ಸತೀಶ ಜಾರಕಿಹೊಳಿ ಸಿಎಂ ಆಗಲಿ: ಸಿದ್ದು 


Team Udayavani, Dec 20, 2018, 6:00 AM IST

60.jpg

ಬಾದಾಮಿ (ಬಾಗಲಕೋಟೆ): “ನಾನು ಸಾಮಾಜಿಕ ನ್ಯಾಯದ ಪರವಾಗಿ ಕೆಲಸ ಮಾಡುವ ವ್ಯಕ್ತಿ. ಸತೀಶ ಜಾರಕಿಹೊಳಿ ಕೂಡ ಅದೇ ಸಾಮಾಜಿಕ ನ್ಯಾಯ ನಂಬಿದವರು. ಹೀಗಾಗಿ, ಅವರೂ ಒಮ್ಮೆ ಸಿಎಂ ಆಗಲಿ. ಅಧಿಕಾರಕ್ಕೆ ಯಾರೂ ಗೂಟ ಹೊಡೆದುಕೊಂಡು ಕೂತಿರಲ್ಲ. ಎಲ್ಲರಿಗೂ ಅಧಿಕಾರ ಸಿಗಬೇಕು. ಸತೀಶ ಜಾರಕಿಹೊಳಿ ಸಿಎಂ ಸ್ಥಾನಕ್ಕೆ ಸೂಕ್ತ ವ್ಯಕ್ತಿ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕರಾವಳಿ ಪ್ರದೇಶಕ್ಕೂ ನ್ಯಾಯ ಸಿಗಬೇಕು. ಅದರಲ್ಲೂ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಲು ನಾನು ಬಿಡಲ್ಲ. ನಾನು ಸಿಎಂ ಆಗಿದ್ದಾಗ ಸಂಪುಟ ವಿಸ್ತರಣೆ ವೇಳೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಂಡಿದ್ದೆ. ಈಗ ಸಮ್ಮಿಶ್ರ ಸರ್ಕಾರವಿದೆ. ಎಲ್ಲವನ್ನೂ ನೋಡಿಕೊಂಡು ಹೋಗಬೇಕಾಗುತ್ತದೆ’ ಎಂದರು. 

ಸಚಿವ ಸಂಪುಟ ವಿಸ್ತರಣೆಯಲ್ಲಿ 1-2 ಸ್ಥಾನಗಳು ಬದಲಾಗಬಹುದು. ಕೆಲವರನ್ನು ಕೈಬಿಟ್ಟು ಹೊಸಬರನ್ನು ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂಬ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಹೇಳಿಕೆಗೆ ಗರಂ ಆದ ಸಿದ್ದರಾಮಯ್ಯ, “ನನ್ನನ್ನು ಯಾಕೆ ಕೇಳುತ್ತೀರಿ? ನಾನು ದಿನೇಶ ಗುಂಡೂರಾವ್‌ ಅವರ ನಾಲಿಗೆನಾ?’ ಎಂದು ಪ್ರಶ್ನಿಸಿದರು. 

ಸಿಎಂ ಸ್ಥಾನಕ್ಕಾಗಿ ಕಾಯಬೇಕು: ಸತೀಶ 
ಬಾದಾಮಿ: ಎಲ್ಲ ಸಮಾಜದವರಿಗೆ ಒಂದು ಬಾರಿಯಾದರೂ ಮುಖ್ಯಮಂತ್ರಿ ಹುದ್ದೆಯ ಅವಕಾಶ ಬಂದೇ ಬರುತ್ತದೆ. ನಾವು ಕಾಯಬೇಕು ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿ, ಸಚಿವ ಸ್ಥಾನ ಪಡೆದು ಅಭಿವೃದ್ಧಿ ಮಾಡಬೇಕೆಂದಿಲ್ಲ. ಸಚಿವ ಸ್ಥಾನ ಇರದಿದ್ದರೂ ಅಭಿವೃದ್ಧಿ ಮಾಡುವ ಶಕ್ತಿಯಿದೆ ಎಂದರು.

ಸಹೋದರ ಸಚಿವ ರಮೇಶ ಜಾರಕಿಹೊಳಿ ಸಂಪುಟ ಸಭೆ ಹಾಗೂ ಶಾಸಕಾಂಗ ಸಭೆಗೆ ಗೈರಾಗುತ್ತಿರುವ ವಿಚಾರ ಅವರ ವೈಯಕ್ತಿಕ ವಿಷಯ. ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವ ವಿಚಾರ ನನಗೆ ಗೊತ್ತಿಲ್ಲ. ನಾನು ಸಚಿವ ಸ್ಥಾನದ ಅಕಾಂಕ್ಷಿ ಅಲ್ಲ.
ಸಚಿವರಾಗಬೇಕಾದವರು ನನ್ನ ಬೆಂಬಲಿಗರು. ಸರಕಾರ ಮುಂದಿನ ನಾಲ್ಕೂವರೆ ವರ್ಷ ಸುಭದ್ರವಾಗಿರುತ್ತದೆ ಎಂದರು.

ವಿಧಾನಪರಿಷತ್‌ ಸಭಾಪತಿ ಆಯ್ಕೆ ಹೈಕಮಾಂಡ್‌ ಕೈಗೊಂಡ ನಿರ್ಧಾರ. ನಾನು ಎಸ್‌.ಆರ್‌. ಪಾಟೀಲರ ಹೆಸರು ಸೂಚಿಸಿದ್ದೆ.
ರಾಜಕೀಯದಲ್ಲಿ ಸಮಾಧಾನ, ಅಸಮಾಧಾನ ಎಂಬ ವಿಚಾರ ಇರುವುದಿಲ್ಲ. ಸಭಾಪತಿಯನ್ನು ಹೈಕಮಾಂಡ್‌ ನಿರ್ದೇಶನದಂತೆ ಆಯ್ಕೆ ಮಾಡಲಾಗಿದೆ.

● ಸಿದ್ದರಾಮಯ್ಯ, ಮಾಜಿ ಸಿಎಂ 

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.