ಅಧಿವೇಶನ ಶಾಸ್ತ್ರ ಸಮಾಪ್ತಿ, ಚರ್ಚೆಗೆ ಬರ!


Team Udayavani, Dec 22, 2018, 6:00 AM IST

29.jpg

ಬೆಳಗಾವಿ: ಹತ್ತು ದಿನಗಳ ವಿಧಾನಮಂಡಲ ಅಧಿವೇಶನದಲ್ಲಿ ಕಲಾಪ ನಡೆದಿದ್ದೇ ಏಳು ದಿನ. ಅಷ್ಟೂ ದಿನ “ಬರ’ದ್ದೇ ಚರ್ಚೆ.
ಸರ್ಕಾರದ ಉತ್ತರವೂ ಪರಿಪೂರ್ಣವಾಗಲಿಲ್ಲ. ಪ್ರತಿಪಕ್ಷದ ಧರಣಿಯೂ ನಿಲ್ಲಲಿಲ್ಲ. ಸುಮಾರು 15 ಕೋಟಿ ರೂ.ವರೆಗೆ ವೆಚ್ಚ ಮಾಡಿ ಸುವರ್ಣಸೌಧದಲ್ಲಿ ನಡೆಸಿದ ಅಧಿವೇಶನದ ಒಟ್ಟಾರೆ ಫಲಶೃತಿ ಇದು. ಉತ್ತರ ಕರ್ನಾಟಕದಲ್ಲಿ ಕಲಾಪ ಶಾಸ್ತ್ರ ಮುಗಿಸಿದ ತೃಪ್ತಿ ಸರ್ಕಾರಕ್ಕೆ, ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲಮನ್ನಾಗಾಗಿ ಹೋರಾಟ ಮಾಡಿದ ಹೆಮ್ಮೆ ಬಿಜೆಪಿಗೆ. ಒಟ್ಟಾರೆ, ಆಡಳಿತ-ಪ್ರತಿಪಕ್ಷದ ಪ್ರತಿಷ್ಠೆಗೆ ಈ ಬಾರಿಯ ಕಲಾಪವೂ ಬಂದ್ರು, ಹೋದ್ರು ಎಂಬಂತೆ ಬರ್ಖಾಸ್ತುಗೊಂಡಿತು.

ಪ್ರತಿಪಕ್ಷ ನಾಯಕರಿಗೆ ಅಪಮಾನ ಮಾಡಿದ್ದೀರಿ, ಕ್ಷಮೆ ಕೇಳಬೇಕು ಎಂದು ಯಡಿಯೂರಪ್ಪ, ಕ್ಷಮೆ ಕೇಳುವ ತಪ್ಪು ಮಾಡಿಲ್ಲ ಎಂದು ಸಿಎಂ ಎಚ್‌.ಡಿ.ಕುಮಾರಸ್ವಾಮಿ ನಡುವಿನ ಹಗ್ಗಜಗ್ಗಾಟ ಹಾಗೂ ಪ್ರತಿಷ್ಠೆಗೆ ವಿಧಾಸಭೆಯಲ್ಲಿ ಎರಡೂವರೆ ದಿನದ ಕಲಾಪ ವ್ಯರ್ಥವಾಯಿತು. ಉತ್ತರ ಕರ್ನಾಟಕದ ಸಮಸ್ಯೆ- ಆಭಿವೃದ್ದಿ ಬಗ್ಗೆ ಚರ್ಚೆಗೆ ಅವಕಾಶ ಕೊಡಿ ಎಂಬ ಒತ್ತಾಯದ ಪರ-ವಿರೋಧದ ಗದ್ದಲ ಪರಿಷತ್‌ನ ಎರಡು ದಿನಗಳ ಕಲಾಪ ನುಂಗಿಹಾಕಿತು. ಹೀಗಾಗಿ, ಉತ್ತರ ಕರ್ನಾಟಕದ ಸಮಸ್ಯೆ-ಅಭಿವೃದಿಟಛಿ ಚರ್ಚೆ ಮರೀಚಿಕೆಯಾಗಿ ಕೃಷ್ಣಾ , ಮಹದಾಯಿ, ಡಾ.ಡಿ.ಎಂ.ನಂಜುಂಡಪ್ಪ ವರದಿ ಅನುಷ್ಠಾನದ ಸ್ಥಿತಿಗತಿ, ಹೈದರಾಬಾದ್‌ ಕರ್ನಾಟಕ ಅಭಿವೃದ್ದಿ ಮೌಲ್ಯ ಮಾಪನ ಇವೆಲ್ಲದರ ಕುರಿತು ಚರ್ಚೆಯೇ ಆಗಲಿಲ್ಲ. ಕೊನೆಯ ದಿನ ಹತ್ತು ನಿಮಿಷಗಳಲ್ಲಿ ಮೂರು ವಿಧೇಯಕ ಯಾವುದೇ ಚರ್ಚೆ ಇಲ್ಲದೆ ಅಂಗೀಕಾರ ಪಡೆದು ಸದನ ಅನಿರ್ದಿಷ್ಟ ಅವಧಿಗೆ ಮುಂದೂಡಿದ್ದು ಸರ್ಕಾರಕ್ಕೆ ಅಧಿವೇಶನ ಮುಗಿಸಲು ಇದ್ದ ಆತುರ-  ಕಾತುರಕ್ಕೆ ಸಾಕ್ಷಿ. ಹೀಗಾಗಿಯೇ ಉತ್ತರ ಕರ್ನಾಟಕ ಭಾಗದ ಅದರಲ್ಲೂ ಬೆಳಗಾವಿಯ ಜನರಿಗೆ ರಾಜ್ಯ ವಿಧಾನಮಂಡಲ ಅಧಿವೇಶನದ ಬಗ್ಗೆ ಆಸಕ್ತಿಯೇ ಕಂಡುಬರಲಿಲ್ಲ. ಎಂಟು ವರ್ಷಗಳ ಹಿಂದೆ ಈ ಭಾಗದಲ್ಲಿ ಅಧಿವೇಶನ ನಡೆಸುವ ತೀರ್ಮಾನ ವಾದಾಗ, ಅದಕ್ಕಾಗಿಯೇ ನೂರಾರು ಕೋಟಿ ರೂ. ವೆಚ್ಚದಲ್ಲಿ ಸುವರ್ಣಸೌಧ ನಿರ್ಮಾಣವಾದಾಗ ಇಲ್ಲಿನ ಜನರೂ ಸಾಕಷ್ಟು ನಿರೀಕ್ಷೆ
ಇಟ್ಟುಕೊಂಡಿದ್ದರು. ನಮ್ಮ ಭಾಗಕ್ಕೆ ಸರ್ಕಾರವೇ ಪ್ರತಿಪವರ್ಷ ಬರುತ್ತದೆ. ನಮ್ಮ ಭಾಗದ ಅಭಿವೃದಿಟಛಿಯ ಚರ್ಚೆಗೆ ಹತ್ತು ದಿನ ಕಲಾಪ ನಡೆಯುತ್ತದೆ ಎಂಬ ಆಶಾಭಾವನೆ ಹೊಂದಿದ್ದರು. ಆದರೆ, ಪ್ರತಿವರ್ಷದಂತೆ ಈ ಬಾರಿಯೂ ಹತ್ತು ದಿನ ಜಾತ್ರೆಗೆ ಸೀಮಿತವಾದಂತಾಯಿತು.

ತುಸು ಸಂತಸ: ಅಧಿವೇಶನದಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ, ಕರ್ನಾಟಕ ನೀರಾವರಿ ನಿಗಮ, ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ದಿ ನಿಗಮ, ಸಕ್ಕರೆ ನಿರ್ದೇಶಕರು ಮತ್ತು ಕಬ್ಬು ಅಭಿವೃದ್ದಿ ಆಯುಕ್ತರ ಕೇಂದ್ರ, ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಪ್ರತ್ಯೇಕ ಮಂಡಳಿ ಸೇರಿ ಏಳು ಇಲಾಖೆಗಳ ಒಂಬತ್ತು ಕಚೇರಿಗಳ ಸ್ಥಳಾಂತರ ತೀರ್ಮಾನ ಈ ಭಾಗದ ಜನರಿಗೆ ಸ್ವಲ್ಪ ಮಟ್ಟಿಗೆ ಸಂತಸ ತರುವ ವಿಚಾರ. ಆದರೆ, ಅವೆಲ್ಲವೂ ಸುವರ್ಣಸೌಧದಲ್ಲಿಯೇ ಕಾರ್ಯನಿರ್ವ ಹಿಸಬೇಕು ಎಂಬುದು ಜನರ ಒತ್ತಾಸೆಯಾಗಿದೆ.

ಚರ್ಚೆಯೇ ಆಗಲಿಲ್ಲ
ಸಾಲ ನೀಡಿರುವ ಖಾಸಗಿ ಲೇವಾದೇವಿದಾರರಿಂದ ರೈತರಿಗೆ ವಿಮುಕ್ತಿ ಕೊಡಿಸುವ ಕರ್ನಾಟಕ ಋಣ ಪರಿಹಾರ ವಿಧೇಯಕ,
(ಸುಗ್ರೀವಾಜ್ಞೆ ಮೂಲಕ ರಾಷ್ಟ್ರಪತಿಗೆ ಕಳುಹಿಸಿರುವುದು) ಹಾಗೂ ರೈತರು ಕೃಷಿಗಾಗಿ ಪಡೆದುಕೊಂಡಿರುವ ಸಾಲದ ಮೊತ್ತಕ್ಕಿಂತ (ಅಸಲು) ಬಡ್ಡಿ ಹೆಚ್ಚು ವಿಧಿಸುವುದನ್ನು ನಿಯಂತ್ರಿಸುವ ಉದ್ದೇಶದಿಂದ ಕಾಂಗ್ರೆಸ್‌ನ ಶರಣಪ್ಪ ಮಟ್ಟೂರ ಅವರು ವಿಧಾನ ಪರಿಷತ್‌ನಲ್ಲಿ ಮಂಡಿಸಿರುವ ಕರ್ನಾಟಕ ಅಸಲು ಹಣಕ್ಕಿಂತ ಹೆಚ್ಚು ಬಡ್ಡಿ ವಿಧಿಸುವ ನಿಷೇಧ ವಿಧೇಯಕಗಳ( ಖಾಸಗಿ) ಬಗ್ಗೆ ಚರ್ಚೆಯೇ ಆಗಲಿಲ್ಲ.

15ರಿಂದ 18 ಕೋಟಿ ರೂ. ವೆಚ್ಚ?
ಕಳೆದ ಬಾರಿ ಅಧಿವೇಶನಕ್ಕೆ 22 ಕೋಟಿ ರೂ. ವೆಚ್ಚವಾಗಿತ್ತು. ಈ ಬಾರಿ ಅದನ್ನು 15 ಕೋಟಿ ರೂ.ಗೆ ಇಳಿಸುವ ಪ್ರಯತ್ನ ನಡೆದಿದೆ ಎಂದು ಸಚಿವಾಲಯದ ಅಧಿಕಾರಿಗಳು ಹೇಳುತ್ತಾರೆ. ಆದರೆ, ದರ ಹೆಚ್ಚಳ ಮತ್ತಿತರ ಕಾರಣಗಳಿಂದ 15 ರಿಂದ 18 ಕೋಟಿ ರೂ. ಈ ಅಧಿವೇಶನಕ್ಕೂ ವೆಚ್ಚವಾಗಬಹುದು. ವಸತಿ, ಸಾರಿಗೆ, ಊಟೋಪಚಾರದ ಲೆಕ್ಕ ಬಂದ ನಂತರ ಸ್ಪಷ್ಟತೆ ಸಿಗಲಿದೆ ಎಂದು ತಿಳಿಸುತ್ತಾರೆ. ಅಧಿವೇಶನಕ್ಕೆ ಹಾಜರಾಗುವ ಪ್ರತಿ ಸದಸ್ಯರಿಗೆ 2 ಸಾವಿರ ರೂ. ಭತ್ಯೆ, ಅಧಿಕಾರಿ, ಸಿಬ್ಬಂದಿ ಭತ್ಯೆ ಸೇರಿ ಒಂದು ದಿನಕ್ಕೆ ಕನಿಷ್ಠ 1.50 ಕೋಟಿ ರೂ. ಅಧಿವೇಶನಕ್ಕೆ ವೆಚ್ಚ ದ ಅಂದಾಜು ಮಾಡಲಾಗಿದೆ.  

ಎಸ್.  ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.