ವಿಷ ಪ್ರಕರಣ ‘ಸ್ವಾಮೀಜಿ ವಶ’ ; ದುರಂತದ ಹಿಂದೆ ಮಹಿಳೆ


Team Udayavani, Dec 19, 2018, 6:00 AM IST

3.jpg

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಸುಳ್ವಾಡಿ ಕಿಚ್‌ಗುತ್‌ ಮಾರಮ್ಮ ದೇವಸ್ಥಾನದ “ವಿಷಪ್ರಸಾದ’ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಮಂಗಳವಾರ ರಾತ್ರಿ ಮಾರಮ್ಮ ದೇಗುಲದ ಟ್ರಸ್ಟ್‌ ಅಧ್ಯಕ್ಷರಾದ ಸಾಲೂರು ಮಠದ ಕಿರಿಯ ಸ್ವಾಮೀಜಿ ಇಮ್ಮಡಿ ಮಹದೇವಸ್ವಾಮಿ ಅವರನ್ನು ವಶಕ್ಕೆ, ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. 15 ಜನರ ಸಾವಿಗೆ ಕಾರಣರಾಗಿರುವ ಪ್ರಕರಣದಲ್ಲಿ ಭಾಗಿ ಆಗಿರುವುದಾಗಿ ದೇವಾಲಯದ ಟ್ರಸ್ಟ್‌ ವ್ಯವಸ್ಥಾಪಕ ಮಾದೇಶ್‌ ಪತ್ನಿ ಅಂಬಿಕಾ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾಳೆ ಎಂದೂ ಹೇಳಲಾಗಿದೆ.

ಅಂಬಿಕಾ ಹೇಳಿಕೆಯನ್ನು ಅಧರಿಸಿ ಮತ್ತೂಮ್ಮೆ ಇಮ್ಮಡಿ ಮಹದೇವಸ್ವಾಮಿ ಅವರನ್ನು ಕೊಳ್ಳೆಗಾಲದ ಸಾಲೂರು ಮಠದ ಸಂಸ್ಕೃತ ಪಾಠಶಾಲೆಯಲ್ಲಿ ಮಂಗಳವಾರ ಪೊಲೀಸರು ವಿಚಾರಣೆ ನಡೆಸಿದರು. ಬಳಿಕ ರಾತ್ರಿ 11.30ರ ಸುಮಾರಿಗೆ ಅವರನ್ನು ವಶಕ್ಕೆ ಪಡೆದು ಕೊಳ್ಳಲಾಯಿತು. ಅಲ್ಲದೆ, ಇಮ್ಮಡಿ ಮಹದೇವಸ್ವಾಮಿ ಸೂಚನೆ ಮೇರೆಗೆ ವ್ಯವಸ್ಥಾಪಕ ಮಾದೇಶ್‌ ಮತ್ತು ಆತನ ಪತ್ನಿ ಅಂಬಿಕಾ, ದೇಗುಲದ ಟ್ರಸ್ಟಿ ಚಿನ್ನಪ್ಪಿ ಹಾಗೂ ನಾಗರಕಲ್ಲು ಅರ್ಚಕ ದೊಡ್ಡಯ್ಯ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಸ್ಪಷ್ಟ ಎಂದು ಹೇಳಲಾಗುತ್ತಿದೆ. ಅಲ್ಲದೆ, ಇನ್ನೂ ಕೆಲವು ಮಂದಿ  ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇಮ್ಮಡಿ ಮಹದೇವಸ್ವಾಮಿ ಅವರು ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಸಾಲೂರು ಮಠದ ಕಿರಿಯ ಸ್ವಾಮೀಜಿ ಸಹ ಆಗಿದ್ದಾರೆ.

ಯಾವ ಕಾರಣಕ್ಕಾಗಿ ವಿಷ ಬೆರೆಸಲಾಗಿದೆ? ಸ್ವಾಮೀಜಿ ಯಾಕೆ ವಿಷ ಹಾಕಲು ಹೇಳಿದ್ದರು? ಎಂಬುದು ಇನ್ನಷ್ಟೇ  ಗೊತ್ತಾಗಬೇಕಿದೆ. ಈ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಧರ್ಮೇಂದರ್‌ ಕುಮಾರ್‌ ಮೀನಾ ಅವರನ್ನು ಸಂಪರ್ಕಿಸಿದಾಗ, ಇದು ಅಧಿಕೃತ ಮಾಹಿತಿಅಲ್ಲ. ಈ ಬಗ್ಗೆ ನಾನು ಈಗ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ. ರಾತ್ರಿ ಕೊಳ್ಳೆಗಾಲ ಪೊಲೀಸ್‌ ಠಾಣೆಯಲ್ಲಿ
ಮಾಧ್ಯಮಗಳ ಜತೆ ಮಾತನಾಡಿ, ಇಮ್ಮಡಿ ಮಹದೇವ ಸ್ವಾಮಿ ಅವರನ್ನು ಎರಡು ಬಾರಿ ವಿಚಾರಣೆ ನಡೆಸಿದ್ದೇವೆ. ತನಿಖೆ ಹಂತದಲ್ಲಿರುವ ಕಾರಣ ಬಂಧನದ ವಿಚಾರವಾಗಿ ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ. ಆದಷ್ಟು ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ. ಪ್ರಕರಣದಲ್ಲಿ ಭಾಗಿಯಾಗಿರುವ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಎಸ್ಪಿ ಮೀನಾ ಹೇಳಿದ್ದಾರೆ. 14ರಂದು ನಡೆದಿದ್ದ ಮಾರಮ್ಮ ದೇವಾಲಯದ ಗೋಪುರ ಶಂಕುಸ್ಥಾಪನೆ ಸಂದರ್ಭದಲ್ಲಿ ನಡೆದ ಅನ್ನ ಸಂತರ್ಪಣೆಗೆ ಸಿದ್ಧಪಡಿಸಲಾದ ಪ್ರಸಾದಕ್ಕೆ ವಿಷ ಬೆರೆಸಲಾಗಿತ್ತು. ಸಮಾರಂಭಕ್ಕೆ ಟ್ರಸ್ಟ್‌ ಅಧ್ಯಕ್ಷರಾಗಿದ್ದ ಇಮ್ಮಡಿ ಮಹದೇವಸ್ವಾಮಿ ಗೈರು ಹಾಜರಾಗಿದ್ದರು.

ಸಾಲೂರು ಮಠದ ಹಿರಿಯ ಸ್ವಾಮೀಜಿ ಪಟ್ಟದ ಗುರುಸ್ವಾಮೀಜಿ ಆಗಮಿಸಿ, ಶಂಕುಸ್ಥಾಪನೆ ನೆರವೇರಿಸಿದ್ದರು. ಈ ಕಾರಣದಿಂದಲೇ ದೇವಾಲಯದ ಟ್ರಸ್ಟಿ ಚಿನ್ನಪ್ಪಿಯ ಮಗ ಲೋಕೇಶ್‌ ಮಾಧ್ಯಮದವೊಂದಿಗೆ ಟ್ರಸ್ಟ್‌ ಅಧ್ಯಕ್ಷ ಇಮ್ಮಡಿ ಮಹದೇವಸ್ವಾಮಿ ಈ ಕೃತ್ಯದಲ್ಲಿ
ಭಾಗಿಯಾಗಿದ್ದಾರೆಂಬ ಸಂಶಯ ವ್ಯಕ್ತಪಡಿಸಿದ್ದರು.

ಮಠಾಧೀಶರ ಕಳವಳ: ಪ್ರಕರಣಕ್ಕೆ ಸಂಬಂಧಿಸಿ ನಾಡಿನ ಹಲವು ಮಠಾಧೀಶರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ದೇವರ ಪ್ರಸಾದದ ಬಗ್ಗೆ ಕಾಳಜಿ ಇರಬೇಕೇ ಹೊರತು ಅನುಮಾನವಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.