ಹ್ಯಾಪಿ ಇಎಂಐ ನವೋದ್ಯಮಕ್ಕೆ ಜಾಗತಿಕ ಮನ್ನಣೆ


Team Udayavani, Dec 19, 2018, 9:45 AM IST

10.jpg

ಬೆಂಗಳೂರು: ನ್ಯೂಯಾರ್ಕ್‌ನ ಒನ್‌ ವರ್ಲ್ಡ್ ಟ್ರೇಡ್‌ ಸೆಂಟರ್‌ನಲ್ಲಿ ಇತ್ತೀಚಿಗೆ ನಡೆದ “ಗ್ಲೋಬಲ್‌ ಕೆ-50′ ಸಮಾವೇಶದಲ್ಲಿ ವಿಶ್ವದ ಅಗ್ರ 50 ನವೋದ್ಯಮಗಳ ಪಟ್ಟಿ ಬಿಡುಗಡೆಯಾಗಿದ್ದು, ಬೆಂಗಳೂರು ಮೂಲದ ಹ್ಯಾಪಿ ಇಎಂಐ ನವೋದ್ಯಮವು ಹಣಕಾಸು ವಿಭಾಗದಲ್ಲಿ 30ನೇ ಸ್ಥಾನ ಪಡೆದಿದೆ. ಜಾಗತಿಕ ಮಟ್ಟದಲ್ಲಿ ಮನ್ನಣೆ ಜತೆಗೆ 50 ಸಾವಿರ ಯು.ಎಸ್‌.ಡಾಲರ್‌ ಮೊತ್ತದ ಚೆಕ್‌ ಪಡೆದಿದೆ. ವಿಶ್ವದ ಅಗ್ರ 50 ನವೋದ್ಯಮಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಹ್ಯಾಪಿ ಇಎಂಐ ನವೋದ್ಯಮಕ್ಕೆ ಸುಹಾಸ್‌ ಗೋಪಿನಾಥ್‌ ಅವರು ಸಂಸ್ಥಾಪಕರಾಗಿದ್ದರೆ, ಯುವ ಉದ್ಯಮಿ ಹಾಗೂ ವಿಆರ್‌ಎಲ್‌ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಆನಂದ್‌ ಸಂಕೇಶ್ವರ್‌  ಅವರು ಸಹಸಂಸ್ಥಾಪಕರಾಗಿದ್ದಾರೆ.

ಕೈರೋಸ್‌ ಸೊಸೈಟಿಯ ಕೆ-50 ಪಟ್ಟಿಯಲ್ಲಿ ಹ್ಯಾಪಿ ಇಎಂಐ ನವೋದ್ಯಮವು 30ನೇ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ. ಇದರಿಂದ ಎಲ್ಲರಿಗೂ ಸುಲಭವಾಗಿ ಸಾಲ ಸೌಲಭ್ಯ ಕಲ್ಪಿಸುವ ನಮ್ಮ ಧ್ಯೇಯೋದ್ದೇಶಕ್ಕೆ ಪ್ರೋತ್ಸಾಹ ದೊರೆತಂತಾಗಿದೆ ಎಂದು ಆನಂದ್‌ ಸಂಕೇಶ್ವರ್‌ ಹೇಳಿದ್ದಾರೆ. ಹ್ಯಾಪಿ ಇಎಂಐ ನವೋದ್ಯಮದ ಸಂಸ್ಥಾಪಕ ಸುಹಾಸ್‌ ಗೋಪಿನಾಥ್‌, ಹ್ಯಾಪಿ ಇಎಂಐ ಕ್ರೆಡಿಟ್‌ ಕಾರ್ಡ್‌ ಪರಿಕಲ್ಪನೆಗೆ ಹೊಸ ಭಾಷ್ಯ ಬರೆಯಲು ಮುಂದಾಗಿದೆ. ಶೂನ್ಯ ಬಡ್ಡಿ ದರದಲ್ಲಿ ಸುಲಭ ಕಂತುಗಳ ಸಾಲ ಸೌಲಭ್ಯ ನೀಡುವ ಮೂಲಕ ಯುವಜನತೆ ತಮಗೆ ಬೇಕಾದ ವಸ್ತುಗಳನ್ನು ಖರೀದಿಸಲು ಅನುಕೂಲ ಕಲ್ಪಿಸಿಕೊಡುತ್ತಿದೆ ಎಂದು ತಿಳಿಸಿದ್ದಾರೆ. 

ಎಲ್ಲರಿಗೂ ಸುಲಭವಾಗಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಕಲ್ಪಿಸುವುದು ಈ ಬಾರಿಯ ಕೈರೋಸ್‌ ಜಾಗತಿಕ ಸಮಾವೇಶದ ಧ್ಯೇಯವಾಗಿತ್ತು. ಈ ಧ್ಯೇಯಕ್ಕೆ ಪೂರಕವಾಗಿ ಹ್ಯಾಪಿ ಇಎಂಐ ನವೋದ್ಯಮವು ಕಾರ್ಯ ನಿರ್ವಹಿಸುತ್ತಿದ್ದು, ಒಂದು ನಿಮಿಷದಲ್ಲಿ ಸಾಲ ಸೌಲಭ್ಯ ಕಲ್ಪಿಸಲು ನೆರವಾಗಲಿದೆ. ಈ ಹಿನ್ನೆಲೆಯಲ್ಲಿ ಹಣಕಾಸು ವಿಭಾಗದಲ್ಲಿ ಹ್ಯಾಪಿ ಇಎಂಐ ನವೋದ್ಯಮಕ್ಕೆ ವಿಶ್ವದ ಅಗ್ರ 50 ನವೋದ್ಯಮಗಳ ಪಟ್ಟಿಯಲ್ಲಿ ಸ್ಥಾನ ದೊರೆತಿದೆ. ಜತೆಗೆ 50 ಸಾವಿರ ಯುಎಸ್‌ ಡಾಲರ್‌ ಚೆಕ್‌ ನೀಡಿ ಗೌರವಿಸಿದೆ. ಹಣಕಾಸು, ಶಿಕ್ಷಣ, ಆರೋಗ್ಯ ಹಾಗೂ ಅತ್ಯಾಧುನಿಕ ತಂತ್ರಜ್ಞಾನ ವಿಭಾಗಗಳಲ್ಲಿ ಹೊಸದಾಗಿ ಸ್ಥಾಪನೆಯಾದ ಸಂಸ್ಥೆಗಳು ತಮ್ಮದೇ ಆದ ವಿಶಿಷ್ಠ ಛಾಪು
ಮೂಡಿಸುತ್ತಿರುವ ನವೋದ್ಯಮಗಳನ್ನು ಜಾಗತಿಕ ಅಗ್ರ 50 ನವೋದ್ಯಮಗಳ ಪಟ್ಟಿಗೆ ಆಯ್ಕೆ ಮಾಡಲಾಗುತ್ತದೆ. ಇದಕ್ಕಾಗಿ ಜಾಗತಿಕ ಮಟ್ಟದ 150 ಸಿಇಒಗಳು, ಕೈಗಾರಿಕಾ ಮುಖ್ಯಸ್ಥರು, ಮಾಧ್ಯಮ ಹಾಗೂ ಜಾಗತಿಕ ವಿ.ಸಿ.ಗಳ ಸಮ್ಮುಖಗಳ ನವೋದ್ಯಮ ಸಂಸ್ಥೆಗಳು ತಮ್ಮ ಧ್ಯೇಯೋದ್ದೇಶ ಹಾಗೂ ಕಾರ್ಯ ನಿರ್ವಹಣೆ ಕುರಿತ ವಿವರ ನೀಡಬೇಕು.

ಯಾವುದೇ ವಸ್ತುವಿನ ಖರೀದಿ ಇಲ್ಲವೆ, ಸೇವೆ ಪಡೆಯುವಾಗ ಗ್ರಾಹಕರು ಎದುರಿಸುವ ಸಮಸ್ಯೆಗಳನ್ನು ಪರಿಹರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು. ಈ ಎಲ್ಲ ಮಾಹಿತಿ ತೃಪ್ತಿಕರವಾಗಿದ್ದರಷ್ಟೇ ಜಾಗತಿಕ ಅಗ್ರ 50 ನವೋದ್ಯಮಗಳಲ್ಲಿ ಸ್ಥಾನ ನೀಡಿಕೆಗೆ ಪರಿಗಣಿಸಲಾಗುತ್ತದೆ. ಈವರೆಗೆ ಮನ್ನಣೆ ಪಡೆದಿರುವ ನವೋದ್ಯಮಗಳಿಗೆ ಒಂದು ಶತಕೋಟಿ ಡಾಲರ್‌ವರೆಗೆ ಬಂಡವಾಳ ಕ್ರೋಢೀಕರಿಸಲು ಅನುಕೂಲವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕೈರೋಸ್‌ ಸೊಸೈಟಿ ಜಾಗತಿಕ ಯುವ ಉದ್ಯಮಿಗಳ ಸಮುದಾಯವಾಗಿದೆ. ಜಾಗತಿಕವಾಗಿ ಕ್ಲಿಷ್ಟ ಸವಾಲುಗಳನ್ನು ಸುಲಭವಾಗಿ ಪರಿಹರಿಸುವುದು ಈ ಸಮುದಾಯದ ಉದ್ದೇಶ. ಪೀಟರ್‌ ಡಯಾಮಂಡಿಸ್‌, ರಿಚರ್ಡ್‌ ಬ್ರಾನ್ಸನ್‌, ಬಿಲ್‌ಗೇಟ್ಸ್‌ ಮತ್ತು ಬಿಲ್‌ ಕ್ಲಿಂಟನ್‌
ಅವರು ಈ ಸೊಸೈಟಿಯ ಅಂತಾರಾಷ್ಟ್ರೀಯ ಮೆಂಟರ್‌ ಗಳಾಗಿದ್ದಾರೆ. ಒಟ್ಟು 10 ರಾಷ್ಟ್ರಗಳಲ್ಲಿ ಕಾರ್ಯ ನಿರ್ವಹಿಸುವ ಸಂಸ್ಥೆಯು ಪ್ರತಿ ವರ್ಷ ನ್ಯೂಯಾರ್ಕ್‌ ನಲ್ಲಿ ಜಾಗತಿಕ ಸಮಾವೇಶ ಹಮ್ಮಿಕೊಳ್ಳುತ್ತದೆ. 

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.