ಸರ್ಕಾರಕ್ಕೆ ಕಂಟಕವಿದೆಯೇ? ಅಲ್ಲೊಬ್ಬ ಮೇಲಿದ್ದಾನೆ; HDK ಹೇಳಿದ್ದೇನು!
Team Udayavani, Dec 24, 2018, 3:25 PM IST
ಬಾಗಲಕೋಟೆ: ರಾಜ್ಯ ಸಚಿವ ಸಂಪುಟ ಪುನಾರಚನೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಇದರೊಂದಿಗೆ ಭಾರತೀಯ ಜನತಾ ಪಕ್ಷ ಕೂಡಾ ಬೆಳವಣಿಗೆ ಮೇಲೆ ಕಣ್ಣಿಟ್ಟಿದ್ದರೆ, ಮತ್ತೊಂದೆಡೆ ಸರ್ಕಾರದ ಅಳಿವು, ಉಳಿವಿನ ಪ್ರಶ್ನೆ ಬಗ್ಗೆ ಸಿಎಂ ಕುಮಾರಸ್ವಾಮಿ ಮಾರ್ಮಿಕವಾಗಿ ತಿರುಗೇಟು ನೀಡಿದ್ದಾರೆ.
ಸಂಪುಟದಲ್ಲಿ ಸಚಿವ ಕೈತಪ್ಪಿರುವುದಕ್ಕೆ ರಾಮಲಿಂಗಾರೆಡ್ಡಿ, ರಮೇಶ್ ಜಾರಕಿಹೊಳಿ, ಶಾಮನೂರು ಸೇರಿದಂತೆ ಕೆಲವು ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲ ಪಕ್ಷ ವಿರೋಧಿ ಚಟುವಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಕಾಂಗ್ರೆಸ್ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಸೋಮವಾರ ಈ ಬೆಳವಣಿಗೆ ಕುರಿತು ಕುಮಾರಸ್ವಾಮಿ ಅವರನ್ನು ತಮ್ಮ ವಿರುದ್ಧ ಮಾಸ್ಟರ್ ಫ್ಲ್ಯಾನ್ ನಡೆಸುತ್ತಿದ್ದಾರೆಯೇ ಎಂಬ ಸುದ್ದಿಗಾರರು ಪ್ರಶ್ನಿಸಿದಾಗ, ಅಲ್ಲೊಬ್ಬ ಮೇಲಿದ್ದಾನೆ, ಅವನೇನು ಮಾಡ್ಬೇಕು ಮಾಡುತ್ತಾನೆ ಎಂದು ಮಾರ್ಮಿಕವಾಗಿ ಉತ್ತರಿಸಿದರು.
ತಂತ್ರಗಾರಿಕೆ ಮಾನವ ಸಹಜ ಪ್ರಕ್ರಿಯೆ. ನಾನ್ಯಾಕೆ ಈ ಬಗ್ಗೆ ಮಾತನಾಡ್ಲಿ. ಕಾಂಗ್ರೆಸ್ ಪಕ್ಷದ ತೀರ್ಮಾನಗಳ ಬಗ್ಗೆ ನನಗೆ ಮಿತಿಗಳಿವೆ. ಸಮಸ್ಯೆ, ಅಸಮಾಧಾನವನ್ನು ಕಾಂಗ್ರೆಸ್ ಹೈಕಮಾಂಡ್, ಪಕ್ಷದ ಮುಖಂಡರು ಬಗೆಹರಿಸುತ್ತಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ