ರೈಲ್ವೆ ಕಂಬಿಗೆ ಸಿಲುಕಿ ಕಾಡಾನೆ ಸಾವು


Team Udayavani, Dec 16, 2018, 10:00 AM IST

eleoh.jpg

ಹುಣಸೂರು: ನಾಗರಹೊಳೆ ಉದ್ಯಾನದಿಂದ ಹೊರ ಬಂದಿದ್ದ ಕಾಡಾನೆಗಳ ಗುಂಪಿನಲ್ಲಿದ್ದ ಸಲಗವೊಂದು ಗುಂಪಿನಿಂದ ಬೇರ್ಪಟ್ಟು, ಮರಳಿ ಉದ್ಯಾನಕ್ಕೆ ತೆರಳಲು ರೈಲ್ವೆ ಕಂಬಿಯ ತಡೆಗೋಡೆ ದಾಟಲು ಹೋಗಿ ಸಿಕ್ಕಿ ಬಿದ್ದಿದ್ದು, ಕೊನೆಗೆ ಕಂಬಿಯ ಮೇಲೆಯೇ ಪ್ರಾಣ ತ್ಯಜಿಸಿದ ಘಟನೆ ವೀರನಹೊಸಹಳ್ಳಿಯ ಅರಣ್ಯ ಸಿಬ್ಬಂದಿಗಳ ವಸತಿಗೃಹದ ಬಳಿ ಸಂಭವಿಸಿದೆ.

ಸುಮಾರು 41-42 ವರ್ಷದ ಈ ಸಲಗ, ಇತರ ಎರಡು ಆನೆಗಳೊಂದಿಗೆ ಗುರುವಾರ ರಾತ್ರಿ ಉದ್ಯಾನದಿಂದ ಹೊರದಾಟಿ ಬಂದು ಕೋಣನಹೊಸಹಳ್ಳಿ, ಕೊಳುವಿಗೆ, ಮುದಗನೂರು ಬಳಿ ಅಡ್ಡಾಡುತ್ತಿತ್ತು. ಅರಣ್ಯ ಇಲಾಖೆ ಸಿಬ್ಬಂದಿಗಳು
ಗಣೇಶ, ಬಲರಾಮ ಆನೆಗಳ ನೆರವಿನಿಂದ ಶುಕ್ರವಾರ ಬೆಳಗ್ಗೆ ಎರಡು ಕಾಡಾನೆಗಳನ್ನು ಕೊಳವಿಗೆಯ ರಾಮಲಿಂಗೇಶ್ವರ ದೇವಸ್ಥಾನದ ಬಳಿಯ ಗೇಟ್‌ನಿಂದ ಒಳ ಸೇರಿಸಿದ್ದರು. ಆದರೆ, ಈ ಸಲಗ ಗಾಬರಿಗೊಂಡು ಗುಂಪಿನಿಂದ ಬೇರ್ಪಟ್ಟು, ಕೋಣನಹೊಸಹಳ್ಳಿ ಬಳಿ ನೀಲಗಿರಿ ತೋಪಿನತ್ತ ಓಡಿತ್ತು. ಎಷ್ಟೇ ಪ್ರಯತ್ನಪಟ್ಟರೂ ಸಾಕಾನೆಗಳಿಗೂ ಹೆದರದೆ ಸೆಡ್ಡು ಹೊಡೆದಿತ್ತು. ಕೊನೆಗೆ ರಾತ್ರಿ ವೇಳೆ ಕಾಡಿಗಟ್ಟಲು ಯತ್ನಿಸಿದಾಗಲೂ ಸಾಧ್ಯವಾಗಿರಲಿಲ್ಲ.

ಆದರೆ, ಶನಿವಾರ ಮುಂಜಾನೆ ವೇಳೆ ಈ ಸಲಗ ವೀರನಹೊಸಹಳ್ಳಿವರೆಗೆ ಬೇಲಿ ಅಂಚಿನಲ್ಲೇ ನಡೆದುಕೊಂಡು ಬಂದು, ಉದ್ಯಾನ ಪ್ರವೇಶಿಸಲು ರೈಲ್ವೆ ಕಂಬಿ ಏರಿ, ವಿಫಲ ಯತ್ನ ನಡೆಸಿತು. ಕಂಬಿಯ ಮೇಲೆ ಹೊಟ್ಟೆ ಸಿಲುಕಿ ನೆಲಕ್ಕೆ ಕಾಲೂರಲಾಗದೆ, ಘೀಳಿಡಲೂ ಆಗದೆ, ಆನೆ ಶ್ವಾಸಕಟ್ಟಿ ಇಹಲೋಕ ತ್ಯಜಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಎ.ಸಿ.ಎಫ್‌.ಪ್ರಸನ್ನಕುಮಾರ್‌, ಆರ್‌. ಎಫ್‌.ಓ.ಸಂದೀಪ್‌, ಗ್ರಾಮಸ್ಥರ ಸಹಕಾರದಿಂದ ಆನೆಗೆ ಹಗ್ಗ ಕಟ್ಟಿ ಕೆಳಕ್ಕಿಳಿಸಿದರು. ನಾಗರಹೊಳೆ ಪಶುವೈದ್ಯ ಡಾ.ಮುಜೀಬ್‌ ರೆಹಮಾನ್‌ ಶವಪರೀಕ್ಷೆ ನಡೆಸಿದರು. ಈ ಮಧ್ಯೆ, ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಸುತ್ತಮುತ್ತಲ ಗ್ರಾಮಸ್ಥರು, ಆನೆಯ ಸಾವಿಗೆ ಮಮ್ಮಲ ಮರುಗಿದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.