“ವರ್ಗಾವಣೆ ದಂಧೆ ಸಾಬೀತು ಮಾಡಿ’ 


Team Udayavani, Dec 20, 2018, 6:00 AM IST

54.jpg

ವಿಧಾನಸಭೆ: “”ಮುಖ್ಯಮಂತ್ರಿಯಾದ ನಂತರ ವರ್ಗಾವಣೆ ವಿಚಾರದಲ್ಲಿ ದಂಧೆ ಮಾಡಿರುವ ಬಗ್ಗೆ ಒಂದೇ ಒಂದು ಪ್ರಕರಣ ಸಾಬೀತುಪಡಿಸಿದರೆ ಒಂದು ಕ್ಷಣವೂ ಈ ಸ್ಥಾನದಲ್ಲಿ ಮುಂದುವರಿಯುವುದಿಲ್ಲ” ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸವಾಲು ಹಾಕಿದ್ದಾರೆ.

“”ವೆಸ್ಟೆಂಡ್‌ನ‌ಲ್ಲಿ ಕೊಠಡಿ ಪಡೆದಿದ್ದೇನೆ. ಆದರೆ, ಒಬ್ಬನೇ ಒಬ್ಬ ಸರ್ಕಾರಿ ಅಧಿಕಾರಿಯನ್ನು ಅಲ್ಲಿಗೆ ಕರೆಸಿಕೊಂಡು ಮಾತನಾಡಿಲ್ಲ. ಹಿಂದೆಯೂ ಸಾಕಷ್ಟು ಮುಖ್ಯಮಂತ್ರಿಗಳು ಅಲ್ಲಿ ಕೊಠಡಿ ಇಟ್ಟುಕೊಂಡಿದ್ದರು. ಅದೇ ರೀತಿ ನಾನೂ ಕೊಠಡಿ ಪಡೆದುಕೊಂಡಿದ್ದೇನೆ.
ಅಷ್ಟಕ್ಕೂ, ಸರ್ಕಾರಿ ಖಜಾನೆಯ ಹಣವನ್ನು ಅದಕ್ಕೆ ಬಳಕೆ ಮಾಡಿಕೊಳ್ಳುತ್ತಿಲ್ಲ” ಎಂದು ಸಮರ್ಥಿಸಿ ಕೊಂಡಿದ್ದಾರೆ.

“”ಬರ ಕುರಿತ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ನಾನು ಫೈವ್‌ ಸ್ಟಾರ್‌ ಹೋಟೆಲ್‌ನಲ್ಲಿ ತಂಗುತ್ತೇನೆ ಎಂದು ಯಡಿಯೂರಪ್ಪ ಸಹಿತ ಬಿಜೆಪಿಯ  ಕೆಲವರು ಆರೋಪ ಮಾಡಿದ್ದಾರೆ. ಆದರೆ, ನಾನು ಜೆ.ಪಿ.ನಗರದ ಮನೆಯಲ್ಲೇ ವಾಸವಾಗಿದ್ದೇನೆ. ಹಿಂದೆ
ಯಾರ್ಯಾರು ಮುಖ್ಯಮಂತ್ರಿಯಾಗಿದ್ದಾಗ ಎಲ್ಲಿದ್ದರು ಎನ್ನುವುದು ಗೊತ್ತಿದೆ” ಎಂದು ಪರೋಕ್ಷವಾಗಿ ವಾಗ್ಧಾಳಿ ನಡೆಸಿದರು.

ರೇವಣ್ಣ… ತಮ್ಮನಿಗೆ ಬುದ್ಧಿ ಹೇಳಪ್ಪಾ: ಕುಮಾರ ಸ್ವಾಮಿ ಅವರ ಹೇಳಿಕೆಗೆ ಗರಂ ಆದ ಯಡಿಯೂರಪ್ಪ, “”ನಾನು ಮುಖ್ಯಮಂತ್ರಿಯಾಗಿದ್ದಾಗ ಫೈವ್‌ ಸ್ಟಾರ್‌ ಹೋಟೆಲ್‌ನಲ್ಲಿ ಇದ್ದ ಬಗ್ಗೆ ದಾಖಲೆ ಕೊಟ್ಟರೆ ಈ ಕ್ಷಣದಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋಗುತ್ತೇನೆ. ಯಾಕೆ ಸುಳ್ಳು ಹೇಳುತ್ತೀರಿ, ಯೇ… ರೇವಣ್ಣ , ನಿಮ್ಮ ತಮ್ಮನಿಗೆ ಬುದಿಟಛಿ ಹೇಳಪ್ಪಾ” ಎಂದು ಲೇವಡಿ ಮಾಡಿದರು. 

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, “”ಬೇಡ ಬೇಡ ನೀವು ಇನ್ನೂ ಈ ಸದನದಲ್ಲಿ ಇರಬೇಕು. ಆದರೆ, ನಾನು ವೆಸ್ಟೆಂಡ್‌ ಹೋಟೆಲ್‌ನಲ್ಲಿ ಬೇರೆ ಉದ್ದೇಶಕ್ಕೆ ಉಳಿದುಕೊಂಡಿಲ್ಲ” ಎಂದರು. ಮಾತು ವಾಪಸ್‌ ಪಡೆಯುವೆ: ಪ್ರತಿಭಟನಾನಿರತ
ರೈತ ಮಹಿಳೆ ಬಗ್ಗೆ ನೀಡಿದ್ದ ಹೇಳಿಕೆ ಕುರಿತು ಟೀಕೆಗಳು ಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “”ರೈತ ಮಹಿಳೆಯೊಬ್ಬರ ಬಗ್ಗೆ ನಾನು ಯಾವುದೇ ಕೆಟ್ಟ ಉದ್ದೇಶದಿಂದ ಮಾತನಾಡಲಿಲ್ಲ. ತಾಯಿ ಎಂಬ ಪದ ಬಳಕೆ ಮಾಡಿದೆ. ಇಷ್ಟು ವರ್ಷ ಎಲ್ಲಿದ್ಯಮ್ಮಾ ಎನ್ನುವ ಬದಲು ಎಲ್ಲಿ ಮಲಗಿದ್ದೆ ಎಂದು ಲೋಕಾರೂಢಿಯಾಗಿ ಮಾತನಾಡಿದೆ. ಆದರೆ, ಅದಕ್ಕೆ ಬೇರೆ, ಬೇರೆ ರೀತಿ ಅರ್ಥ ಕಲ್ಪಿಸಲಾಯಿತು. ಸದನದಲ್ಲೂ ಅದೇ ವಿಚಾರ ಪದೇ ಪದೆ ಪ್ರಸ್ತಾಪಿಸಲಾಗುತ್ತಿದೆ. ನಾನು ಎಂದೂ ಹೆಣ್ಣು ಮಕ್ಕಳ ಬಗ್ಗೆ ಲಘುವಾಗಿ ಮಾತನಾಡಿಲ್ಲ. ಆ ಸಂಸ್ಕೃತಿಯಿಂದ ಬಂದವ ನಾನಲ್ಲ. ಒಂದೊಮ್ಮೆ ಆ ಹೇಳಿಕೆ ಬಗ್ಗೆ ಆಕ್ಷೇಪ ಇದ್ದರೆ ನಾನು ವಾಪಸ್‌ ಪಡೆದು
ಕೊಳ್ಳುತೇ¤ನೆ. ನನಗೇನೂ ಪ್ರತಿಷ್ಠೆ ಇಲ್ಲ” ಎಂದರು. “”ಜನಸಾಮಾನ್ಯರು, ಬಡವರಿಗೆ ಲಭ್ಯವಿರುವ ವಿಚಾರದಲ್ಲಿ ನಾನು ಬೇರೆಯವರಿಂದ ಹೇಳಿಸಿ ಕೊಳ್ಳಬೇಕಿಲ್ಲ. ಏಳು ತಿಂಗಳಲ್ಲಿ ಎಷ್ಟು ಜನರ ಸಮಸ್ಯೆಗೆ ಸ್ಪಂದಿಸಿದ್ದೇನೆ ಎಂಬುದು ನನಗೆ ಗೊತ್ತಿದೆ. ಸಾವಿರಾರು ದಾಹರಣೆಗಳನ್ನೂ ನಾನು ಹೇಳಬಲ್ಲೆ” ಎಂದು ಹೇಳಿದರು.

ಬರ ಕುರಿತ ಚರ್ಚೆಯಲ್ಲಿ ಬಿಜೆಪಿ ಸದಸ್ಯರ ತೀಕ್ಷ್ಣ ಮಾತುಗಳಿಗೆ ತಮ್ಮದೇ ಆದ ಧಾಟಿಯಲ್ಲಿ ತಿರುಗೇಟು ನೀಡಿದ ಮುಖ್ಯಮಂತ್ರಿ, “”ಹಿಂದೆ ಬಿಜೆಪಿ ಜತೆ ಸೇರಿ ಸರ್ಕಾರ ನಡೆಸಿದಾಗ ಅಧಿಕಾರ ಹಸ್ತಾಂತರ ಪ್ರಸಂಗ ಹೊರತುಪಡಿಸಿದರೆ, ಉಳಿದ ಸಂದರ್ಭಗಳಲ್ಲಿ ನಾನು ಯಾವ ರೀತಿ ನಡೆದುಕೊಂಡಿದ್ದೆ ಎಂಬುದು ಎಲ್ಲ ಬಿಜೆಪಿಯವರಿಗೂ ಗೊತ್ತಿದೆ. ಆದರೆ, ನನ್ನ ನಡವಳಿಕೆ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ. ಸರ್ಕಾರ ಸತ್ತಿದೆ, ಸರ್ಕಾರ ಇದೆಯಾ ಎಂದು ಕೇಳುವವರಿಗೆ ಸರ್ಕಾರದ ಕೆಲಸಗಳು ಕಾಣುತ್ತಿಲ್ಲವೇ”
ಎಂದು ಪ್ರಶ್ನಿಸಿದರು. 

ರಾಷ್ಟ್ರೀಕೃತ ಬ್ಯಾಂಕ್‌ ಗಳು ಇವರ ಸಾಲಮನ್ನಾ ಯೋಜನೆ ಒಪ್ಪಿದ್ದಾರೋ ಇಲ್ಲವೇ ಎಂಬುದನ್ನು ಸದನದ ಮುಂದಿಡಲಿ. ಸುಳ್ಳು ಹೇಳಿ ಜನರನ್ನು ತಪ್ಪು ದಾರಿಗೆ ಎಳೆಯುವುದು ಬೇಡ.
● ಜಗದೀಶ್‌ ಶೆಟ್ಟರ್‌, ಮಾಜಿ ಮುಖ್ಯಮಂತ್ರಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.