ಡಿ.ಎಚ್.ಶಂಕರಮೂರ್ತಿ ವಿರುದ್ದ ಪ್ರಕರಣ ರದ್ದು
Team Udayavani, Dec 16, 2018, 9:37 AM IST
ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ಶನಿವಾರ ರದ್ದುಪಡಿಸಿದೆ. ಪ್ರಕರಣದ ವಿಚಾರಣೆ ಸುದೀರ್ಘವಾಗಿ ನಡೆದ ವೇಳೆ ಶಂಕರಮೂರ್ತಿ ಪರ ವಕೀಲ ವಿನೋದ್ಕುಮಾರ್ ವಾದ ಮಂಡಿಸಿ, ಶಂಕರಮೂರ್ತಿಯವರು ಚುನಾವಣಾಧಿಕಾರಿಗಳ ಕಚೇರಿವರೆಗೆ ಕಾರಿನಲ್ಲಿ ಆಗಮಿಸಿದ್ದರೂ, ನಾಮಪತ್ರ ಸಲ್ಲಿಕೆ ಸ್ಥಳಕ್ಕೆ ನಡೆದೇ ಹೋಗಿದ್ದರು. ಕಾರಿನ ಚಾಲಕ ವಾಹನವನ್ನುಚುನಾವಣಾಧಿಕಾರಿಗಳ ಆವರಣದಲ್ಲಿ ಪಾರ್ಕಿಂಗ್ ಮಾಡಿದ್ದರೆಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.
ಇದನ್ನು ಪುರಸ್ಕರಿಸಿದ ನ್ಯಾ.ದಿನೇಶ್ಕುಮಾರ್ ಅವರಿದ್ದ ನ್ಯಾಯಪೀಠ, ಅವರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಿ, ಆದೇಶ ಹೊರಡಿಸಿತು. 2010ರಲ್ಲಿ ವಿಧಾನ ಪರಿಷತ್ಗೆ ನಡೆದ ಚುನಾವಣೆ ವೇಳೆ ದಕ್ಷಿಣ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಶಂಕರಮೂರ್ತಿ ಹಾಜರಿದ್ದರು.
ಅಲ್ಲಿಗೆ ಆಗಮಿಸುವಾಗ ಸರ್ಕಾರಿ ಕಾರು ಬಳಸಿದ್ದರಿಂದ ನೀತಿ ಸಂಹಿತೆ ಜಾರಿ ತಂಡದ ಅಧಿಕಾರಿಯವರು ಶಂಕರಮೂರ್ತಿ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ನಡೆದ ವೇಳೆ ಶಂಕರಮೂರ್ತಿಯವರು ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷರಾಗಿದ್ದರು. ಬಿಜೆಪಿ ಅಭ್ಯರ್ಥಿಯ ನಾಮಪತ್ರ ಸಲ್ಲಿಸಲು ಕಾರನ್ನು ಚುನಾವಣಾಧಿಕಾರಿಗಳ ಕಚೇರಿಯ ಆವರಣಕ್ಕೆ ತಂದಿದ್ದರು ಎಂದು ದೂರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್