ಮೆತ್ತಗಾದ ಪ್ರತಿಪಕ್ಷ: ನಿಟ್ಟುಸಿರಿಟ್ಟ ಸರ್ಕಾರ


Team Udayavani, Dec 17, 2018, 7:45 AM IST

teppa-15-12.jpg

ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಅಧಿವೇಶನ ಆರಂಭವಾಗುತ್ತದೆ ಎಂದ ತಕ್ಷಣ ಆಡಳಿತ ಪಕ್ಷಕ್ಕೆ ಪ್ರಮುಖವಾಗಿ ಕಾಡುವ ಸಮಸ್ಯೆ ಎಂದರೆ ಕಬ್ಬಿನ ಬಾಕಿ ಪಾವತಿ ಮಾಡದೇ ಇರುವುದು. ಈ ವರ್ಷವೂ ಬೆಳಗಾವಿ ಅಧಿವೇಶನದ ಆರಂಭದಲ್ಲಿ ಆಡಳಿತ ಪಕ್ಷಕ್ಕೆ ಕಬ್ಬು ಬೆಳೆಯುವ ರೈತರ ಸಮಸ್ಯೆಯೇ ಅಧಿವೇಶನದಲ್ಲಿ ಕಂಟಕವಾಗುವ ಆತಂಕ ಇತ್ತು. ಪ್ರತಿಪಕ್ಷ ಬಿಜೆಪಿ ಕೂಡ ಅದನ್ನೇ ಪ್ರಮುಖ ಅಸ್ತ್ರವನ್ನಾಗಿ ಇಟ್ಟುಕೊಂಡು ಅಧಿವೇಶನ ಎದುರಿಸಲು ಸಿದ್ಧತೆ ಮಾಡಿಕೊಂಡು ಬಂದಿತ್ತು. ಆದರೆ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಅಧಿವೇಶನಕ್ಕೂ ಮೊದಲೇ ಕಬ್ಬು ಬೆಳೆಗಾರರ ಸಮಸ್ಯೆ ಆಲಿಸಲು ರೈತರೊಂದಿಗೆ ಹಲವು ಬಾರಿ ಸಭೆ ನಡೆಸಿ ಕಾರ್ಖಾನೆ ಮಾಲೀಕರ ಸಭೆ ನಡೆಸಿ ಅವರಿಗೂ ಎಚ್ಚರಿಕೆಯ ಸಂದೇಶ ರವಾನೆ ಮಾಡುವ ಪ್ರಯತ್ನ ಮಾಡಿ ಪ್ರತಿಪಕ್ಷ ತಣ್ಣಗಾಗುವಂತೆ ಮಾಡಿದರು.

ಪ್ರತಿಪಕ್ಷ ಬಿಜೆಪಿ ಸರ್ಕಾರಕ್ಕೆ ಆಪರೇಷನ್‌ ಕಮಲದ ಭೀತಿ ಹುಟ್ಟಿಸುತ್ತಲೇ ಸರ್ಕಾರವನ್ನು ಗೊಂದಲದಲ್ಲಿ ಮುಳುಗಿಸಿ ಅಧಿವೇಶನ ಸುಸೂತ್ರವಾಗಿ ನಡೆಯದಂತೆ ಮಾಡಬೇಕೆಂಬ ಪ್ರಯತ್ನವೂ ಮೊದಲ ವಾರದಲ್ಲಿ ಕೈಗೂಡಲಿಲ್ಲ. ಹಿಂದಿನ ವರ್ಷಗಳಲ್ಲಿ ಕಲಾಪದಲ್ಲಿ ಮೊದಲ ಎರಡು ದಿನ ಪ್ರಶ್ನೋತ್ತರ ಕಲಾಪಕ್ಕಿಂತಲೂ ಮೊದಲೇ ನಿಲುವಳಿ ಸೂಚನೆ ಮಂಡನೆಗೆ ಪಟ್ಟು ಹಿಡಿದು ಪ್ರತಿಪಕ್ಷ ಸರ್ಕಾರದ ವಿರುದ್ಧ ಧರಣಿ ನಡೆಸಿ ಸಭಾತ್ಯಾಗ ಮಾಡಿ ಸದನದ ಸಮಯ ನುಂಗಿಹಾಕುತ್ತಿತ್ತು. ಆದರೆ, ಬಿಜೆಪಿ ನಾಯಕರು ಈ ಬಾರಿ ಆರಂಭದಲ್ಲಿ ಯಾವುದೇ ಗಲಾಟೆ, ಧರಣಿಗೆ ಮುಂದಾಗದೇ ಸುಗಮ ಕಲಾಪ ನಡೆಸಲು ಅವಕಾಶ ಕಲ್ಪಿಸಿರುವುದು ಪ್ರತಿಪಕ್ಷ ಮೆತ್ತಗಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಲೋಕಸಭೆ ಚುನಾವಣೆ ಆತಂಕ: ಈ ವರ್ಷ ಲೋಕಸಭೆಗೆ ಚುನಾವಣೆ ಇರುವುದರಿಂದ ಅಧಿವೇಶನದಲ್ಲಿ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡದೇ ಬರೀ ಗಲಾಟೆ ಮಾಡಿದರೆ ಅದು ಕೂಡ ಸಾರ್ವಜನಿಕವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ತಪ್ಪುಸಂದೇಶ ರವಾನೆಯಾಗುತ್ತದೆ ಎಂಬ ಆತಂಕವೂ ಬಿಜೆಪಿ ನಾಯಕರನ್ನು ಕಾಡಿದಂತಿದೆ. ಆಡಳಿತ ಪಕ್ಷದ ಸದಸ್ಯರು ಸರ್ಕಾರ ಸಮಸ್ಯೆಗಳ ಬಗ್ಗೆ ಚರ್ಚೆಗೆ ಸಿದ್ದವಿದ್ದರೂ ಬಿಜೆಪಿಯವರು ಅನಗತ್ಯ ಗೊಂದಲ ಸೃಷ್ಟಿಸಿ ಕಲಾಪದ ಸಮಯ ಹಾಳು ಮಾಡುತ್ತಿದ್ದಾರೆ ಎಂಬ ಸಂದೇಶ ರವಾನಿಸಿದರೆ ಅದು ತಮಗೆ ಮುಳುವಾಗುವ ಸಾಧ್ಯತೆ ಇದೆ ಎಂಬ ಆತಂಕ ಬಿಜೆಪಿ ನಾಯಕರನ್ನು ಕಾಡಿದಂತಿದೆ.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಗೈರು ಹಾಜರಿಯಲ್ಲಿಯೂ ಸಮ್ಮಿಶ್ರ ಸರ್ಕಾರವು ಪ್ರತಿಪಕ್ಷದ ವಿರುದ್ದ ಹಠಕ್ಕೆ ಬಿದ್ದು ಗೊಂದಲ ಸೃಷ್ಟಿಸಿಕೊಳ್ಳದೇ ಹೆಚ್ಚಿನ ಚರ್ಚೆಗೆ ಅವಕಾಶ ಮಾಡಿಕೊಡುವ ಮೂಲಕ ಜಾಣತನ ತೋರಿತು. ಮೊದಲ ವಾರದ ಕಲಾಪದಲ್ಲಿ ತಾನು ಬಯಸಿದ ವಿಧೇಯಕಗಳನ್ನೂ ಪ್ರತಿಪಕ್ಷದ ವಿರೋಧವಿಲ್ಲದೇ ಅಂಗೀಕಾರ ಮಾಡಿಕೊಳ್ಳುವಲ್ಲಿ ಯಶಸ್ವಿಯಾಯಿತು.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.