ಪ್ರಸಾದ: ಸಿಸಿಟಿವಿ ಕಣ್ಣು
Team Udayavani, Dec 18, 2018, 6:00 AM IST
ಬೆಳಗಾವಿ: ರಾಜ್ಯದಲ್ಲಿ ಇನ್ನು ಮುಂದೆ ಮುಜರಾಯಿ ಇಲಾಖೆ ಅಧೀನದಲ್ಲಿರುವ ದೇಗುಲಗಳಲ್ಲಿ ಪ್ರಸಾದ, ದಾಸೋಹ ಸಿದ್ಧಪಡಿಸುವ ಕೋಣೆಗಳಿಗೆ ಸಿಸಿಟಿವಿ ಕೆಮರಾ ಅಳವಡಿಕೆಯನ್ನು ಸರಕಾರ ಕಡ್ಡಾಯಗೊಳಿಸಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ದೇಗುಲದಲ್ಲಿ ಪ್ರಸಾದ ಸೇವಿಸಿ 14 ಮಂದಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಮುಜರಾಯಿ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ 20 ಅಂಶಗಳ ಸುತ್ತೋಲೆ ಹೊರಡಿಸಿದೆ. ಮುಜರಾಯಿ ಇಲಾಖಾ ವ್ಯಾಪ್ತಿಗೆ ಒಳಪಡಿಸುವ ಅಧಿಸೂಚಿತ ಸಂಸ್ಥೆಗಳಲ್ಲಿ ಭಕ್ತರಿಗೆ ಪ್ರಸಾದ ರೂಪದಲ್ಲಿ ಅನ್ನದಾಸೋಹ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಇಲ್ಲಿ ಸುತ್ತೋಲೆಯ ಅಂಶಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.
ಅದರಂತೆ ಇನ್ನು ಮುಂದೆ ಪ್ರಸಾದ, ದಾಸೋಹ ಮಾತ್ರವಲ್ಲದೆ ದೇವರಿಗಿಡುವ ನೈವೇದ್ಯ ತಯಾರಿಕೆ ಕೂಡ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಲಿದೆ. ಜತೆಗೆ ಇವುಗಳಿಗೆ ಉಪಯೋಗಿಸುವ ಆಹಾರ ಪದಾರ್ಥಗಳ ಗುಣಮಟ್ಟ ತಪಾಸಣೆ ಖಾತರಿಯಾದ ಬಳಿಕವಷ್ಟೇ ಬಳಸುವುದನ್ನು ಕಡ್ಡಾಯಗೊಳಿಸಲಾಗಿದೆ. ಸ್ವಯಂಪ್ರೇರಿತವಾಗಿ ದಾಸೋಹ, ಪ್ರಸಾದ ವಿತರಿಸ ಬಯಸುವವರು ಕೂಡ ಇನ್ನು ಮುಂದೆ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಎಷ್ಟು ಮಂದಿಗೆ, ಯಾವ ಪ್ರಸಾದ ವಿತರಿಸಲಾಗುತ್ತದೆ ಎಂಬ ಮಾಹಿತಿ ಜತೆಗೆ ಸಿದ್ಧಪಡಿಸಿದ ಪ್ರಸಾದ, ದಾಸೋಹದ ಮಾದರಿಯನ್ನು ಆರೋಗ್ಯ ಪರಿವೀಕ್ಷಕರು ಪರಿಶೀಲಿಸಿ ಖಾತರಿಪಡಿಸಿದ ಬಳಿಕವಷ್ಟೇ ವಿತರಿಸಬೇಕಾಗುತ್ತದೆ. ಹಾಗಾಗಿ ಇನ್ನು ಮುಂದೆ ಮುಜರಾಯಿ ಇಲಾಖೆ ವ್ಯಾಪ್ತಿಯ ದೇಗುಲಗಳಲ್ಲಿ ಏಕಾಏಕಿ ಪ್ರಸಾದ ವಿತರಿಸಲು ಅವಕಾಶ ಇರುವುದಿಲ್ಲ. ಪೂರ್ವಾನುಮತಿ, ಅಗತ್ಯ ದೃಢೀಕರಣದ ಬಳಿಕವಷ್ಟೇ ಪ್ರಸಾದ, ದಾಸೋಹ ವಿತರಣೆಗೆ ಅನುಮತಿ ಸಿಗಲಿದೆ.
ಸುತ್ತೋಲೆ ಪ್ರಮುಖ ಅಂಶಗಳು ಹೀಗಿವೆ
ದೇವರ ನೈವೇದ್ಯ ಮತ್ತು ದಾಸೋಹಕ್ಕಾಗಿ ಇರುವ ಅಡುಗೆ ಕೋಣೆ ಸಿಸಿಟಿವಿ ಹೊಂದಿರಲೇಬೇಕು ಎಂದಿದೆ. ಅಡುಗೆ ಕೋಣೆಗೆ ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ಕಟ್ಟುನಿಟ್ಟಾಗಿ ನಿಗಾ ವಹಿಸಬೇಕು. ತಯಾ ರಿಸಿರುವ ನೈವೇದ್ಯ/ಅಡುಗೆ ಸ್ವೀಕರಿಸಲು ಯೋಗ್ಯವಾಗಿರುವ ಬಗ್ಗೆ ಖಚಿತಪಡಿಸಿಕೊಂಡ ಅನಂತರ ವಿತರಣೆ ಮಾಡಲು ಕ್ರಮ ವಹಿಸಬೇಕು. ದೇಗುಲದ ಪರಿಸರದಲ್ಲಿ ಭಕ್ತರೇ ಪ್ರಸಾದ ತಯಾರಿಸಿ ನೇರವಾಗಿ ವಿತರಿಸುವ ವಿಚಾರದಲ್ಲಿ ಪೂರ್ವಭಾವಿ ಅನುಮತಿ ಪಡೆಯಬೇಕು. ಭಕ್ತರಿಗೆ ವಿತರಿಸುವ ಮುನ್ನ ಆರೋಗ್ಯ ಇಲಾಖೆಯ ಆಹಾರ ಸುರಕ್ಷತಾ ತಂಡದಿಂದ ಪರೀಕ್ಷೆಗೆ ಒಳಪಡಿಸಿ ಪ್ರಸಾದವು ಸ್ವೀಕರಿಸಲು ಯೋಗ್ಯವಾಗಿರುವ ಬಗ್ಗೆ ದೃಢೀಕರಣ ಪಡೆದುಕೊಳ್ಳಬೇಕು.
ಪ್ರಸಾದದಲ್ಲಿ ಸೇರಿದ್ದು ಮೊನೋ ಕ್ರೋಟೋಪಾಸ್!
ಮೈಸೂರು: ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಸೇವನೆ ಘಟನೆಗೆ ಸಂಬಂಧಿಸಿದ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದಿದೆ. ಆಹಾರದಲ್ಲಿ ಕ್ರಿಮಿನಾಶಕ ಮೊನೋ ಕ್ರೋಟೋಪಾಸ್ನ ಆರ್ಗನೋ ಫಾಸ್ಪರಸ್ ಅಂಶ ಬೆರೆತಿರುವುದು ಪತ್ತೆಯಾಗಿದೆ. ತನಿಖೆ ಮುಂದುವರಿದಿರುವುದರಿಂದ ಕ್ರಿಮಿನಾಶಕ ಎಷ್ಟು ಪ್ರಮಾಣದಲ್ಲಿ ಬೆರೆತಿದೆ ಎಂಬುದನ್ನು ಈಗಲೇ ಬಹಿರಂಗಪಡಿಸಲಾಗುವುದಿಲ್ಲ ಎಂದು ದಕ್ಷಿಣ ವಲಯ ಐಜಿಪಿ ಶರತ್ಚಂದ್ರ ತಿಳಿಸಿದ್ದಾರೆ. ಜೆಎಸ್ಎಸ್ ಆಸ್ಪತ್ರೆ ಮತ್ತು ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಘಟನೆ ಸಂಬಂಧ ಸಾಕಷ್ಟು ಸುಳಿವು ಸಿಕ್ಕಿದ್ದು, 13 ಅಧಿಕಾರಿಗಳು ವಿವಿಧ ಕೋನಗಳಲ್ಲಿ ತನಿಖೆ ಮಾಡುತ್ತಿದ್ದಾರೆ. ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ತನಿಖೆ ಉತ್ತಮ ಹಾದಿಯಲ್ಲಿ ನಡೆಯುತ್ತಿದೆ ಎಂದಷ್ಟೇ ಹೇಳಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್