ಶಸ್ತ್ರ ಚಿಕಿತ್ಸೆ ಬಳಿಕ ಸ್ವಾಮೀಜಿ ಮಠಕ್ಕೆ ವಾಪಸ್
Team Udayavani, Dec 20, 2018, 6:00 AM IST
ತುಮಕೂರು: ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಶತಾಯುಷಿ, ಭಕ್ತರ ಪಾಲಿನ ನಡೆದಾಡುವ ದೇವರು ಸಿದ್ಧಗಂಗಾ ಡಾ. ಶಿವಕುಮಾರ ಸ್ವಾಮೀಜಿ ಅವರು ಕ್ಷೇಮವಾಗಿ ಮಠಕ್ಕೆ ವಾಪಸ್ಸಾಗಿದ್ದಾರೆ. 13 ದಿನಗಳಿಂದ ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಮಧ್ಯಾಹ್ನ ಸಿದ್ಧಗಂಗಾ ಮಠಕ್ಕೆ ಆಗಮಿಸುತ್ತಿದ್ದಂತೆ ಸಾವಿರಾರು ಭಕ್ತರು ಹರ್ಷದಿಂದ ಜಯಕಾರ ಮೊಳಗಿಸಿದರು.
ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಲವಲವಿಕೆಯಿಂದ ಇದ್ದರು. ಇನ್ನೂ ಕೆಲ ದಿನಗಳ ಕಾಲ ಶ್ರೀಗಳಿಗೆ ವಿಶ್ರಾಂತಿ ಅಗತ್ಯವಿದ್ದು, ಹಳೇ ಮಠದಲ್ಲೇ ಶ್ರೀಗಳ ವಿಶ್ರಾಂತಿಗೆ ಸಿದ್ಧತೆ ಮಾಡಲಾಗಿದೆ. ಡಿಸ್ಚಾರ್ಜ್ ಆದ ಬಳಿಕ ವಿಶೇಷ ವಿಮಾನದ ಮೂಲಕ ಶ್ರೀಗಳು ಬೆಂಗಳೂರಿನ ಎಚ್ಎಎಲ್ಗೆ ಬಂದಿಳಿದರು. ಅಲ್ಲಿಂದ ಆ್ಯಂಬುಲೆನ್ಸ್ನಲ್ಲಿ ಶ್ರೀಮಠಕ್ಕೆ ಆಗಮಿಸಿದರು. ನಾಲ್ಕು ಗಂಟೆಗಳ ಪ್ರಯಾಣ ಬೆಳೆಸಿ ಆಗಮಿಸಿದ ಬಳಿಕ ಶ್ರೀಗಳು ಯಾವುದೇ ಆಯಾಸ ಇಲ್ಲದೆ, ಮಧ್ಯಾಹ್ನ ಇಷ್ಟಲಿಂಗ ಪೂಜೆ ನೆರವೇರಿಸಿ ಪ್ರಸಾದ ಸೇವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ