ನರ ಭಕ್ಷಕ ಚಿರತೆಗೆ ಬಾಲೆ ಬಲಿ
Team Udayavani, Dec 26, 2018, 7:34 AM IST
ಕಂಪ್ಲಿ: ಕಳೆದ 15 ದಿನಗಳ ಹಿಂದೆ ಚಿರತೆ ಬಾಲಕನನ್ನು ಹೊತ್ತೂಯ್ದು ಕೊಂದು ಹಾಕಿದ ಘಟನೆ ಮಾಸುವ ಮುನ್ನವೇ ಮತ್ತೂಬ್ಬ ಬಾಲಕಿ ಚಿರತೆಗೆ ಬಲಿಯಾಗಿರುವ ಘಟನೆ ತಾಲೂಕಿನ ದೇವಲಾಪುರ ಗ್ರಾಮದ ಹೊಲವೊಂದರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ದೇವಲಾಪುರದ ಪಂಪಾಪತಿ ಎಂಬುವರ ಪುತ್ರಿ ಜಯಸುಧಾ (12) ಚಿರತೆಗೆ ಬಲಿಯಾದ ಬಾಲಕಿ. ಪೋಷಕರೊಂದಿಗೆ ಹೊಲದಲ್ಲಿದ್ದಾಗ ಈ ಘಟನೆ ಸಂಭವಿಸಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ಓದುತ್ತಿರುವ ಜಯಸುಧಾ ಮಂಗಳವಾರ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಶಾಲೆಗೆ ರಜೆ ಇರುವುದರಿಂದ ಬೆಳಗ್ಗೆ ಪೋಷಕರೊಂದಿಗೆ ಹತ್ತಿ ಹೊಲಕ್ಕೆ ಹೋಗಿದ್ದಳು. ಈ ವೇಳೆ ಹತ್ತಿ ಹೊಲದಲ್ಲಿ ಹೊಂಚು ಹಾಕಿ ಕುಳಿತಿದ್ದ ಚಿರತೆ ಬಾಲಕಿ ಮೇಲೆರಗಿ ಎಳೆದೊಯ್ದಿದೆ. ಬಾಲಕಿ ಚೀರಾಟ ಕಂಡು ಸ್ಥಳದಲ್ಲಿದ್ದ ತಂದೆ-ತಾಯಿ ಹಾಗೂ ಅಕ್ಕಪಕ್ಕದ ಜಮೀನುಗಳಲ್ಲಿ ಕೆಲಸ ಮಾಡುತ್ತಿದ್ದವರು ಚಿರತೆಯನ್ನು ಬೆನ್ನಟ್ಟಿದ್ದಾರೆ.
ಜನರನ್ನು ಕಂಡ ಚಿರತೆ ಬಾಲಕಿಯ ಕುತ್ತಿಗೆಗೆ ಬಾಯಿ ಹಾಕಿ ರಕ್ತ ಹೀರಿ ಬಳಿಕ ಅಲ್ಲಿಯೇ ಬಿಟ್ಟು ಓಡಿ ಹೋಗಿದೆ. ತಂದೆ ಪಂಪಾಪತಿ ಹಾಗೂ ಗ್ರಾಪಂ ಸದಸ್ಯ ರಾಮನಗೌಡ ಬಾಲಕಿಯನ್ನು ಕೂಡಲೇ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತಂದರಾದರೂ ಮಾರ್ಗಮಧ್ಯೆ ಬಾಲಕಿ ಅಸುನೀಗಿದ್ದಾಳೆ ಎಂದು ವೈದ್ಯರು ದೃಢಪಡಿಸಿದ್ದಾರೆ.
5 ಲಕ್ಷ ರೂ. ಪರಿಹಾರ: ವಿಷಯ ತಿಳಿದು ದೇವಲಾಪುರ ಗ್ರಾಮಕ್ಕೆ ಆಗಮಿಸಿದ ಶಾಸಕ ಜೆ.ಎನ್. ಗಣೇಶ್, ಜಿಲ್ಲಾಧಿಕಾರಿ ಡಾ| ರಾಮ್ ಪ್ರಸಾತ್ ಮನೋಹರ್, ಎಸ್ಪಿ ಅರುಣ್ ರಂಗರಾಜನ್, ಬಳ್ಳಾರಿ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ
ಡಾ| ಪಿ.ರಮೇಶ್ ಹಾಗೂ ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಅವರು ಮೃತ ಬಾಲಕಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಶಾಸಕ ಜೆ.ಎನ್.ಗಣೇಶ್ ಅರಣ್ಯ ಇಲಾಖೆ ಪರವಾಗಿ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಚೆಕ್ ಹಸ್ತಾಂತರಿಸಿದರು.
ಗ್ರಾಮಸ್ಥರ ಪ್ರತಿಭಟನೆ
ಬಾಲಕಿ ದೇಹವನ್ನು ದೇವಲಾಪುರಕ್ಕೆ ತಂದ ಪೋಷಕರು, ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಪ್ರತಿಭಟಿಸಿದರು. ಚಿರತೆಗಳು ದಾಳಿ ನಡೆಸುವುದರಿಂದ ಜಮೀನುಗಳಿಗೆ ತೆರಳಲು ಭಯ ಎದುರಿಸುವಂತಾಗಿದೆ. ಅರಣ್ಯ ಇಲಾಖೆ
ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವವರೆಗೂ ಮೃತ ಬಾಲಕಿ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಪಟ್ಟು ಹಿಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ