ಜೆಡಿಎಸ್‌ ಮುಖಂಡ ಪ್ರಕಾಶ್‌ ಕಗ್ಗೊಲೆ:ಮಂಡ್ಯದಲ್ಲಿ ಬಿಗುವಿನ ವಾತಾವರಣ


Team Udayavani, Dec 25, 2018, 10:10 AM IST

2-aa.jpg

ಮಂಡ್ಯ/ಮದ್ದೂರು: ಮದ್ದೂರು ತಾಲೂಕು ತೊಪ್ಪನಹಳ್ಳಿ ಜೋಡಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿದಾರನಾಗಿದ್ದ ಜೆಡಿ ಎಸ್‌ ಮುಖಂಡ ಪ್ರಕಾಶ್‌ ಅವರನ್ನು ಹಂತಕರು ಸೋಮವಾರ ಮಧ್ಯಾಹ್ನ ಭೀಕರವಾಗಿ ಕೊಲೆ ಮಾಡಿ ರುವ ಘಟನೆ
ಬೆಂಗಳೂರು-ಮೈಸೂರು ಹೆದ್ದಾರಿಯ ಮದ್ದೂರಿನ ಟಿ.ಬಿ.ಸರ್ಕಲ್‌ ಬಳಿಯ ತಗ್ಗಹಳ್ಳಿ ಚಂದ್ರುಗೆ ಸೇರಿದ
ಹೀರೋ ಹೋಂಡಾ ಷೋರೂಂ ಎದುರು ನಡೆದಿದೆ.

ಜೆಡಿಎಸ್‌ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಲಲಿತಾ ಪತಿ ಪ್ರಕಾಶ್‌(50) ಕೊಲೆಯಾದವರು. 2016ರ ಡಿಸೆಂಬರ್‌ 25ರಂದು ತೊಪ್ಪನಹಳ್ಳಿ ಗ್ರಾಮ ದಲ್ಲಿ ನಡೆದ ಜೆಡಿ ಎಸ್‌ ಕಾರ್ಯಕರ್ತರ ಜೋಡಿ ಕೊಲೆ ಪ್ರಕ ರ ಣಕ್ಕೆ ಪ್ರಕಾ ಶ್‌ ಪ್ರಮುಖ ಸಾಕ್ಷಿ ದಾರರಾಗಿದ್ದರು. ಹೆಲ್ಮೆಟ್‌ ಧರಿಸಿ ಬೈಕ್‌ ನಲ್ಲಿ ಬಂದ ನಾಲ್ಕೈದು ಜನರ ಗುಂಪು ಪ್ರಕಾಶ್‌ ಕುಳಿತಿದ್ದ ಕಾರಿನಲ್ಲೇ ಭೀಕರವಾಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಹಂತ ಕರು ಪ್ರಕಾಶ್‌ ದೇಹದ ವಿವಿಧ ಭಾಗಗಳಿಗೆ 15ರಿಂದ 20 ಬಾರಿ ಇರಿದಿದ್ದಾರೆ. ಎದೆ, ಕಂಕುಳು, ಮುಂಗೈಗೆ ಮನ ಬಂದಂತೆ ಇರಿ ದಿದ್ದು, ತೀವ್ರ ರಕ್ತ ಸ್ರಾವದಿಂದ ಮದ್ದೂರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಘಟನೆ ಏನಾಯ್ತು? ಪ್ರಕಾಶ್‌ ಮೂಲತಃ ಎಳ ನೀರು ವ್ಯಾಪಾರಿ. ತಾವು ಬೆಳೆದ ಎಳನೀರನ್ನು ಮು ಂಬೈಗೆ ಸಾಗಿಸುತ್ತಿದ್ದರು. ಸೋಮ ವಾರ ಬೆಳಗ್ಗೆ ಪ್ರವಾ ಸಿ ಮಂದಿರದ ಬಳಿ ಸ್ನೇಹಿತರ ಜೊತೆ ಕಾಲ ಕಳೆಯುತ್ತಿದ್ದರು. ಪ್ರವಾ ಸಿ ಮಂದಿರದಲ್ಲಿ ಸ್ನೇಹಿತರೊಂದಿಗೆ ಊಟ ಮುಗಿಸಿ ಎಳನೀರು ಖರೀದಿ ಸಿದ ವ್ಯಾಪಾರಿಗಳಿಂದ ಹಣ ಪಡೆದುಕೊಳ್ಳಲು ಸ್ನೇಹಿತರಾದ ಮೂಗಣ್ಣ, ವಿನಯ್‌ ಮತ್ತು ಇನ್ನಿತರರ ಜೊತೆ ಕಾರಿನಲ್ಲಿ ಎಳನೀರು ಮಾರು ಕಟ್ಟೆ ಬಳಿಗೆ ತೆರಳಲು ಹೊರಟರು ಎಂದು ಗೊತ್ತಾಗಿದೆ.

ಈ ಮಧ್ಯೆ ತಗ್ಗ ಹಳ್ಳಿ ಚಂದ್ರು ಹೀರೋ ಹೋಂಡಾ ಷೋರೂಂ ಬಳಿ ಕಾರಿಗೆ ಸ್ಟಿಕ್ಕರ್‌ ಅಂಟಿ ಸಲು ಕಾರನ್ನು ನಿಲ್ಲಿಸಿದ್ದರು. ಸ್ಟಿಕ್ಕರ್‌ ತೆಗೆದುಕೊಳ್ಳಲು ಮೂಗಣ್ಣ ಮತ್ತು ವಿನಯ್‌ ಕೆಳ ಗಿ ಳಿ ದಿ ದ್ದ ರು. ಇದೇ ಸಮ ಯಕ್ಕೆ ಬೈಕ್‌ನಲ್ಲಿ ಬಂದ ಹಂತಕರು ಏಕಾಏಕಿ ಕಾರಿನೊಳಗೆ ಕುಳಿತಿದ್ದಾರೆ. ಕಾರಿನ ಎಲ್ಲಾ ಗ್ಲಾಸ್‌ ಗ ಳನ್ನು ಮುಚ್ಚಿ ಪ್ರಕಾಶ್‌ ಮೇಲೆ ಚಾಕುವಿನಿಂದ ಮನ ಬಂದಂತೆ ಇರಿದರಲ್ಲದೆ, ಹಿಂಭಾಗದ ಸೀಟಿಗೆ ಮಲಗಿಸಿಕೊಂಡು ಹಲ್ಲೆ ನಡೆಸಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಕಾಶ್‌ನನ್ನು ಬಿಟ್ಟು ದುಷ್ಕರ್ಮಿಗಳು ಸ್ಥಳ ದಿಂದ ಕ್ಷಣ ಮಾತ್ರದಲ್ಲಿ ಪರಾರಿಯಾದರು ಎಂದು ಹೇಳಲಾಗಿದೆ. ಇದನ್ನು ಕಂಡ ಪ್ರಕಾಶ್‌ ಸ್ನೇಹಿ ತ ರಾದ ಮೂಗಯ್ಯ ಹಾಗೂ ವಿನಯ್‌ ತಕ್ಷ ಣವೇ ಅವ ರನ್ನು ಮದ್ದೂರು ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ಕರೆ ತಂದರು. ಅಷ್ಟರಲ್ಲಿ ಪ್ರಕಾಶ್‌ ಕೊನೆಯುಸಿರೆಳೆದಿದ್ದರು.

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಿ.ಶಿವಪ್ರಕಾಶ್‌, ಮಳವಳ್ಳಿ ಡಿವೈಎಸ್ಪಿ ಶೈಲೇಂದ್ರ, ಸಿಪಿಐಗಳಾದ ಎನ್‌. ವಿ.ಮಹೇಶ್‌, ನವೀನ್‌ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಘಟನೆ ಹಿನ್ನೆಲೆಯಲ್ಲಿ ಮದ್ದೂರು ಹಾಗೂ ತೊಪ್ಪನಹಳ್ಳಿ ಗ್ರಾಮದಲ್ಲಿ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿದೆ. ಪ್ರಕಾಶ್‌ ಶವಾಗಾರದಲ್ಲಿ ಇರಿ ಸಲಾಗಿದ್ದು, ಸ್ಥಳದಲ್ಲಿ ಜನ ಜಂಗುಳಿ ಜಮಾಯಿಸಿದೆ.

ಪೊಲೀಸ್‌ ರಕ್ಷಣೆ ನಿರಾಕರಣೆ
ತೊಪ್ಪನಹಳ್ಳಿ ಜೋಡಿ ಕೊಲೆಯ ಪ್ರಮುಖ ಸಾಕ್ಷೀದಾರನಾಗಿದ್ದ ಪ್ರಕಾಶ್‌ಗೆ ಜೀವಭಯವಿದ್ದ ಕಾರಣ ಪೊಲೀಸ್‌ ರಕ್ಷಣೆ ಪಡೆಯುವಂತೆ ಸೂಚಿಸಲಾಗಿತ್ತು. ಆದರೆ, ಅದನ್ನು ಪ್ರಕಾಶ್‌ ನಿರಾಕರಿಸಿ ಓಡಾಡುತ್ತಿದ್ದನು. ಒಮ್ಮೆ ಪೊಲೀಸ್‌ ರಕ್ಷಣೆ ಪಡೆದಿದ್ದರೆ ಕೊಲೆ ಸಂಭವಿಸುತ್ತಿರಲಿಲ್ಲವೆಂಬ ಮಾತುಗಳೂ ಕೇಳಿ ಬರುತ್ತಿವೆ.

ಮರು ಕಳಿಸಿದ ಹಳೆಯ ದ್ವೇಷ 

ಎರಡು ವರ್ಷದ ಹಿಂದೆ ತೊಪ್ಪನಹಳ್ಳಿಯಲ್ಲಿ ಗ್ರಾಪಂ ಚುನಾ ವಣೆ ಹಿನ್ನೆಲೆಯಲ್ಲಿ ಫ್ಲೆಕ್ಸ್‌ ಹರಿದ ವಿಚಾರಕ್ಕೆ ಜೆಡಿಎಸ್‌ ಕಾರ್ಯಕರ್ತರಾದ ನಂದೀಶ್‌ ಹಾಗೂ ಮುತ್ತು ರಾಜು ಅವ ರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಮುತ್ತು ರಾಜು, ರಾಮ ಲಿಂಗ, ಜಗ ದೀಶ, ದೀಪಕ್‌, ಯೋಗೇಶ್‌, ಸ್ವಾಮಿ, ಶಿವ ರಾಜು, ಶಿವಣ್ಣ, ಪ್ರತಾಪ್‌ ಸೇರಿ 19 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದ ರಲ್ಲಿ 17 ಮಂದಿ ಜಾಮೀ ನಿನ ಮೇಲೆ ಹೊರಗೆ ಬಂದಿದ್ದರು. ಜಗದೀಶ್‌ ಹಾಗೂ ಮುತ್ತು ರಾಜು ಇನ್ನೂ ಜೈಲಿ ನಲ್ಲೇ ಇದ್ದರು. ಮುತ್ತಪ್ಪ ಎಂಬಾತ ಹೃದಯಾಘಾತದಿಂದ ಸಾವನ್ನಪ್ಪಿದ್ದರು.

ಬೆಂಬಲಿಗರ ಆಕ್ರೋಶ 

ಜೆಡಿ ಎಸ್‌ ಮುಖಂಡ ತೊಪ್ಪನಹಳ್ಳಿ ಪ್ರಕಾಶ್‌ ಹತ್ಯೆ ಖಂಡಿಸಿ ಜೆಡಿಎಸ್‌ ಕಾರ್ಯ ಕರ್ತರು ಮದ್ದೂರು ಸಾರ್ವಜನಿಕ ಆಸ್ಪತ್ರೆ ಎದುರಿನ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಇದ ರಿಂದ ಹೆದ್ದಾರಿ ವಾಹನ ಸಂಚಾರದಲ್ಲಿ ತೀವ್ರ ಅಸ್ತ ವ್ಯಸ್ತ ಉಂಟಾ ಗಿತ್ತು.

ಉದ್ರಿಕ್ತ ಪ್ರಕಾಶ್‌ ಬೆಂಬಲಿಗರ ಗುಂಪೊಂದು ಆಸ್ಪತ್ರೆಗೆ ಮುತ್ತಿಗೆ ಹಾಕಿ ದಾಂಧಲೆ ನಡೆಸಿದೆ. ಗ್ರಾಮಸ್ಥರು ಕಿಟಕಿ ಗಾಜುಗಳನ್ನು ಪುಡಿಗಟ್ಟಿದ್ದಾರೆ.ಇದರಿಂದ ಆಸ್ಪತ್ರೆ ಸುತ್ತ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

20 ಕಿ.ಮೀ. ವ ರೆಗೆ ಟ್ರಾಫಿಕ್‌ ಜಾಮ್‌

ಮಂಡ್ಯ: ತೊಪ್ಪನಹಳ್ಳಿ ಪ್ರಕಾಶ್‌ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಸಂಜೆ 4 ಗಂಟೆಯಿಂದಲೇ ಭಾರೀ ಸಂಖ್ಯೆ ಯಲ್ಲಿ ಜೆಡಿ ಎಸ್‌ ಕಾರ್ಯ ಕ ರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದರಿಂದ ವಾಹನಗಳು ಚಲಿಸಲಾಗದೆ ಅಲ್ಲೇ ನಿಂತಿದ್ದವು. ಕಿಲೋಮೀಟರ್‌ಗಟ್ಟಲೆ ಟ್ರಾಫಿ ಕ್‌ ಜಾಮ್‌ ಉಂಟಾಗಿತ್ತು.

ಹೆದ್ದಾರಿ ಪ್ರತಿಭಟನೆಯಿಂದ ವಾಹನಗಳ ಮಾರ್ಗ ಬದಲಾವಣೆ ಮಾಡುವುದು ಪೊಲೀಸರಿಗೆ ಅನಿವಾರ್ಯವಾಯಿತು. ಹೀಗಾಗಿ ಮಂಡ್ಯದಿಂದ ಬರುವ ವಾಹನಗಳನ್ನು ಮಳವಳ್ಳಿ ಮಾರ್ಗ ವಾಗಿ ಬೆಂಗಳೂರಿಗೆ ಕಳುಹಿಸಲಾಗುತ್ತಿತ್ತು. ಅದೇ ರೀತಿ ಬೆಂಗ ಳೂರಿನಿಂದ ಬರುವ ವಾಹನಗಳನ್ನು ಚನ್ನಪಟ್ಟಣದಿಂದ ಹಲಗೂರು, ಮಳ ವಳ್ಳಿ ಮಾರ್ಗವಾಗಿ ಮಂಡ್ಯ ಹಾಗೂ ಮೈಸೂರಿಗೆ ಕಳುಹಿಸಲಾಗುತ್ತಿತ್ತು. ರಾತ್ರಿಯಾದರೂ ರಸ್ತೆ ತಡೆ ಮುಂದುವರೆ ದಿದ್ದರಿಂದ ಸುಮಾರು 20 ಕಿ.ಮೀ. ದೂರದವ ರೆಗೆ ಟ್ರಾಫಿ ಕ್‌ ಜಾಮ್‌ ಆಗಿತ್ತು. ಒಂದು ವಾಹನವನ್ನೂ ಚಲಿ ಸಲು ಬಿಡ ದಂತೆ ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ ರು.

ಅಘೋಷಿತ ಬಂದ್‌

 ಜೆಡಿಎಸ್‌ ಮುಖಂಡ ಪ್ರಕಾಶ್‌ ಹತ್ಯೆ ಪ್ರಕ ರ ಣದ ಹಿನ್ನೆಲೆಯಲ್ಲಿ ಮದ್ದೂರು ಪಟ್ಟಣದಲ್ಲಿ ಅಘೋಷಿತ ಬಂದ್‌ ನಿರ್ಮಾ ಣವಾಗಿತ್ತು. ಮುನ್ನೆಚ್ಚರಿಕೆಯಾಗಿ ಮದ್ದೂರಿನಲ್ಲಿ ವರ್ತಕರು ಅಂಗಡಿ-ಮುಂಗ ಟ್ಟುಗಳನ್ನು ಬಂದ್‌ ಮಾಡಿದ್ದರು.

ಸ್ವಾಮಿ ಗ್ಯಾಂಗ್‌ ಕೃತ್ಯ ನಡೆಸಿರುವ ಶಂಕೆ ಜೆಡಿಎಸ್‌ ಮುಖಂಡ ಪ್ರಕಾಶ್‌ ಹತ್ಯೆ ಪ್ರಕರಣದ ಹಿಂದೆ ಸ್ವಾಮಿ ಎಂಬಾತನ ಕೈವಾ ಡ ವಿದೆ ಎಂದು ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದಾರೆ. ತೊಪ್ಪನಹಳ್ಳಿಜೋ ಡಿ ಕೊಲೆ ಪ್ರಕರಣದಲ್ಲಿ 19 ಆರೋಪಿಗಳಲ್ಲಿ ಜಾಮೀನು ಪಡೆ ದು ಕೊಂಡಿ ರುವ 17 ಮಂದಿ ಪೈಕಿ ಸ್ವಾಮಿ ಕೂಡ ಒಬ್ಬ ನಾ ಗಿ ದ್ದಾನೆ. ಈತ ಪ್ರಕಾಶ್‌ ಕೊಲೆ ಮಾಡಲು ಹಂತ ಕ ರಿ ಗೆ ಸುಪಾರಿ ಕೊಟ್ಟಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ.

ತೊಪ್ಪನಹಳ್ಳಿಗೆ ಸಿಎಂ ಬರುವಂತೆ ಗ್ರಾಮಸ್ಥರ ಪಟ್ಟು ಜೆಡಿ ಎಸ್‌ ಮುಖಂಡ ಪ್ರಕಾಶ್‌ ಹತ್ಯೆ ಪ್ರಕರ ಣ ಖಂಡಿಸಿ ಮದ್ದೂರು ತಾಲೂಕಿನ ತೊಪ್ಪನಹಳ್ಳಿ ಗ್ರಾಮಸ್ತರು ಆಕ್ರೋಶ ವ್ಯಕ್ತ ಪಡಿಸಿದರಲ್ಲದೆ, ಮುಖ್ಯ ಮಂತ್ರಿ ಎಚ್‌. ಡಿ. ಕುಮಾರ ಸ್ವಾಮಿ ಸ್ಥಳಕ್ಕೆ ಆಗಮಿಸುವಂತೆ ಬಿಗಿ ಪಟ್ಟು ಹಿಡಿದು ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟಿಸಿದರು. ಈ ಹಿಂದೆ ತೊಪ್ಪನಹಳ್ಳಿ ಯಲ್ಲಿ ಜೋಡಿ ಕೊಲೆಯಾಗಿತ್ತು. ಆಗಲೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲಿಲ್ಲ.ಈಗ ಜೆಡಿಎಸ್‌ ಮುಖಂಡನ ಹತ್ಯೆಯಾಗಲು ಪೊಲೀಸ್‌ ಇಲಾಖೆ ನಿರ್ಲಕ್ಷ್ಯವೇ ಕಾರಣ. ತಕ್ಷ ಣವೇ ರೌಡಿಗಳ ಅಟ್ಟಹಾಸಕ್ಕೆ ಬ್ರೇಕ್‌ ಹಾಕುವಂತೆ ಗ್ರಾಮಸ್ಥರು ಒತ್ತಾಯಿಸಿದರು. 

ಸಂಸದ  ಶಿವರಾಮೇಗೌಡರಿಗೆ ಘೇರಾವ್‌
ಜೆಡಿಎಸ್‌ ಮುಖಂಡ ಪ್ರಕಾಶ್‌ ಕೊಲೆ ಪ್ರಕರಣದ ಸುದ್ದಿ ತಿಳಿದು ಸಂಸದ ಎಲ್‌.ಆರ್‌.ಶಿವರಾಮೇಗೌಡ ಕಾರಿ ನಲ್ಲಿ ತೆರ ಳಲು ಮುಂದಾದಾಗ ಜೆಡಿಎಸ್‌ ಕಾರ್ಯ ಕ ರ್ತರು ಅವ ರನ್ನು ಅಡ್ಡ ಗಟ್ಟಿ ಘೇರಾವ್‌ ಹಾಕಿ ಪ್ರತಿಭಟನೆಗೆ ಕರೆ ತಂದ ಘಟನೆಯೂ ನಡೆ ಯಿತು. ಖಾಸಗಿ ಕಾರ್ಯ ಕ್ರ ಮವೊಂದರಲ್ಲಿ ಭಾಗವಹಿಸಿ ಬೆಂಗಳೂರಿಗೆ ಕಾರಿನಲ್ಲಿ ವಾಪಸ್‌ ತೆರಳುತ್ತಿದ್ದ ಎಲ್‌.ಆರ್‌.ಶಿವರಾಮೇಗೌಡರನ್ನು ಕಂಡು ಅಡ್ಡಗಟ್ಟಿದ ಜೆಡಿಎಸ್‌ ಕಾರ್ಯಕರ್ತರು, ಪಕ್ಷದ ಮುಖಂಡರೊಬ್ಬರು ಕೊಲೆ ಯಾಗಿರುವುದನ್ನು ಕಂಡೂ ಕಾಣದವರಂತೆ ಹೋಗುತ್ತಿರುವುದಕ್ಕೆ ಆಕ್ರೋಶ ವ್ಯಕ್ತ ಪಡಿಸಿದರು. ಕಾರ್ಯ ಕ ರ್ತರ ಒತ್ತಡಕ್ಕೆ ಮಣಿದ ಸಂಸದ ಶಿವ ರಾಮೇಗೌಡರು ಪ್ರತಿಭಟನೆಗೆ ಹಾಜರಾದರು. ಬಳಿಕ ಬೆಂಗಳೂರಿಗೆ ತೆರಳಲಾಗದೆ ಪ್ರವಾಸಿ ಮಂದಿರಕ್ಕೆ ಬಂದು ಕುಳಿ ತರು.

ಶಾಂತಿ ಕಾಪಾಡಲು ಸಚಿವ ತಮ್ಮಣ್ಣ  ಮನವಿ
ಜೆಡಿಎಸ್‌ ಕಾರ್ಯಕರ್ತರು ಹಾಗೂ ಪ್ರಕಾಶ್‌ ಬೆಂಬಲಿಗರು ದಯಮಾಡಿ ಶಾಂತಿಯುತ ವಾಗಿರುವಂತೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಮನವಿ ಮಾಡಿದ್ದಾರೆ. ಮಂಗಳವಾರ(ಡಿ.25) ಮುಖ್ಯಮಂತ್ರಿ ಕುಮಾರಸ್ವಾಮಿ ಮದ್ದೂರಿಗೆ ಆಗಮಿಸಲಿದ್ದು, ಇದನ್ನೇ ದ್ವೇಷ ಕಟ್ಟಿಕೊಂಡು ಮುಂದುವರಿಸುವುದು ಬೇಡ ಎಂದು ಕೋರಿದ್ದಾರೆ.

ಅವರು ತಪ್ಪು ಮಾಡಿದ್ದಾರೆ ಎಂದು ನಾವೂ ತಪ್ಪು ಮಾಡಬಾರದು. ಯಾರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ, ದಯಮಾಡಿ ಎಲ್ಲರೂ ಶಾಂತಿಯುತವಾಗಿರಿ. ಈಗಾಗಲೇ ಸಂಬಂಧಪಟ್ಟ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ತಪ್ಪಿತಸ್ಥರು ಯಾರೇ ಆದರೂ ಪೊಲೀಸರು ಕ್ರಮಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.