಚನೆ ಮೇರೆಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಳಿಕ, ಸಂಜೀವ್ ದಂಪತಿ
ಪ್ರತಿಭಟನೆ ಅಂತ್ಯಗೊಳಿಸಿದ್ದು, ಶಿಕ್ಷೆ ವಿಧಿಸಿದ ಶಿಕಕಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’