ಸುಳ್ವಾಡಿ ಪ್ರಕರಣದ ತನಿಖೆ ಚುರುಕು
Team Udayavani, Dec 21, 2018, 6:00 AM IST
ಮರಾಜನಗರ/ಹನೂರು: ಸುಳ್ವಾಡಿ ಗ್ರಾಮದ ಕಿಚ್ಚಗುತ್ತಿ ಮಾರಮ್ಮನ ದೇವಾಲಯದ ಪ್ರಸಾದಕ್ಕೆ ಕ್ರಿಮಿನಾಶಕ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಡಿವೈಎಸ್ಪಿ ಪುಟ್ಟಮಾದಯ್ಯ ನೇತೃತ್ವದ ತಂಡ ಗುರುವಾರ ನಾಲ್ವರು ಆರೋಪಿಗಳ ಪೈಕಿ ಮೂವರನ್ನು ದೇವಾಲಯಕ್ಕೆ ಕರೆ ತಂದು ಸ್ಥಳದ ಮಹಜರು ನಡೆಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ, ನ್ಯಾಯಾಲಯ ಅವರನ್ನು ಡಿ.22ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿತ್ತು. ಅದರಂತೆ ಆರೋಪಿಗಳನ್ನು ರಾಮಾಪುರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಪ್ರಮುಖ ಆರೋಪಿ ಇಮ್ಮಡಿ ಮಹದೇವ ಸ್ವಾಮಿಗೆ ಪ್ರತ್ಯೇಕ ಕೊಠಡಿ, ಮಹಿಳಾ ಆರೋಪಿ ಅಂಬಿಕಾಳಿಗೆ ಪ್ರತ್ಯೇಕ ಕೊಠಡಿ ಹಾಗೂ ಮಾದೇಶ, ದೊಡ್ಡಯ್ಯನನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗಿದೆ.
ಗುರುವಾರ ಬೆಳಗಿನ ಉಪಾಹಾರದ ಬಳಿಕ ಘಟನೆಗೆ ಸಂಬಂಧಿಸಿದಂತೆ ಮಧ್ಯಾಹ್ನದವರೆಗೂ ಪೊಲೀಸರು ಠಾಣೆಯಲ್ಲಿಯೇ ವಿಚಾರಣೆ ನಡೆಸಿದರು. ಬಳಿಕ, ಮಹದೇವಸ್ವಾಮಿಯನ್ನು ಠಾಣೆಯಲ್ಲಿಯೇ ಬಿಟ್ಟು ಉಳಿದ ಮೂವರು ಆರೋಪಿಗಳನ್ನು ದೇವಾಲಯಕ್ಕೆ ಕರೆದೊಯ್ದರು. ಅಂಬಿಕಾಳನ್ನು ವಾಹನದಲ್ಲಿಯೇ ಇರಿಸಿ, ಮಾದೇಶ್ ಮತ್ತು ದೊಡ್ಡಯ್ಯನನ್ನು ದೇವಾಲಯದ ಸಮೀಪಕ್ಕೆ ಕರೆ ತಂದು ಸ್ಥಳ ಪರಿಶೀಲನೆ ನಡೆಸಿದರು. ಪ್ರಸಾದಕ್ಕಾಗಿ ತಯಾರಿಸಲಾಗಿದ್ದ ರೈಸ್ಬಾತ್ಗೆ ಯಾವ ರೀತಿ ಮತ್ತು ಯಾವ ಪ್ರಮಾಣದಲ್ಲಿ ಕ್ರಿಮಿನಾಶಕ ಮಿಶ್ರಣ ಮಾಡಲಾಯಿತು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು.
ಚೆಕ್ ವಿತರಣೆ: ಈ ಮಧ್ಯೆ, ವಿಷಪ್ರಸಾದ ಸೇವನೆಯಿಂದ ಮೃತಪಟ್ಟ ದುಂಡಮ್ಮನ ಮನೆಗೆ ಭೇಟಿ ನೀಡಿದ ಶಾಸಕ ಆರ್.ನರೇಂದ್ರ, 5 ಲಕ್ಷ ರೂ.ಪರಿಹಾರದ ಚೆಕ್ ಹಾಗೂ ದಿನಬಳಕೆಯ ಆಹಾರ ಪದಾರ್ಥ ವಿತರಿಸಿದರು. ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನದಲ್ಲಿ ದುಂಡಮ್ಮ ಕಾರ್ಯ ನಿರ್ವಸುತ್ತಿದ್ದರು. ಕುಟುಂಬಸ್ಥರು ಯಾರನ್ನು ಸೂಚಿಸುತ್ತಾರೋ ಅವರಿಗೆ ಅವರು ನಿರ್ವಹಿಸುತ್ತಿದ್ದ ಕೆಲಸ ನೀಡಲಾಗುವುದು ಎಂದು ಭರವಸೆ ನೀಡಿದರು. ಪ್ರಕರಣದಲ್ಲಿ ಅಸ್ವಸ್ಥರಾಗಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 42 ಮಂದಿಯನ್ನು ಡಿಸಾcರ್ಜ್ ಮಾಡಲಾಗಿದ್ದು, ಇವರ ಆರೋಗ್ಯದ ಮೇಲ್ವಿಚಾರಣೆಗಾಗಿ 7 ಮಂದಿ ಹೆಚ್ಚುವರಿ ನುರಿತ ವೈದ್ಯರು, 1 ವೆಂಟಲೇಟರ್ಯುಕ್ತ ಆ್ಯಂಬುಲೆನ್ಸ್ ಸೇವೆ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ದೇವಾಲಯಕ್ಕೆ ಬೀಗ: ಈ ಮಧ್ಯೆ, ಘಟನೆ ನಡೆದ ಮಾರನೆಯ ದಿನದಿಂದ ದೇವಾಲಯದ ಬಾಗಿಲಿಗೆ ಬೀಗ ಹಾಕಲಾಗಿದ್ದು, ಕಿಚ್ಚುಗುತ್ತು ಮಾರಮ್ಮ ದೇವಾಲಯಲ್ಲೀಗ ದೇವಿಯ ದರ್ಶನವಿಲ್ಲ. ಡಿ.16ರಿಂದ ದೇವಾಲಯದಲ್ಲಿ ಪೂಜಾ ಕೈಂಕರ್ಯಗಳು ನಡೆದಿಲ್ಲ. ಘಟನೆ ನಡೆದಾಗಿನಿಂದ ಭಕ್ತರ ಸಂಖ್ಯೆ ಕಡಿಮೆಯಾಗಿದ್ದು, ಭೇಟಿ ನೀಡಿದವರು ದೇವಾಲಯದ ಬಾಗಿಲು ಹಾಕಿರುವುದರಿಂದ ಹೊರಗೇ ಕೈಮುಗಿದು ಮರಳುತ್ತಿದ್ದಾರೆ.
ನಾವು 5 ಜನ ಹೆಣ್ಣು ಮಕ್ಕಳಿದ್ದು, ಇದೀಗ ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದೇವೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸಬೇಕು.
– ಪ್ರೇಮ, ಮೃತ ದುಂಡಮ್ಮನವರ ದ್ವಿತೀಯ ಪುತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?